AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ ವರ್ಷ ಬಿಜೆಪಿ ಜತೆ ಕೈಜೋಡಿಸಲು ಶರದ್ ಪವಾರ್ ಸಿದ್ಧರಾಗಿದ್ದರು: ಪ್ರಫುಲ್ ಪಟೇಲ್

ಕಳೆದ ವರ್ಷ ಬಿಜೆಪಿ ಜತೆ ಕೈ ಜೋಡಿಸಲು ಶರದ್ ಪವಾರ್(Sharad Pawar) ಸಿದ್ಧರಾಗಿದ್ದರು ಎಂದು ಎನ್​ಸಿಪಿ ನಾಯಕ ಪ್ರಫುಲ್ ಪಟೇಲ್ ಹೇಳಿದ್ದಾರೆ. ಅಜಿತ್ ಪವಾರ್ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದಾಗ ಶರದ್ ಪವಾರ್ ಬಹುತೇಕ ಬಿಜೆಪಿಗೆ ಹೋಗಲು ಸಿದ್ಧರಾಗಿದ್ದರು ಎಂದಿದ್ದಾರೆ. ಜುಲೈ 2, 2023 ರಂದು ಅಜಿತ್ ಪವಾರ್ ಮತ್ತು ನಮ್ಮ ಸಚಿವರು ಮಹಾರಾಷ್ಟ್ರ ಸರ್ಕಾರದ ಅಡಿಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಕಳೆದ ವರ್ಷ ಬಿಜೆಪಿ ಜತೆ ಕೈಜೋಡಿಸಲು ಶರದ್ ಪವಾರ್ ಸಿದ್ಧರಾಗಿದ್ದರು: ಪ್ರಫುಲ್ ಪಟೇಲ್
ಶರದ್ ಪವಾರ್
Follow us
ನಯನಾ ರಾಜೀವ್
|

Updated on: Apr 11, 2024 | 9:52 AM

ಕಳೆದ ವರ್ಷ ಬಿಜೆಪಿ ಜತೆ ಕೈ ಜೋಡಿಸಲು ಶರದ್ ಪವಾರ್(Sharad Pawar) ಸಿದ್ಧರಾಗಿದ್ದರು ಎಂದು ಎನ್​ಸಿಪಿ ನಾಯಕ ಪ್ರಫುಲ್ ಪಟೇಲ್ ಹೇಳಿದ್ದಾರೆ. ಅಜಿತ್ ಪವಾರ್ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದಾಗ ಶರದ್ ಪವಾರ್ ಬಹುತೇಕ ಬಿಜೆಪಿಗೆ ಹೋಗಲು ಸಿದ್ಧರಾಗಿದ್ದರು ಎಂದಿದ್ದಾರೆ. ಜುಲೈ 2, 2023 ರಂದು ಅಜಿತ್ ಪವಾರ್ ಮತ್ತು ನಮ್ಮ ಸಚಿವರು ಮಹಾರಾಷ್ಟ್ರ ಸರ್ಕಾರದ ಅಡಿಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಜುಲೈ 15 ಮತ್ತು 16 ರಂದು ನಾವು ಮುಂಬೈನಲ್ಲಿ ಶರದ್ ಪವಾರ್ ಅವರನ್ನು ಭೇಟಿಯಾದೆವು. ನಾವು ನಿಮ್ಮ ನಾಯಕತ್ವದಲ್ಲಿ ಕೆಲಸ ಮಾಡಲು ಬಯಸುತ್ತೇವೆ ಎಂದು ಹೇಳಿದ್ದರು.

ನಂತರ, ಅಜಿತ್ ಪವಾರ್ ಮತ್ತು ಶರದ್ ಪವಾರ್ ಪುಣೆಯಲ್ಲಿ ಭೇಟಿಯಾದರು. ಬಳಿಕ ಎನ್‌ಸಿಪಿಯಲ್ಲಿನ ಒಡಕು ಅಜಿತ್ ಪವಾರ್ ಮತ್ತು ಶರದ್ ಪವಾರ್ ಬಣಗಳ ನಡುವೆ ಪಕ್ಷದ ಚುನಾವಣಾ ಚಿಹ್ನೆಯ ಹಕ್ಕಿನ ಬಗ್ಗೆ ಜಗಳಕ್ಕೆ ಕಾರಣವಾಯಿತು.

ಮತ್ತಷ್ಟು ಓದಿ:Sharad Pawar: ಶರದ್ ಪವಾರ್ ಬಣಕ್ಕೆ ಹೊಸ ಹೆಸರು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ ಶರದ್ಚಂದ್ರ ಪವಾರ್

ಅಂತಿಮವಾಗಿ, ಚುನಾವಣಾ ಆಯೋಗವು ಫೆಬ್ರವರಿಯಲ್ಲಿ ಅಜಿತ್ ಪವಾರ್ ಅವರ ಬಣ ನಿಜವಾದ ಎನ್‌ಸಿಪಿ ಎಂದು ತೀರ್ಪು ನೀಡಿತು ಮತ್ತು ಶರದ್ ಪವಾರ್ ಅವರ ಬಣಕ್ಕೆ ಎನ್‌ಸಿಪಿ-ಶರದ್ಚಂದ್ರ ಪವಾರ್ ಎಂಬ ಹೊಸ ಹೆಸರನ್ನು ನೀಡಿತು.

ಎನ್‌ಸಿಪಿಯ ಬಹುಪಾಲು ನಾಯಕರು 2022ರಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ಸೇರಲು ಬಯಸಿದ್ದರು ಎಂದು ಪ್ರಫುಲ್ ಪಟೇಲ್ ಹೇಳಿದರು.

ಜೂನ್ 2022 ರಲ್ಲಿ, ಏಕನಾಥ್ ಶಿಂಧೆ ಶಿವಸೇನೆ ವಿಭಜನೆಯ ನೇತೃತ್ವ ವಹಿಸಿ ಬಿಜೆಪಿ ಸೇರಿದಾಗ, ಎನ್‌ಸಿಪಿಯ 51 ಶಾಸಕರು ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಬಿಜೆಪಿ ನೇತೃತ್ವದ ಒಕ್ಕೂಟವನ್ನು ಸೇರಲು ಬಯಸಿದ್ದರು. ಎನ್‌ಸಿಪಿ ನಾಯಕರು ಈ ಬಗ್ಗೆ ಶರದ್ ಪವಾರ್‌ಗೆ ಪತ್ರ ಬರೆದಿದ್ದರು.

ನಾನು ಪಕ್ಷದಲ್ಲಿ ಬಹಳ ಸಮಯದಿಂದ ಇದ್ದೇನೆ ಮತ್ತು ಶರದ್ ಪವಾರ್ ಅವರನ್ನು ನೋಡಿದ್ದೇನೆ. ನಾನು ಅವರೊಂದಿಗೆ ತುಂಬಾ ನಿಕಟ ಸಂಬಂಧ ಹೊಂದಿದ್ದೇನೆ. ಆದರೆ ಅವರು ಯಾವಾಗಲೂ ಕೊನೆಯ ಕ್ಷಣದಲ್ಲಿ ಹಿಂಜರಿಯುತ್ತಾರೆ. ಅವರು ಹಿಂಜರಿಯದಿದ್ದರೆ 1996ರಲ್ಲಿ ಅವರು ಪ್ರಧಾನಿಯಾಗಬಹುದಿತ್ತು ಎಂದು ಪ್ರಫುಲ್ ಪಟೇಲ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ