AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಅಂಧ ಐಎಎಸ್ ಹೆಗ್ಗಳಿಕೆಗೆ ಪಾತ್ರರಾದ ಪ್ರಾಂಜಲ ಮನಸಿನ ಯುವತಿ

ತಿರುವನಂತಪುರಂ: ಇವರು ಕೇವಲ ಸಾಮಾನ್ಯ ಮಹಿಳೆ ಅಲ್ಲ. ಇಡೀ ಜಗತ್ತಿಗೆ ಸ್ಫೂರ್ತಿಯೆಂಬ ಬೆಳಕನ್ನು ಹರಡಿರುವ ಮಹಿಳೆ. ಸಾಧನೆಯ ಹಾದಿಯಲ್ಲಿ ಬರುವ ಕಷ್ಟಗಳಿಗೆ ಕುಗ್ಗುವಂತಹವರಿಗೆ ಆಶಾಕಿರಣ. ಐಎಎಸ್ ಎಂಬ ದೊಡ್ಡ ಕನಸು ಹೊತ್ತು ಇಂದು ಸಾಕಾರ ಪಡೆದ ಯುವತಿ ಈ ಪ್ರಾಂಜಲ್ ಪಾಟೀಲ್. ಇವರು ಮೂಲತಃ ಮಹಾರಾಷ್ಟ್ರದ ಉಲ್ಲಾಸನಗರದ ನಿವಾಸಿ. ತಮ್ಮ ಆರನೇ ವಯಸ್ಸಿನಲ್ಲಿ ಶಾಲೆಯಲ್ಲಿ ಓದುತ್ತಿರುವಾಗ ಸಹಪಾಠಿ ಪೆನ್ಸಿಲ್​ನಿಂದ ಕಣ್ಣಿಗೆ ಚುಚ್ಚಿದಾಗ ಇವರ ಜೀವನ ಕಗ್ಗತ್ತಲಾಗತೊಡಗಿತು. ಇದರಿಂದ ಒಂದು ಕಣ್ಣನ್ನು ಕಳೆದುಕೊಂಡ ಪ್ರಾಂಜಲ್ ಪಾಟೀಲ್ ಕೆಲದಿನಗಳ ಬಳಿಕ […]

ಮೊದಲ ಅಂಧ ಐಎಎಸ್ ಹೆಗ್ಗಳಿಕೆಗೆ ಪಾತ್ರರಾದ ಪ್ರಾಂಜಲ ಮನಸಿನ ಯುವತಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 19, 2019 | 11:17 AM

Share

ತಿರುವನಂತಪುರಂ: ಇವರು ಕೇವಲ ಸಾಮಾನ್ಯ ಮಹಿಳೆ ಅಲ್ಲ. ಇಡೀ ಜಗತ್ತಿಗೆ ಸ್ಫೂರ್ತಿಯೆಂಬ ಬೆಳಕನ್ನು ಹರಡಿರುವ ಮಹಿಳೆ. ಸಾಧನೆಯ ಹಾದಿಯಲ್ಲಿ ಬರುವ ಕಷ್ಟಗಳಿಗೆ ಕುಗ್ಗುವಂತಹವರಿಗೆ ಆಶಾಕಿರಣ. ಐಎಎಸ್ ಎಂಬ ದೊಡ್ಡ ಕನಸು ಹೊತ್ತು ಇಂದು ಸಾಕಾರ ಪಡೆದ ಯುವತಿ ಈ ಪ್ರಾಂಜಲ್ ಪಾಟೀಲ್.

ಇವರು ಮೂಲತಃ ಮಹಾರಾಷ್ಟ್ರದ ಉಲ್ಲಾಸನಗರದ ನಿವಾಸಿ. ತಮ್ಮ ಆರನೇ ವಯಸ್ಸಿನಲ್ಲಿ ಶಾಲೆಯಲ್ಲಿ ಓದುತ್ತಿರುವಾಗ ಸಹಪಾಠಿ ಪೆನ್ಸಿಲ್​ನಿಂದ ಕಣ್ಣಿಗೆ ಚುಚ್ಚಿದಾಗ ಇವರ ಜೀವನ ಕಗ್ಗತ್ತಲಾಗತೊಡಗಿತು. ಇದರಿಂದ ಒಂದು ಕಣ್ಣನ್ನು ಕಳೆದುಕೊಂಡ ಪ್ರಾಂಜಲ್ ಪಾಟೀಲ್ ಕೆಲದಿನಗಳ ಬಳಿಕ ತನ್ನ ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡರು. ಈಗ 30 ವರ್ಷದವರಾಗಿರುವ ಪ್ರಾಂಜಲ್ ದೃಷ್ಟಿಹೀನರಾದರೂ ಎದೆಗುಂದದೆ ಸದೃಢ ಮನಸ್ಸಿನಿಂದ ಎಲ್ಲ ಅಡೆತಡೆಗಳನ್ನು ನಿಭಾಯಿಸಿ ಮುಂದೆ ಬಂದಿದ್ದಾರೆ.

ಪ್ರಾಂಜಲ್ ಪಾಟೀಲ್ ಅಂಧರಿಗಾಗಿ ಇದ್ದ ಕಮಲಾ ಮೆಹ್ತಾ ದಾದರ್ ಶಾಲೆಯಲ್ಲಿ ಓದಿ, ಸೇಂಟ್ ಝೇವಿಯರ್ಸ್ ಕಾಲೇಜಿನಲ್ಲಿ ರಾಜಕೀಯ ಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ. ಜವಾಹರ್ ಲಾಲ್ ನೆಹರು (ಜೆಎನ್​ಯು) ಯುನಿವರ್ಸಿಟಿಯಲ್ಲಿ ‘ಅಂತರಾಷ್ಟ್ರೀಯ ಸಂಬಂಧಗಳು’ ಎಂಬ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನೂ ಪಡೆದಿದ್ದಾರೆ.

ನಂತರ ಯುಪಿಎಸ್‌ಸಿ ಪರೀಕ್ಷೆಗೆ ಸಿದ್ಧತೆ ನಡೆಸಿದ ಪ್ರಾಂಜಲ್ ಪಾಟೀಲ್ 2016ರಲ್ಲಿ ತಮ್ಮ ಪ್ರಥಮ ಪ್ರಯತ್ನದಲ್ಲೇ 773ನೇ ಸ್ಥಾನ ಪಡೆದು ಐಆರ್‌ಎಎಸ್‌ ವಿಭಾಗಕ್ಕೆ ಆಯ್ಕೆಯಾಗಿದ್ದರು. ಆದರೆ ಅವರ ಅಂಧತ್ವದ ಕಾರಣದಿಂದ ನೇಮಕಾತಿ ರದ್ದುಗೊಳಿಸಲಾಗುತ್ತೆ. ಪುನಃ ಸಿದ್ಧತೆ ನಡೆಸಿದ ಅವರು ಯಾವುದೇ ಐಎಎಸ್ ತರಬೇತಿ ಶಿಬಿರಗಳಲ್ಲಿ ಭಾಗವಹಿಸದೆ, 2017ರಲ್ಲಿ ನಡೆದ ಯುಪಿಎಸ್‌ಸಿ ಪರೀಕ್ಷೆಯಲ್ಲಿ 124ನೇ ಱಂಕ್‌ ಪಡೆದು ಯಶಸ್ವಿಯಾಗಿದ್ದಾರೆ.

ಅಕ್ಟೋಬರ್‌ 14ರಂದು ಸೋಮವಾರ ಕೇರಳದ ತಿರುವನಂತಪುರಂನಲ್ಲಿ ಉಪ ಜಿಲ್ಲಾಧಿಕಾರಿಯಾಗಿ ಹೊಸ ಜವಾಬ್ದಾರಿ ಸ್ವೀಕರಿಸಿದ ಇವರು, ಭಾರತದ ಮೊದಲ ಅಂಧ ಐಎಎಸ್‌ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಹೊಸ ಹುದ್ದೆಯನ್ನು ಸ್ವೀಕರಿಸಿದ ಪ್ರಾಂಜಲ್ ಪಾಟೀಲ್, ನಾವು ಜೀವನದಲ್ಲಿ ಎಂದಿಗೂ ಸೋಲೊಪ್ಪಿಕೊಳ್ಳಬಾರದು. ನಿರಂತರವಾಗಿ ಶ್ರಮ ಪಟ್ಟರೆ ಕೊನೆಗೊಮ್ಮೆ ಗುರಿಯನ್ನು ತಲುಪಬಹುದು ಎಂದಿದ್ದಾರೆ.

Published On - 7:10 am, Sat, 19 October 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!