
ನವದೆಹಲಿ, ಜುಲೈ 26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ, ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ(Pralhad Joshi)ಯವರಿಗೆ ಕೇಂದ್ರ ಶಿಕ್ಷಣ ಸಚಿವರಾಗಿ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ ಹುಬ್ಬಳ್ಳಿಯ ಕೆ.ಎಸ್. ಆರ್ಟ್ಸ್ ಕಾಲೇಜಿನಿಂದ ಬಿ.ಎ. ಪದವಿ ಪಡೆದಿದ್ದಾರೆ.
ಹುಬ್ಬಳ್ಳಿಯ ರೈಲ್ವೆ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ನ್ಯೂ ಇಂಗ್ಲಿಷ್ ಶಾಲೆಯಲ್ಲಿ ಪ್ರೌಢ ಶಿಕ್ಷಣ ಪೂರ್ಣಗೊಳಿಸಿದ್ದಾರೆ. ನವೆಂಬರ್ 27, 1962 ರಂದು ಕರ್ನಾಟಕದ ವಿಜಯಪುರದಲ್ಲಿ ಜನಿಸಿದರು. ಇವರ ತಂದೆ ಭಾರತೀಯ ರೈಲ್ವೆಯಲ್ಲಿ ಉದ್ಯೋಗಿಯಾಗಿದ್ದರು. ಚಿಕ್ಕ ವಯಸ್ಸಿನಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸಕ್ರಿಯ ಕಾರ್ಯಕರ್ತರಾಗಿ ಸಾರ್ವಜನಿಕ ಜೀವನ ಪ್ರವೇಶಿಸಿದರು. 2004 ರಿಂದ ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಸತತ 5 ಬಾರಿ (2004, 2009, 2014, 2019, 2024) ಸಂಸದರಾಗಿ ಆಯ್ಕೆಯಾಗಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸೇರಿ, ಬಳಿಕ ಭಾರತೀಯ ಜನತಾ ಪಾರ್ಟಿ (BJP) ಮೂಲಕ ಸಕ್ರಿಯ ರಾಜಕೀಯ ಪ್ರವೇಶಿಸಿದರು.
ನಿರ್ವಹಿಸಿದ ಪ್ರಮುಖ ಹುದ್ದೆಗಳು ಹಾಗೂ ಇತರೆ ಮಾಹಿತಿ
ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರು (2013–2016)
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರು (2019–2024)
ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವರು (2019–2024)
ಮತ್ತಷ್ಟು ಓದಿ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಗೀಕಾರ, ಪ್ರಲ್ಹಾದ್ ಜೋಶಿಗೆ ಕೇಂದ್ರ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ
1990 ರ ದಶಕದಲ್ಲಿ ರಾಷ್ಟ್ರಧ್ವಜ ಗೌರವ ರಕ್ಷಣಾ ಸಮಿತಿಯ ಸಂಚಾಲಕರಾಗಿ ಪ್ರಲ್ಹಾದ್ ಜೋಶಿ ಅವರು ರಾಜ್ಯಮಟ್ಟದಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡರು. ರಾಜಕೀಯ ಪ್ರವೇಶಿಸುವ ಮೊದಲು ಹುಬ್ಬಳ್ಳಿಯಲ್ಲಿ ಸಣ್ಣ ಪ್ರಮಾಣದ ಕೈಗಾರಿಕಾ ಉದ್ಯಮವನ್ನು (ವೈಭವ್ ಪ್ರಿಂಟರ್ಸ್) ನಡೆಸುತ್ತಿದ್ದರು. ಸಂಸತ್ತಿನಲ್ಲಿ ಸಕ್ರಿಯ ಭಾಗವಹಿಸುವಿಕೆ ಮತ್ತು ಪ್ರಮುಖ ಮಸೂದೆಗಳನ್ನು ಅಂಗೀಕರಿಸುವಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿ ಪ್ರಮುಖ ಪಾತ್ರ ವಹಿಸಿದ್ದರು.
ಹೊಸ ಜವಾಬ್ದಾರಿ ಏಕೆ?
ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಪರೀಕ್ಷಾ ನಿರ್ವಹಣೆ ಹಾಗೂ ನೀಟ್ (NEET) ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕರಿಸಿದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯಂತೆ ಪ್ರಲ್ಹಾದ್ ಜೋಶಿ ಅವರಿಗೆ ಈ ಹೊಣೆ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಿರೀಕ್ಷೆಗೆ ತಕ್ಕಂತೆ ಪೂರ್ಣ ನಿಷ್ಠೆಯಿಂದ ಕೆಲಸ ಮಾಡುತ್ತೇನೆ ಹಾಗೂ ಭಾರತದ ಶಿಕ್ಷಣ ಕ್ಷೇತ್ರವನ್ನು ಬಲಪಡಿಸಲು ಶ್ರಮಿಸುತ್ತೇನೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:30 am, Sun, 26 July 26