Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಯನ್ ಖಾನ್​ ಡ್ರಗ್ಸ್​ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದ ಪ್ರಭಾಕರ್ ಸೇಲ್​ ಸಾವು; ವಕೀಲರಿಂದ ಮಾಹಿತಿ

ಎನ್​ಸಿಬಿ ಅಧಿಕಾರಿಗಳು ಸುಮಾರು 10 ಖಾಲಿ ಪೇಪರ್​ಗಳಿಗೆ ನನ್ನಿಂದ ಸಹಿ ಮಾಡಿಸಿಕೊಂಡಿದ್ದಾರೆ. ಸುಮಾರು 25 ಕೋಟಿ ರೂಪಾಯಿ ವಸೂಲಿ ಮಾಡಿದ ಬಗ್ಗೆ ನಡೆದ ದೂರವಾಣಿ ಸಂಭಾಷಣೆಯನ್ನೂ ನಾನು ಕೇಳಿದ್ದೇನೆ ಎಂದು ಪ್ರಭಾಕರ್ ಸೇಲ್​ ಹೇಳಿದ್ದರು.

ಆರ್ಯನ್ ಖಾನ್​ ಡ್ರಗ್ಸ್​ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದ ಪ್ರಭಾಕರ್ ಸೇಲ್​ ಸಾವು; ವಕೀಲರಿಂದ ಮಾಹಿತಿ
ಪ್ರಭಾಕರ್ ಸೇಲ್​
Follow us
TV9 Web
| Updated By: shivaprasad.hs

Updated on:Apr 02, 2022 | 12:02 PM

ಬಾಲಿವುಡ್​ ನಟ ಶಾರುಖ್ ಖಾನ್​ ಪುತ್ರ ಆರ್ಯನ್​ ಖಾನ್​ ಸಿಕ್ಕಿಬಿದ್ದಿದ್ದ ಡ್ರಗ್ಸ್​ ಪ್ರಕರಣದಲ್ಲಿ (Aryan Khan case) ಪ್ರಮುಖ ಸಾಕ್ಷಿಯಾಗಿದ್ದ ಪ್ರಭಾಕರ್​ ಸೇಲ್​ ನಿಧನರಾಗಿದ್ದಾರೆ. ಈಗ ಆರು ತಿಂಗಳ ಹಿಂದೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಮುಂಬೈನ ಕಾರ್ಡೇಲಿಯಾ ಕ್ರೂಸ್​ ಶಿಪ್​​ ಮೇಲೆ ದಾಳಿ ನಡೆಸಿತ್ತು. ಅದರಲ್ಲಿ ಡ್ರಗ್ಸ್​ ಪಾರ್ಟಿ ನಡೆಯುತ್ತಿತ್ತು ಎಂಬ ಆರೋಪದ ಮೇಲೆ ದಾಳಿ ನಡೆಸಲಾಗಿತ್ತು. ಹಾಗೇ, ಆರ್ಯನ್ ಖಾನ್​ ಕೂಡ ಸಿಕ್ಕಿಬಿದ್ದಿದ್ದರು. ಇದೆಲ್ಲ ಆಗಿದ್ದು 2021ರ ಅಕ್ಟೋಬರ್​ನಲ್ಲಿ. ನಂತರ ಆರ್ಯನ್ ಖಾನ್​ ಹಲವು ವಾರಗಳ ಕಾಲ ಜೈಲಿನಲ್ಲಿಯೇ ಇದ್ದು, ಸದ್ಯ ಷರತ್ತುಬದ್ಧ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ. ಪ್ರಸ್ತುತ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದ ಪ್ರಭಾಕರ್​ ಸೇಲ್​ ಅವರು ನಿನ್ನೆ ಮಧ್ಯಾಹ್ನ 4 ಗಂಟೆ ಸುಮಾರಿಗೆ, ಮುಹುಲ್​ ಏರಿಯಾದಲ್ಲಿರುವ ಚೆಂಬೂರ್​​ನಲ್ಲಿರುವ ಅವರ ನಿವಾಸದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸೇಲ್​ ಪರ ವಕೀಲರಾಗಿದ್ದ ತುಷಾರ್​ ಖಂಡಾರೆ ತಿಳಿಸಿದ್ದಾರೆ.

ಆರ್ಯನ್​ ಖಾನ್​ ಸಿಕ್ಕಿಬಿದ್ದ ಡ್ರಗ್ಸ್​ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಭಾಕರ್​ ಅವರನ್ನೂ ಎನ್​ಸಿಬಿ ಅಧಿಕಾರಿಗಳು ಈಗಾಗಲೇ ವಿಚಾರಣೆಗೆ ಒಳಪಡಿಸಿದ್ದರು.  ಇವರೊಬ್ಬ ಸ್ವತಂತ್ರ ಸಾಕ್ಷಿಯಾಗಿದ್ದಿದ್ದು, ಇನ್ನೊಬ್ಬ ಸಾಕ್ಷಿದಾರ ಕಿರಣ್​ ಗೋಸಾವಿ ಮತ್ತು ಈ ಪ್ರಕರಣ ಬೇಧಿಸುವಲ್ಲಿ ಪ್ರಮುಖ ರೂವಾರಿಯಾಗಿದ್ದ  ಸಮೀರ್ ವಾಂಖೆಡೆ (ಆಗ ಎನ್​ಸಿಬಿಯ ಅಧಿಕಾರಿಯಾಗಿದ್ದರು) ವಿರುದ್ಧವೂ ಆರೋಪ ಮಾಡಿದ್ದರು. ಎನ್​ಸಿಬಿ ಅಧಿಕಾರಿಗಳು ಸುಮಾರು 10 ಖಾಲಿ ಪೇಪರ್​ಗಳಿಗೆ ನನ್ನಿಂದ ಸಹಿ ಮಾಡಿಸಿಕೊಂಡಿದ್ದಾರೆ. ಸುಮಾರು 25 ಕೋಟಿ ರೂಪಾಯಿ ವಸೂಲಿ ಮಾಡಿದ ಬಗ್ಗೆ ನಡೆದ ದೂರವಾಣಿ ಸಂಭಾಷಣೆಯನ್ನೂ ನಾನು ಕೇಳಿದ್ದೇನೆ ಎಂದಿದ್ದರು. ಅಷ್ಟೇ ಅಲ್ಲ, ಕಿರಣ್​ ಗೋಸಾವಿಗೆ ತಾನು ಬಾಡಿಗಾರ್ಡ್ ಆಗಿದ್ದೆ, ಆದರೆ ಅವರ ಬಳಿ ಕೆಲಸ ಮಾಡುತ್ತಿದ್ದ ಇನ್ನಿತರರ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ ಎಂದು ಪ್ರಭಾಕರ್ ಹೇಳಿಕೊಂಡಿದ್ದರು.

ಕಿರಣ್​ ಗೋಸಾವಿ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದರು. ಆದರೆ ನಂತರ ಇವರ ವರುದ್ಧವೇ ಹಣ ಪಡೆದ ಆರೋಪ ಕೇಳಿಬಂದಿತ್ತು. ಮುಂಬೈ ಐಷಾರಾಮಿ ಹಡಗಿನ ಮೇಲೆ ದಾಳಿಯಾಗುತ್ತಿದ್ದಂತೆ ಕಿರಣ್​ ಗೋಸಾವಿ 50 ಲಕ್ಷ ರೂಪಾಯಿ ಪಡೆದಿದ್ದಾಗಿ ಇದೇ ಪ್ರಭಾಕರ್ ಸೇಲ್​ ಆರೋಪ ಮಾಡಿದ್ದರು. ಹೀಗಾಗಿ ಎನ್​ಸಿಬಿ ಪ್ರಭಾಕರ್​ ಅವರನ್ನು ಒಂದು ಪ್ರತಿಕೂಲ ಸಾಕ್ಷಿಯನ್ನಾಗಿ ಪರಿಗಣಿಸಿಕೊಂಡಿತ್ತು. ಅಂದರೆ ಈ ಪ್ರಕರಣದಲ್ಲಿ ಪ್ರಭಾಕರ್​ ಸೇಲ್​ ತಮ್ಮ ಪರವಾಗಿ ನಿಲ್ಲುತ್ತಾರೆ ಎಂದು ಭಾವಿಸಿದ್ದ ಎನ್​ಸಿಬಿಗೆ ಇವರು ಉಲ್ಟಾ ಹೊಡೆದಿದ್ದರು. ಎನ್​ಸಿಬಿ ವಿರುದ್ಧವೇ ಆರೋಪವನ್ನು ಮಾಡಿದ್ದರು.

ಇದನ್ನೂ ಓದಿ: ವೇದಿಕಾಗೆ ಯಾವ ರೀತಿಯ ಗಂಡ ಬೇಕು? ಮುಕ್ತವಾಗಿ ಹೇಳಿಕೊಂಡ ‘ಹೋಮ್​ ಮಿನಿಸ್ಟರ್​’ ನಾಯಕಿ

Published On - 9:28 am, Sat, 2 April 22

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ