AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ ಸಿಎಂ ಪ್ರಧಾನ ಸಲಹೆಗಾರನ ಸ್ಥಾನಕ್ಕೆ  ಪ್ರಶಾಂತ್ ಕಿಶೋರ್ ರಾಜೀನಾಮೆ​; ಪತ್ರದಲ್ಲಿ ಅಚ್ಚರಿಯ ವಿಷಯ ಉಲ್ಲೇಖ

ಪ್ರಶಾಂತ್​ ಕಿಶೋರ್​ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಪಂಜಾಬ್​ ಮುಖ್ಯಮಂತ್ರಿ ಕಚೇರಿಗೆ ಗೊತ್ತಿರಲಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ ಪ್ರಶಾಂತ್​ ಕಿಶೋರ್​ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಾರೆ ಎಂಬುದೊಂದು ಸುದ್ದಿ ಹರಡುತ್ತಿದೆ.

ಪಂಜಾಬ್​ ಸಿಎಂ ಪ್ರಧಾನ ಸಲಹೆಗಾರನ ಸ್ಥಾನಕ್ಕೆ  ಪ್ರಶಾಂತ್ ಕಿಶೋರ್ ರಾಜೀನಾಮೆ​; ಪತ್ರದಲ್ಲಿ ಅಚ್ಚರಿಯ ವಿಷಯ ಉಲ್ಲೇಖ
ಪ್ರಶಾಂತ್​ ಕಿಶೋರ್​
TV9 Web
| Edited By: |

Updated on:Aug 05, 2021 | 1:05 PM

Share

ಪಂಜಾಬ್​ ಮುಖ್ಯಮಂತ್ರಿ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಪ್ರಧಾನ ಸಲಹೆಗಾರ (Principal Advisor) ಸ್ಥಾನಕ್ಕೆ ಚುನಾವಣಾ ತಂತ್ರಜ್ಞ ಪ್ರಶಾಂತ್​ ಕಿಶೋರ್ (Prashant Kishor)​ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಸಲ್ಲಿಸಿ ಬರೆದಿರುವ ಪತ್ರದಲ್ಲಿ ಪ್ರಶಾಂತ್ ಕಿಶೋರ್​ ಒಂದು ಆಸಕ್ತಿದಾಯಕ ವಿಚಾರ ಹೇಳಿದ್ದಾರೆ. ನನಗೆ ಸಾರ್ವಜನಿಕ ಜೀವನದಿಂದ ತಾತ್ಕಾಲಿಕವಾಗಿ ವಿರಾಮಬೇಕಾಗಿದೆ. ನಿಮ್ಮ ಪ್ರಧಾನ ಸಲಹೆಗಾರನಾಗಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ರಾಜೀನಾಮೆ ನೀಡುತ್ತಿದ್ದೇನೆ. ನಾನು ಮುಂದೆ ಏನು ಮಾಡುತ್ತೇನೆ ಎಂಬುದಿನ್ನೂ ನಿರ್ಧರಿಸಿಲ್ಲ ಎಂದು ಉಲ್ಲೇಖಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಏಕಾಏಕಿ ನಿರ್ಧಾರ? ಪ್ರಶಾಂತ್ ಕಿಶೋರ್​ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಪಂಜಾಬ್​ ಮುಖ್ಯಮಂತ್ರಿ ಕಚೇರಿಗೆ ಗೊತ್ತಿರಲಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ ಪ್ರಶಾಂತ್​ ಕಿಶೋರ್​ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಾರೆ ಎಂಬುದೊಂದು ಸುದ್ದಿ ಹರಡುತ್ತಿದೆ. ಅದೇ ಹೊತ್ತಲ್ಲಿ ಹೀಗೆ ಪ್ರಧಾನ ಸಲಹೆಗಾರನ ಹುದ್ದೆಗೆ ರಾಜೀನಾಮೆ ಕೊಟ್ಟಿದ್ದು, ಅನುಮಾನ ಇನ್ನಷ್ಟು ಬಲವಾಗುವಂತೆ ಮಾಡಿದೆ. ಕಳೆದ ತಿಂಗಳು ಪ್ರಶಾಂತ್​ ಕಿಶೋರ್​, ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಭೇಟಿಯಾಗಿದ್ದರು. ಆಗಿನಿಂದಲೇ ಪ್ರಶಾಂತ್ ಕಿಶೋರ್​ ಕಾಂಗ್ರೆಸ್​ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಹಾಗೇ, ಪ್ರಶಾಂತ್ ಕಿಶೋರ್ ಪಕ್ಷಕ್ಕೆ ಸೇರ್ಪಡೆಯಾಗುವ ಸಂಬಂಧ ಚರ್ಚೆ ನಡೆಸಲು ರಾಹುಲ್​ ಗಾಂಧಿ ತಮ್ಮ ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸಿದ್ದರು ಎಂಬ ಮಾಹಿತಿಯೂ ಸಿಕ್ಕಿದೆ. ಬರೀ ಇವಿಷ್ಟೇ ಅಲ್ಲ, ಪ್ರಶಾಂತ್ ಕಿಶೋರ್​ ಮತ್ತು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್​ ಅವರ ಭೇಟಿಯೂ ಸಹ ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು. ಸದ್ಯಕ್ಕಂತೂ ಪ್ರಶಾಂತ್ ಕಿಶೋರ್ ಮುಂದಿನ ನಡೆ ಬಗ್ಗೆ ಯಾವುದೇ ಮಾಹಿತಿಯೂ ಇಲ್ಲ.

ಇದನ್ನೂ ಓದಿ: Personal Finance: ಹಣದ ಎಮರ್ಜೆನ್ಸಿ ಇದ್ದಲ್ಲಿ ಎಫ್​ಡಿ ಮೇಲೆ ಸಾಲ ತೆಗೆದುಕೊಳ್ಳೋದಾ ಅಥವಾ ಎಫ್​ಡಿ ಮುರಿಸೋದಾ?

ವದುವೆಯಲ್ಲಿ ವರನ ಸಕತ್ ಡಾನ್ಸ್! ನಾಚಿ ನೀರಾದ ವಧುವಿನ ವಿಡಿಯೋ ವೈರಲ್

Prashant Kishor Resigns As Principal Advisor of Punjab Cm

Published On - 12:01 pm, Thu, 5 August 21

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ