AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann Ki Baat Conclave: ಪ್ರಸಾರ ಭಾರತಿಯಿಂದ ಮನ್​ ಕಿ ಬಾತ್ ರಾಷ್ಟ್ರೀಯ ಸಮಾವೇಶ, ನಟ ಆಮಿರ್​ ಖಾನ್, ರವೀನಾ ಟಂಡನ್ ಭಾಗಿ

ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್​(Mann Ki Baat)ನ 100ನೇ ಸಂಚಿಕೆ ಏಪ್ರಿಲ್ 30 ರಂದು ಪ್ರಸಾರವಾಗಲಿದೆ.

Mann Ki Baat Conclave: ಪ್ರಸಾರ ಭಾರತಿಯಿಂದ ಮನ್​ ಕಿ ಬಾತ್ ರಾಷ್ಟ್ರೀಯ ಸಮಾವೇಶ, ನಟ ಆಮಿರ್​ ಖಾನ್, ರವೀನಾ ಟಂಡನ್ ಭಾಗಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Apr 26, 2023 | 12:24 PM

Share

ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್​(Mann Ki Baat)ನ 100ನೇ ಸಂಚಿಕೆ ಏಪ್ರಿಲ್ 30 ರಂದು ಪ್ರಸಾರವಾಗಲಿದೆ. ಪ್ರಧಾನಿ ಮೋದಿಯವರು 3 ಅಕ್ಟೋಬರ್ 2014 ರಂದು ಈ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಸಾರ್ವಜನಿಕರೊಂದಿಗೆ ಪ್ರಧಾನಿಯವರ ನೇರ ಸಂವಾದದ ಈ ವಿಶೇಷ ಕಾರ್ಯಕ್ರಮವನ್ನು ಸ್ಮರಣೀಯವಾಗಿಸಲು ಪ್ರಸಾರ ಭಾರತಿ ಇಂದು ಮನ್​ ಕಿ ಬಾತ್ ರಾಷ್ಟ್ರೀಯ ಸಮಾವೇಶವನ್ನು ಆಯೋಜಿಸಿದೆ.

ಮನ್​ ಕಿ ಬಾತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಿರ್ದಿಷ್ಟವಾಗಿ ಚರ್ಚಿಸಿದ ವಿಷಯಗಳ ಕುರಿತು ಚರ್ಚೆಗಳು ನಡೆಯಲಿವೆ. ಈ ವಿಶೇಷ ಸಂದರ್ಭದಲ್ಲಿ 100 ರೂ. ವಿಶೇಷ ನಾಣ್ಯ ಹಾಗೂ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮವೂ ಕೂಡ ಇದೆ.

ಸಮಾವೇಶದಲ್ಲಿ ಜಗದೀಪ್ ಧನ್​ಕರ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಗಣ್ಯರು ಆಗಮಿಸುತ್ತಿದ್ದಾರೆ. ಈ ಸೆಲೆಬ್ರಿಟಿಗಳಲ್ಲಿ ಆಮೀರ್ ಖಾನ್, ನಟಿ ರವೀನಾ ಟಂಡನ್, ಕ್ರೀಡಾಪಟು ನಿಖತ್ ಜರೀನ್ ಮತ್ತು ದೀಪಾ ಮಲಿಕ್ ಕೂಡ ಇರಲಿದ್ದಾರೆ.

ಮತ್ತಷ್ಟು ಓದಿ: PM Narendra Modi: ಪ್ರಧಾನಿ ಮೋದಿ ಮನ್​ ಕಿ ಬಾತ್ ಸಮಾಜದ ಮೇಲೆ ಬೀರಿದ ಪ್ರಭಾವ ಕುರಿತ ಪುಸ್ತಕ ಹೊರಬರಲಿದೆ

ಪ್ರಧಾನಿ ನರೇಂದ್ರ ಮೋದಿ ಅವರು ಮನ್​ ಕಿ ಬಾತ್ ಕಾರ್ಯಕ್ರಮವನ್ನು ಅಕ್ಟೋಬರ್ 3 2014ರಂದು ವಿಜಯದಶಮಿಯ ಸಂದರ್ಭದಲ್ಲಿ ಪ್ರಾರಂಭಿಸಿದರು.

ಈ ಕಾರ್ಯಕ್ರಮವು ಅಪಾರ ಜನಪ್ರಿಯತೆಯನ್ನು ಗಳಿಸಿತ್ತು ಮತ್ತು ಇದುವರೆಗೆ 99 ಸಂಚಿಕೆಗಳನ್ನು ಪೂರೈಸಿದೆ, ಇದರ 100ನೇ ಸಂಚಿಕೆಯು ಏಪ್ರಿಲ್ 30ರ ಭಾನುವಾರದಂದು ಪ್ರಸಾರವಾಗಲಿದೆ, ಈ ನಿಟ್ಟಿನಲ್ಲಿ ಇಂದು ಪ್ರಸಾರ ಭಾರತಿಯು ರಾಷ್ಟ್ರೀಯ ಸಮಾವೇಶ ಹಮ್ಮಿಕೊಂಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:18 pm, Wed, 26 April 23

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು