AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ ಘರ್ ತಿರಂಗಾಕ್ಕೆ ಪ್ರೇರಣೆ ನೀಡುವ ಸಂಕಲ್ಪದೊಂದಿಗೆ ತಿರಂಗಾ ರ‍್ಯಾಲಿಯಲ್ಲಿ ಭಾಗಿಯಾದ ಕೇಂದ್ರ ಸಚಿವ ಜೋಶಿ

ದೆಹಲಿಯ ಕೆಂಪುಕೋಟೆಯಿಂದ ವಿಜಯ್ ಚೌಕ್‌ವರೆಗೆ ಸಂಸದರು ತ್ರಿವರ್ಣ ಧ್ವಜ ಹಿಡಿದು ಬೈಕ್ ರ‍್ಯಾಲಿ ನಡೆಸಿದರು. ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ತಿರಂಗಾ ಬೈಕ್ ರ‍್ಯಾಲಿಗೆ ಚಾಲನೆ ನೀಡಿದರು.

ಹರ್ ಘರ್ ತಿರಂಗಾಕ್ಕೆ ಪ್ರೇರಣೆ ನೀಡುವ ಸಂಕಲ್ಪದೊಂದಿಗೆ ತಿರಂಗಾ ರ‍್ಯಾಲಿಯಲ್ಲಿ ಭಾಗಿಯಾದ ಕೇಂದ್ರ ಸಚಿವ ಜೋಶಿ
ಹರ್ ಘರ್ ತಿರಂಗಾಕ್ಕೆ ಪ್ರೇರಣೆ ನೀಡುವ ಸಂಕಲ್ಪದೊಂದಿಗೆ ತಿರಂಗಾ ರ‍್ಯಾಲಿಯಲ್ಲಿ ಭಾಗಿಯಾದ ಕೇಂದ್ರ ಸಚಿವ ಜೋಶಿ
TV9 Web
| Edited By: |

Updated on:Aug 04, 2022 | 4:44 PM

Share

ದೆಹಲಿ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷ ತುಂಬಿದ ಶುಭ ಸಂದರ್ಭದಲ್ಲಿ ಹರ್ ಘರ್ ತಿರಂಗಾ(Har Ghar Tiranga) ಅಭಿಯಾನಕ್ಕೆ ಪ್ರೇರಣೆ ನೀಡುವ ಸಲುವಾಗಿ ಇಂದು(ಆಗಸ್ಟ್ 03) ಸಂಸದರ ತಿರಂಗಾ ಬೈಕ್ ರ‍್ಯಾಲಿ(Tiranga Bike Rally) ನಡೆಯಿತು.

ದೆಹಲಿಯ ಕೆಂಪುಕೋಟೆಯಿಂದ ವಿಜಯ್ ಚೌಕ್‌ವರೆಗೆ ಸಂಸದರು ತ್ರಿವರ್ಣ ಧ್ವಜ ಹಿಡಿದು ಬೈಕ್ ರ‍್ಯಾಲಿ ನಡೆಸಿದರು. ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ತಿರಂಗಾ ಬೈಕ್ ರ‍್ಯಾಲಿಗೆ ಚಾಲನೆ ನೀಡಿದರು. ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೇಶದಲ್ಲಿ ರಾಷ್ಟ್ರೀಯ ಭಾವನೆಯನ್ನ ಇಮ್ಮಡಿಗೊಳಿಸುವಂತ ಹಲವು ಕಾರ್ಯಕ್ರಮಗಳನ್ನ ಕೇಂದ್ರ ಬಿಜೆಪಿ ಸರ್ಕಾರ ಹಮ್ಮಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷ ಪೂರ್ಣಗೊಂಡಿರುವ ಕುರಿತು ತಮ್ಮ ಮನದಾಳದ ಮಾತುಗಳನ್ನ ಆಡಿದ್ದರು. ಅಮೃತ ಮಹೋತ್ಸವ ಒಂದು ಅಭಿಯಾನವಾಗಬೇಕು. ಈ ನಿಟ್ಟಿನಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯೂ ಅಜಾದಿ ಕೀ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ತಮ್ಮ ಪಾಲ್ಗೊಳ್ಳುವಿಕೆಯನ್ನ ತೋರ್ಪಡಿಸುವಂತೆ ಕರೆ ನೀಡಿದ್ದರು.

Pralhad Joshi

ತಿರಂಗಾ ರ‍್ಯಾಲಿ

ಈ ನಡುವೆ ದೇಶದ ಸಂಸದರನ್ನ ಒಟ್ಟುಗೂಡಿಸಿಕೊಂಡು ತಿರಂಗಾ ರ‍್ಯಾಲಿ ಕಾರ್ಯಕ್ರಮ ನಡೆಸುವ ಕುರಿತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಕೇಂದ್ರ ಸಂಸ್ಕೃತಿ ಇಲಾಖೆಗೆ ಸೂಚನೆ ನೀಡಿದ್ದರು. ಇದು ಬಿಜೆಪಿಯ ಕಾರ್ಯಕ್ರಮವಲ್ಲ. ಇದೊಂದು ರಾಷ್ಟ್ರಾಭಿಮಾನ ಹೆಚ್ಚಿಸುವ ಮಹತ್ವದ ಅಭಿಯಾನ. ದೇಶದ ಜನರನ್ನ ಪ್ರತಿನಿಧಿಸುವ ಸಂಸದರು ತ್ರಿವರ್ಣ ಧ್ವಜ ಹಿಡಿದು ದೇಶದ ಜನರಿಗೆ ಸಂದೇಶ ಸಾರುವುದು ಮುಖ್ಯ. ಈ ನಿಟ್ಟಿನಲ್ಲಿ ಎಲ್ಲ ಸಂಸದರು ಪಾಲ್ಗೊಳ್ಳುವಂತೆ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಕರೆ ನೀಡಿದ್ದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯ ಕಾರ್ಯಕ್ರಮವನ್ನು ಆಯೋಜಿಸಿತ್ತು. ತಿರಂಗಾ ರ‍್ಯಾಲಿಗೆ ಚಾಲನೆ ನೀಡಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಪ್ರಲ್ಹಾದ್ ಜೋಶಿ ಅವರು ಧ್ವಜ ಹಾರಿಸುವ ಮೂಲಕ ಸಂಭ್ರಮಿಸಿದರು. ತಿರಂಗಾ ಬೈಕ್ ರ‍್ಯಾಲಿಯಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಸಂಸದರು ಪಾಲ್ಗೊಂಡಿದ್ದರು.

Published On - 4:05 pm, Wed, 3 August 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ