AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pramod Sawant: ಗೋವಾ ಪ್ರವಾಸಿಗರ ಮೇಲೆ ಹಲ್ಲೆ; ಆಘಾತಕಾರಿ ವೀಡಿಯೊಗೆ ಪ್ರತಿಕ್ರಿಯಿಸಿದ ಸಿಎಂ

ಮಾ.12ರಂದು ಅಂಜುನಾ ಪ್ರದೇಶದ ರೆಸಾರ್ಟ್‌ನಲ್ಲಿ ಸಣ್ಣ ಜಗಳ ಆರಂಭವಾಗಿ ಅಲ್ಲಿದ್ದ ಪ್ರವಾಸಿಗರ ಗುಂಪಿನ ಮೇಲೆ ಕತ್ತಿ ಮತ್ತು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಇದೀಗ ಈ ಬಗ್ಗೆ ಗೋವಾ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.

Pramod Sawant: ಗೋವಾ ಪ್ರವಾಸಿಗರ ಮೇಲೆ ಹಲ್ಲೆ; ಆಘಾತಕಾರಿ ವೀಡಿಯೊಗೆ ಪ್ರತಿಕ್ರಿಯಿಸಿದ ಸಿಎಂ
ಗೋವಾ ಪ್ರವಾಸಿಗರ ಮೇಲೆ ದಾಳಿ
ಅಕ್ಷಯ್​ ಪಲ್ಲಮಜಲು​​
|

Updated on:Mar 13, 2023 | 3:04 PM

Share

ಪಣಜಿ: ಗೋವಾ(Goa) ರೆಸಾರ್ಟ್‌ಗೆ ಬಂದಿದ್ದ ಪ್ರವಾಸಿಗರ ಮೇಲೆ ಕತ್ತಿ ಮತ್ತು ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಾ.12ರಂದು ಅಂಜುನಾ ಪ್ರದೇಶದ ರೆಸಾರ್ಟ್‌ನಲ್ಲಿ ಸಣ್ಣ ಜಗಳ ಆರಂಭವಾಗಿ ಅಲ್ಲಿದ್ದ ಪ್ರವಾಸಿಗರ ಗುಂಪಿನ ಮೇಲೆ ಕತ್ತಿ ಮತ್ತು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಇದರ ಪರಿಣಾಮವಾಗಿ ಪ್ರವಾಸಿಗರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯ ಬಗ್ಗೆ ಒಂದು ವಿಡಿಯೊವನ್ನು ಪ್ರವಾಸಿಗರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಪ್ರತಿಕ್ರಿಯಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ (Pramod Sawant) ಅವರು ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಇಲ್ಲಿಯವರೆಗೆ, ಸ್ಪಾಜಿಯೊ ಲೀಸರ್ ರೆಸಾರ್ಟ್‌ನಲ್ಲಿ ಗುಂಪಿನ ಮೇಲೆ ದಾಳಿ ಮಾಡಿದ್ದಕ್ಕಾಗಿ ಮೂವರನ್ನು ಬಂಧಿಸಲಾಗಿದೆ.

ಅಂಜುನಾದಲ್ಲಿ ನಡೆದ ಹಿಂಸಾತ್ಮಕ ಘಟನೆ ಆಘಾತಕಾರಿ ಮತ್ತು ಅಸಹನೀಯವಾಗಿದೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಇಂತಹ ಸಮಾಜ ವಿರೋಧಿ ಶಕ್ತಿಗಳು ರಾಜ್ಯದ ಜನರ ಶಾಂತಿ ಮತ್ತು ಸುರಕ್ಷತೆಗೆ ಅಪಾಯವನ್ನುಂಟು ಮಾಡುತ್ತಿದ್ದು, ಕಟ್ಟುನಿಟ್ಟಾಗಿ ವ್ಯವಹರಿಸಲಾಗುವುದು ಎಂದು ಸಾವಂತ್ ಟ್ವೀಟ್ ಮಾಡಿದ್ದಾರೆ.

ಈ ಘಟನೆಯಲ್ಲಿ ಗಾಯಗೊಂಡ ಒಬ್ಬರಲ್ಲಿ ಜತಿನ್ ಶರ್ಮಾ ಎಂಬುವವರು ತಮ್ಮ ಇನ್‌ಸ್ಟಾಗ್ರಾಮ್​​ನಲ್ಲಿ ಆಘಾತಕಾರಿ ಘಟನೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅಂಜುನಾನಲ್ಲಿರುವ ಹೋಟೆಲ್‌ನ ಹೊರಗೆ ರಾಯ್ಸ್ಟನ್ ಡಯಾಸ್, ನೈರಾನ್ ಡಯಾಸ್ ಮತ್ತು ಕಾಶಿನಾಥ್ ಅಗರವಾಡೇಕರ್ ಮತ್ತು ಅವರ ಕುಟುಂಬದ ಮೇಲೆ ಶಸ್ತ್ರಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಗೋವಾ ಸಾಮೂಹಿಕ ಅತ್ಯಾಚಾರ ಪ್ರಕರಣ: ಹೆಣ್ಣು ಮಕ್ಕಳು ರಾತ್ರಿ ಹೊರಗೆ ಹೋಗಿದ್ದೇಕೆ ಎಂದು ಕೇಳಿದ ಸಿಎಂ ಪ್ರಮೋದ್ ಸಾವಂತ್

ಈ ಭೀಕರ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವೀಡಿಯೊದಲ್ಲಿ, ದುಷ್ಕರ್ಮಿಗಳ ಗುಂಪೊಂದು ಜತಿನ್ ಮತ್ತು ಅವರ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದು. ಈ ವೀಡಿಯೊದಲ್ಲಿ ತಮ್ಮ ಸಹಾಯಕ್ಕಾಗಿ ಮಳೆಯರು ಕರೆಯುತ್ತಿದ್ದನ್ನು ಕಾಣಬಹುದು. ಹೋಟೆಲ್ ಸಿಬ್ಬಂದಿಯೊಂದಿಗಿನ ಸಮಸ್ಯೆಯನ್ನು ಅವರು ಹೋಟೆಲ್ ವ್ಯವಸ್ಥಾಪಕರಿಗೆ ವರದಿ ಮಾಡಿದ್ದಾರೆ. ಈ ಬಳಿಕ ದೊಡ್ಡ ಜಗಳ ನಡೆದಿದೆ ಎಂದು ಶರ್ಮಾ ಹೇಳಿದ್ದಾರೆ. ಹೊಟೇಲ್ ಸಮಸ್ಯೆಯ ಬಗ್ಗೆ ಮಾತನಾಡಿದಕ್ಕೆ. ಹೊಟೇಲ್ ಸಿಬ್ಬಂದಿ ತನ್ನ ಕೆಲವು ಸ್ನೇಹಿತರನ್ನು ಕರೆದು ಹೋಟೆಲ್ ಹೊರಗೆ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದಾನೆ.

ಆರಂಭದಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 324 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಶರ್ಮಾ ಹೇಳಿದ್ದಾರೆ. ಆದರೆ ಆರೋಪಿಗಳನ್ನು ಪೊಲೀಸರು ಸ್ವಲ್ಪ ಹೊತ್ತಿನಲ್ಲಿ ಬಿಡುಗಡೆ ಮಾಡಿದ್ದಾರೆ. ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದ ಕೂಡಲೇ ಐಪಿಸಿ ಸೆಕ್ಷನ್ 307 (ಕೊಲೆ ಯತ್ನ) ಸೇರಿಸಿ 3 ಆರೋಪಿಗಳನ್ನು ಬಂಧಿಸಲಾಗಿದೆ. ಅಂಜುನಾ ಪೊಲೀಸ್ ಠಾಣೆಯ ಕರ್ತವ್ಯಲೋಪ ಎಸಗಿದ್ದಾರೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳಲಾಗಿದೆ ಎಂದು ಉತ್ತರ ಗೋವಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನಿಧಿನ್ ವಲ್ಸನ್ ಹೇಳಿದ್ದಾರೆ.

Published On - 3:04 pm, Mon, 13 March 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ