AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashant Kishor ಕಾಂಗ್ರೆಸ್ ಪಕ್ಷಕ್ಕೆ ಸೇರಲು ನಿರಾಕರಿಸಿದ ಪ್ರಶಾಂತ್ ಕಿಶೋರ್

ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರುತ್ತಾರೆ ಎಂಬ ಊಹಾಪೋಹಗಳು ಹಬ್ಬಿದ್ದವು. ಆದಾಗ್ಯೂ, ಕೆಲವೇ ದಿನಗಳ ಹಿಂದೆ ಚುನಾವಣಾ ತಂತ್ರಜ್ಞರು ಆಡಳಿತಾರೂಢ ಟಿಆರ್ ಎಸ್ ಅಧ್ಯಕ್ಷ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರೊಂದಿಗೆ ಮಾತುಕತೆಯನ್ನೂ ನಡೆಸಿದ್ದಾರೆ.

Prashant Kishor ಕಾಂಗ್ರೆಸ್ ಪಕ್ಷಕ್ಕೆ ಸೇರಲು ನಿರಾಕರಿಸಿದ ಪ್ರಶಾಂತ್ ಕಿಶೋರ್
ಪ್ರಶಾಂತ್ ಕಿಶೋರ್​
TV9 Web
| Edited By: |

Updated on:Apr 26, 2022 | 4:37 PM

Share

ಕಾಂಗ್ರೆಸ್‌ನ (Congress) ಸರಣಿ ಸಭೆಗಳ ನಂತರ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ (Prashant Kishor) ಪಕ್ಷಕ್ಕೆ ಸೇರಲು ನಿರಾಕರಿಸಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಹೇಳಿದ್ದಾರೆ. ಪ್ರಶಾಂತ್ ಕಿಶೋರ್ ಅವರ ಪ್ರಸ್ತುತಿ ಮತ್ತು ಚರ್ಚೆಯ ನಂತರ, ಕಾಂಗ್ರೆಸ್ ಅಧ್ಯಕ್ಷರು ಸಶಕ್ತ ಕ್ರಿಯಾ ಗುಂಪು 2024 ಅನ್ನು ರಚಿಸಿದ್ದಾರೆ ಮತ್ತು ನಿರ್ದಿಷ್ಟ ಜವಾಬ್ದಾರಿ ಹೊಂದಿರುವ ಗುಂಪಿನ ಭಾಗವಾಗಿ ಪಕ್ಷಕ್ಕೆ ಸೇರಲು ಅವರನ್ನು ಆಹ್ವಾನಿಸಿದ್ದಾರೆ.ಆದರೆ ಅವರು ನಿರಾಕರಿಸಿದರು. ಅವರ ಪ್ರಯತ್ನಗಳು ಮತ್ತು ಪಕ್ಷಕ್ಕೆ ನೀಡಿದ ಸಲಹೆಯನ್ನು ನಾವು ಶ್ಲಾಘಿಸುತ್ತೇವೆ ಎಂದು ರಣದೀಪ್ ಸುರ್ಜೆವಾಲಾ (Randeep Surjewala) ಹೇಳಿದ್ದಾರೆ. 2024 ರ ಚುನಾವಣೆಗೆ ಪಕ್ಷದ ಯೋಜನೆ ಕುರಿತು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಪ್ರಸ್ತುತಿ ಕುರಿತು ಚರ್ಚಿಸಿದ ದಿನಗಳ ನಂತರ ಮುಂಬರುವ ರಾಜಕೀಯ ಸವಾಲುಗಳನ್ನು ಎದುರಿಸಲು ಅಧಿಕಾರಯುತ ಗುಂಪನ್ನು ರಚಿಸಲಾಗುವುದು ಎಂದು ಕಾಂಗ್ರೆಸ್ ಸೋಮವಾರ ಪ್ರಕಟಿಸಿದೆ. ಕಿಶೋರ್ ಅವರು ಮಂಡಿಸಿದ ಯೋಜನೆ ಸೇರಿದಂತೆ ಮುಂದಿನ ಸಾರ್ವತ್ರಿಕ ಮತ್ತು ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕಾರ್ಯತಂತ್ರವನ್ನು ರೂಪಿಸಲು ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.  ಕಿಶೋರ್ ಕಾಂಗ್ರೆಸ್ ಪಕ್ಷಕ್ಕೆ ಸೇರಲು ಉತ್ಸುಕರಾಗಿದ್ದರು ಮತ್ತು ಯಾವುದೇ ನಿರೀಕ್ಷೆಗಳಿಲ್ಲದೆ ಹಾಗೆ ಮಾಡಲು ಬಯಸಿದ್ದರು. ಕಳೆದ ವಾರದಲ್ಲಿ ಪಕ್ಷದ ಉನ್ನತ ನಾಯಕರ ಚರ್ಚೆಯಂತೆ ಪಕ್ಷಕ್ಕೆ ಬೇಕಾದ ಪ್ರಸ್ತುತಿಯನ್ನು ಸಹ ಮಾಡಿದ್ದರು. ಸತತ ಸೋಲಿನ ಹಿನ್ನಲೆಯಲ್ಲಿ ಮುಂಬರುವ ಚುನಾವಣೆಗೆ ರಣತಂತ್ರ ರೂಪಿಸಲು ಕಾಂಗ್ರೆಸ್ ಹರಸಾಹಸ ಪಡುತ್ತಿದೆ.

ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರುತ್ತಾರೆ ಎಂಬ ಊಹಾಪೋಹಗಳು ಹಬ್ಬಿದ್ದವು. ಆದಾಗ್ಯೂ, ಕೆಲವೇ ದಿನಗಳ ಹಿಂದೆ ಚುನಾವಣಾ ತಂತ್ರಜ್ಞರು ಆಡಳಿತಾರೂಢ ಟಿಆರ್ ಎಸ್ ಅಧ್ಯಕ್ಷ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರೊಂದಿಗೆ ಮಾತುಕತೆಯನ್ನೂ ನಡೆಸಿದ್ದಾರೆ.

ಕಿಶೋರ್ ಮತ್ತು ಕಾಂಗ್ರೆಸ್ ನಡುವಿನ ಮಾತುಕತೆಗಳ ನಡುವೆ ಐ-ಪಿಎಸಿಯೊಂದಿಗೆ ಕೆಲಸ ಮಾಡುವ ಸಭೆ ಮತ್ತು ಟಿಆರ್‌ಎಸ್ ನಿರ್ಧಾರವು ಅಚ್ಚರಿಯನ್ನುಂಟು ಮಾಡಿತ್ತು.

ತೆಲಂಗಾಣ ವಿಧಾನಸಭಾ ಚುನಾವಣೆಗಾಗಿ ಟಿಆರ್‌ಎಸ್‌ನೊಂದಿಗೆ ಅವರ ಕಂಪನಿ ಐ-ಪಿಎಸಿ ಸಹಿ ಹಾಕಿದ್ದ ಒಪ್ಪಂದವೇ ಅವರು ಕಾಂಗ್ರೆಸ್‌ಗೆ ಸೇರದಿರಲು ಕಾರಣ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಇತ್ತ ಕಾಂಗ್ರೆಸ್ ನಾಯಕತ್ವವು ಇದನ್ನು ಹಿತಾಸಕ್ತಿ ಸಂಘರ್ಷ ಎಂದು ಪರಿಗಣಿಸಿದೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಹಾಗೂ ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಜೆಡಿಯು ಚುನಾವಣಾ ನಿರ್ವಹಣೆಗಾಗಿ ಕಿಶೋರ್ ಅವರನ್ನು ತೊಡಗಿಸಿಕೊಂಡಿದೆ.

ಇದನ್ನೂ ಓದಿ: ಭಾರತದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ನೀಡಿರುವ ಸಲಹೆಯೇನು?

Published On - 4:02 pm, Tue, 26 April 22

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್