AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಯನ್ ಖಾನ್​ ಡ್ರಗ್ಸ್​ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದ ಪ್ರಭಾಕರ್ ಸೇಲ್​ ಸಾವು; ವಕೀಲರಿಂದ ಮಾಹಿತಿ

ಎನ್​ಸಿಬಿ ಅಧಿಕಾರಿಗಳು ಸುಮಾರು 10 ಖಾಲಿ ಪೇಪರ್​ಗಳಿಗೆ ನನ್ನಿಂದ ಸಹಿ ಮಾಡಿಸಿಕೊಂಡಿದ್ದಾರೆ. ಸುಮಾರು 25 ಕೋಟಿ ರೂಪಾಯಿ ವಸೂಲಿ ಮಾಡಿದ ಬಗ್ಗೆ ನಡೆದ ದೂರವಾಣಿ ಸಂಭಾಷಣೆಯನ್ನೂ ನಾನು ಕೇಳಿದ್ದೇನೆ ಎಂದು ಪ್ರಭಾಕರ್ ಸೇಲ್​ ಹೇಳಿದ್ದರು.

ಆರ್ಯನ್ ಖಾನ್​ ಡ್ರಗ್ಸ್​ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದ ಪ್ರಭಾಕರ್ ಸೇಲ್​ ಸಾವು; ವಕೀಲರಿಂದ ಮಾಹಿತಿ
ಪ್ರಭಾಕರ್ ಸೇಲ್​
TV9 Web
| Edited By: |

Updated on:Apr 02, 2022 | 12:02 PM

Share

ಬಾಲಿವುಡ್​ ನಟ ಶಾರುಖ್ ಖಾನ್​ ಪುತ್ರ ಆರ್ಯನ್​ ಖಾನ್​ ಸಿಕ್ಕಿಬಿದ್ದಿದ್ದ ಡ್ರಗ್ಸ್​ ಪ್ರಕರಣದಲ್ಲಿ (Aryan Khan case) ಪ್ರಮುಖ ಸಾಕ್ಷಿಯಾಗಿದ್ದ ಪ್ರಭಾಕರ್​ ಸೇಲ್​ ನಿಧನರಾಗಿದ್ದಾರೆ. ಈಗ ಆರು ತಿಂಗಳ ಹಿಂದೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಮುಂಬೈನ ಕಾರ್ಡೇಲಿಯಾ ಕ್ರೂಸ್​ ಶಿಪ್​​ ಮೇಲೆ ದಾಳಿ ನಡೆಸಿತ್ತು. ಅದರಲ್ಲಿ ಡ್ರಗ್ಸ್​ ಪಾರ್ಟಿ ನಡೆಯುತ್ತಿತ್ತು ಎಂಬ ಆರೋಪದ ಮೇಲೆ ದಾಳಿ ನಡೆಸಲಾಗಿತ್ತು. ಹಾಗೇ, ಆರ್ಯನ್ ಖಾನ್​ ಕೂಡ ಸಿಕ್ಕಿಬಿದ್ದಿದ್ದರು. ಇದೆಲ್ಲ ಆಗಿದ್ದು 2021ರ ಅಕ್ಟೋಬರ್​ನಲ್ಲಿ. ನಂತರ ಆರ್ಯನ್ ಖಾನ್​ ಹಲವು ವಾರಗಳ ಕಾಲ ಜೈಲಿನಲ್ಲಿಯೇ ಇದ್ದು, ಸದ್ಯ ಷರತ್ತುಬದ್ಧ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ. ಪ್ರಸ್ತುತ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದ ಪ್ರಭಾಕರ್​ ಸೇಲ್​ ಅವರು ನಿನ್ನೆ ಮಧ್ಯಾಹ್ನ 4 ಗಂಟೆ ಸುಮಾರಿಗೆ, ಮುಹುಲ್​ ಏರಿಯಾದಲ್ಲಿರುವ ಚೆಂಬೂರ್​​ನಲ್ಲಿರುವ ಅವರ ನಿವಾಸದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸೇಲ್​ ಪರ ವಕೀಲರಾಗಿದ್ದ ತುಷಾರ್​ ಖಂಡಾರೆ ತಿಳಿಸಿದ್ದಾರೆ.

ಆರ್ಯನ್​ ಖಾನ್​ ಸಿಕ್ಕಿಬಿದ್ದ ಡ್ರಗ್ಸ್​ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಭಾಕರ್​ ಅವರನ್ನೂ ಎನ್​ಸಿಬಿ ಅಧಿಕಾರಿಗಳು ಈಗಾಗಲೇ ವಿಚಾರಣೆಗೆ ಒಳಪಡಿಸಿದ್ದರು.  ಇವರೊಬ್ಬ ಸ್ವತಂತ್ರ ಸಾಕ್ಷಿಯಾಗಿದ್ದಿದ್ದು, ಇನ್ನೊಬ್ಬ ಸಾಕ್ಷಿದಾರ ಕಿರಣ್​ ಗೋಸಾವಿ ಮತ್ತು ಈ ಪ್ರಕರಣ ಬೇಧಿಸುವಲ್ಲಿ ಪ್ರಮುಖ ರೂವಾರಿಯಾಗಿದ್ದ  ಸಮೀರ್ ವಾಂಖೆಡೆ (ಆಗ ಎನ್​ಸಿಬಿಯ ಅಧಿಕಾರಿಯಾಗಿದ್ದರು) ವಿರುದ್ಧವೂ ಆರೋಪ ಮಾಡಿದ್ದರು. ಎನ್​ಸಿಬಿ ಅಧಿಕಾರಿಗಳು ಸುಮಾರು 10 ಖಾಲಿ ಪೇಪರ್​ಗಳಿಗೆ ನನ್ನಿಂದ ಸಹಿ ಮಾಡಿಸಿಕೊಂಡಿದ್ದಾರೆ. ಸುಮಾರು 25 ಕೋಟಿ ರೂಪಾಯಿ ವಸೂಲಿ ಮಾಡಿದ ಬಗ್ಗೆ ನಡೆದ ದೂರವಾಣಿ ಸಂಭಾಷಣೆಯನ್ನೂ ನಾನು ಕೇಳಿದ್ದೇನೆ ಎಂದಿದ್ದರು. ಅಷ್ಟೇ ಅಲ್ಲ, ಕಿರಣ್​ ಗೋಸಾವಿಗೆ ತಾನು ಬಾಡಿಗಾರ್ಡ್ ಆಗಿದ್ದೆ, ಆದರೆ ಅವರ ಬಳಿ ಕೆಲಸ ಮಾಡುತ್ತಿದ್ದ ಇನ್ನಿತರರ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ ಎಂದು ಪ್ರಭಾಕರ್ ಹೇಳಿಕೊಂಡಿದ್ದರು.

ಕಿರಣ್​ ಗೋಸಾವಿ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದರು. ಆದರೆ ನಂತರ ಇವರ ವರುದ್ಧವೇ ಹಣ ಪಡೆದ ಆರೋಪ ಕೇಳಿಬಂದಿತ್ತು. ಮುಂಬೈ ಐಷಾರಾಮಿ ಹಡಗಿನ ಮೇಲೆ ದಾಳಿಯಾಗುತ್ತಿದ್ದಂತೆ ಕಿರಣ್​ ಗೋಸಾವಿ 50 ಲಕ್ಷ ರೂಪಾಯಿ ಪಡೆದಿದ್ದಾಗಿ ಇದೇ ಪ್ರಭಾಕರ್ ಸೇಲ್​ ಆರೋಪ ಮಾಡಿದ್ದರು. ಹೀಗಾಗಿ ಎನ್​ಸಿಬಿ ಪ್ರಭಾಕರ್​ ಅವರನ್ನು ಒಂದು ಪ್ರತಿಕೂಲ ಸಾಕ್ಷಿಯನ್ನಾಗಿ ಪರಿಗಣಿಸಿಕೊಂಡಿತ್ತು. ಅಂದರೆ ಈ ಪ್ರಕರಣದಲ್ಲಿ ಪ್ರಭಾಕರ್​ ಸೇಲ್​ ತಮ್ಮ ಪರವಾಗಿ ನಿಲ್ಲುತ್ತಾರೆ ಎಂದು ಭಾವಿಸಿದ್ದ ಎನ್​ಸಿಬಿಗೆ ಇವರು ಉಲ್ಟಾ ಹೊಡೆದಿದ್ದರು. ಎನ್​ಸಿಬಿ ವಿರುದ್ಧವೇ ಆರೋಪವನ್ನು ಮಾಡಿದ್ದರು.

ಇದನ್ನೂ ಓದಿ: ವೇದಿಕಾಗೆ ಯಾವ ರೀತಿಯ ಗಂಡ ಬೇಕು? ಮುಕ್ತವಾಗಿ ಹೇಳಿಕೊಂಡ ‘ಹೋಮ್​ ಮಿನಿಸ್ಟರ್​’ ನಾಯಕಿ

Published On - 9:28 am, Sat, 2 April 22

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!