AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಣಕ್ಯನನ್ನೇ ಬಿಡಲಿಲ್ಲ ಇನ್ನು ನಾನು ಯಾವ ಲೆಕ್ಕ, ಯಾವುದಕ್ಕೂ ತಲೆ ಕಡೆಸಿಕೊಂಡಿಲ್ಲ ಎಂದ ಪ್ರಾಚಿ ನಿಗಮ್

ತನ್ನ ಮುಖದ ಮೇಲಿನ ಕೂದಲಿನ ಬಗ್ಗೆ ಟ್ರೋಲ್ ಮಾಡಿದವರ ವಿರುದ್ಧ ಪ್ರಾಚಿ ನಿಗಮ್ ಮಾತನಾಡಿದ್ದಾರೆ. ಈ ವರ್ಷ 10 ನೇ ತರಗತಿ ಯುಪಿ ಬೋರ್ಡ್ ಪರೀಕ್ಷೆಯಲ್ಲಿ 98.5 ಶೇಕಡಾ ಅಂಕಗಳನ್ನು ಗಳಿಸುವ ಮೂಲಕ ಅಗ್ರಸ್ಥಾನದಲ್ಲಿರುವ ಪ್ರಾಚಿ ನಿಗಮ್, ತನ್ನ ಮುಖದ ಕೂದಲಿನ ಬಗ್ಗೆ ಟ್ರೋಲ್ ಮಾಡುತ್ತಿರುವ ಜನರಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಚಾಣಕ್ಯನನ್ನೇ ಬಿಡಲಿಲ್ಲ ಇನ್ನು ನಾನು ಯಾವ ಲೆಕ್ಕ, ಯಾವುದಕ್ಕೂ ತಲೆ ಕಡೆಸಿಕೊಂಡಿಲ್ಲ ಎಂದ ಪ್ರಾಚಿ ನಿಗಮ್
ಪ್ರಾಚಿ ನಿಗಮ್
ನಯನಾ ರಾಜೀವ್
|

Updated on:Apr 28, 2024 | 8:50 AM

Share

ಜನರು ಚಾಣಕ್ಯ(Chanakya)ನನ್ನೇ ಬಿಟ್ಟಿಲ್ಲ ಇನ್ನು ನಾನು ಯತಾವ ಲೆಕ್ಕ, ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ ಎಂದು ಪ್ರಾಚಿ ನಿಗಮ್(Prachi Nigam)ಹೇಳಿದ್ದಾರೆ. ಈ ವರ್ಷ 10 ನೇ ತರಗತಿ ಯುಪಿ ಬೋರ್ಡ್ ಪರೀಕ್ಷೆಯಲ್ಲಿ 98.5 ಶೇಕಡಾ ಅಂಕಗಳನ್ನು ಗಳಿಸುವ ಮೂಲಕ ಅಗ್ರಸ್ಥಾನದಲ್ಲಿರುವ ಪ್ರಾಚಿ ನಿಗಮ್, ತನ್ನ ಮುಖದ ಕೂದಲಿನ ಬಗ್ಗೆ ಟ್ರೋಲ್ ಮಾಡುತ್ತಿರುವ ಜನರಿಗೆ ಪ್ರತಿಕ್ರಿಯಿಸಿದ್ದಾರೆ. ಪ್ರಾಚಿ ಅಂತಿಮವಾಗಿ ಮುಖ್ಯವಾದುದು ಅವಳ ಗುರುತುಗಳು ಮತ್ತು ಅವಳ ನೋಟವಲ್ಲ ಎಂದು ಹೇಳಿದರು.

ತನ್ನನ್ನು ಬೆಂಬಲಿಸಿದ ಜನರಿಗೆ ಪ್ರಾಚಿ ಧನ್ಯವಾದವನ್ನೂ ತಿಳಿಸಿದ್ದಾರೆ. “ಯುಪಿ ಬೋರ್ಡ್ ಪರೀಕ್ಷೆಯಲ್ಲಿ ಟಾಪರ್ ಎಂದು ನನ್ನ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಾಗ, ಕೆಲವರು ನನ್ನನ್ನು ಟ್ರೋಲ್ ಮಾಡಿದರು. ಅದೇ ಸಮಯದಲ್ಲಿ, ನನ್ನನ್ನು ಬೆಂಬಲಿಸಿದವರೂ ಇದ್ದರು. ನಾನು ಅವರೆಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ಹೇಳಿದರು. ನನ್ನ ಮುಖದ ಕೂದಲಿನ ಬಗ್ಗೆ ವಿಚಿತ್ರವೆನಿಸುವವರು ಟ್ರೋಲ್ ಮಾಡುವುದನ್ನು ಮುಂದುವರಿಸಬಹುದು, ಇದು ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ಪ್ರಾಚಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಒಳ್ಳೆಯದಷ್ಟೇ ಅಲ್ಲ ಕೆಟ್ಟದ್ದೂ ಕೂಡ ಇದೆ. ಇದು ಕೆಲವರಿಗೆ ಉದ್ಯೋಗ ಇನ್ನೂ ಕೆಲವರಿಗೆ ಮನರಂಜನೆ ನೀಡುತ್ತದೆ. ಸೀತಾಪುರ ಮೂಲದ ಪ್ರಾಚಿ ನಿಗಮ್ 600 ಅಂಕಗಳಿಗೆ 591 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಟಾಪರ್​ ಆಗಿದ್ದಾರೆ. ಈ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಮುಖದಲ್ಲಿ ಬೇಡದ ಕೂದಲು ಇದ್ದಿದ್ದರಿಂದ ಆಕೆಯ ಫೋಟೊವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಕೆಲವರು ವಿಕೃತಿ ಮೆರೆದಿದ್ದಾರೆ. ಅದೇ ಸಮಯದಲ್ಲಿ ಪ್ರಾಚಿಗೆ ಅಪಾರ ಬೆಂಬಲವೂ ಸಿಕ್ಕಿದೆ. ಇದೀಗ ಪ್ರಾಚಿ ಟ್ರೋಲ್​ಗಳಿಗೆ ಖಡಕ್ ಉತ್ತರ ನೀಡಿದ್ದಾರೆ.

ಮತ್ತಷ್ಟು ಓದಿ: ಮುಖದಲ್ಲಿ ಕೂದಲು ಬೆಳೆದಿದೆ ಎಂದು ಅಪಹಾಸ್ಯ ಆದರೆ ಈಕೆ ಬೋರ್ಡ್ ಪರೀಕ್ಷೆಯಲ್ಲಿ ಟಾಪರ್

ನನ್ನ ಕುಟುಂಬ , ಸ್ನೇಹಿತರು ಹಾಗೂ ಶಿಕ್ಷಕರೇ ನನ್ನ ಮುಖದ ಬಗ್ಗೆ ಕಮೆಂಟ್​ ಮಾಡಲಿಲ್ಲ. ಆದರೆ, ರಾಜ್ಯಕ್ಕೆ ಟಾಪರ್ ಆದ ಬಳಿಕ ಕೆಲವರು ನನ್ನ ಫೋಟೊ ನೋಡಿ ಟ್ರೋಲ್ ಮಾಡುತ್ತಿದ್ದಾರೆ. ಅದೆಲ್ಲದರ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ. ನನ್ನ ಕೈದಲಿನ ಬಗ್ಗೆ ನಿಮಗೇಕೆ ಚಿಂತೆ.

ನನ್ನ ಕೂದಲಿನ ಬಗ್ಗೆ ಯೋಚನೆ ಮಾಡುವುದಿಲ್ಲ, ನನಗೆ ಅಂಕಗಳೇ ಮುಖ್ಯ ಎಂದಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಪ್ರಾಚಿ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಅಧ್ಯಯನದತ್ತ ಗಮನಹರಿಸಿ ತನ್ನ ಕನಸುಗಳನ್ನು ಸಾಧಿಸುವಂತೆ ಕೇಳಿಕೊಂಡರು ಎಂದು ಮೂಲಗಳು ತಿಳಿಸಿವೆ.

ಬೋರ್ಡ್ ಪರೀಕ್ಷೆಯ ಉತ್ತಮ ಫಲಿತಾಂಶಗಳಿಂದಾಗಿ ವಾದ್ರಾ ಪ್ರಾಚಿಯನ್ನು ಅಭಿನಂದಿಸಿದರು ಮತ್ತು ಅಂತಹ ಟ್ರೋಲಿಂಗ್‌ನಿಂದ ಪ್ರಭಾವಿತರಾಗದಂತೆ ಸಲಹೆ ನೀಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:48 am, Sun, 28 April 24

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು