AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashant Kishor: ಬಿಜೆಪಿ ಗೆಲುವಿನ ಸುಳಿವು ಕೊಟ್ಟಿರುವ ಟಿಎಮ್​ಸಿ ಸಲಹೆಗಾರ ಪ್ರಶಾಂತ್​ ಕಿಶೋರ್​

West Bengal Assembly Elections 2021: ಟಿಎಮ್​ಸಿ ಸಲಹೆಗಾರ ಪ್ರಶಾಂತ್​ ಕಿಶೋರ್​​, ತಮ್ಮ ಅಂತರಿಕ ಆನ್​ಲೈನ್​ ಮೀಟಿಂಗ್​ನಲ್ಲಿ, ಬಿಜೆಪಿಗೆ ಬೆಂಬಲ ಸಿಗುವ ಲಕ್ಷಣ ಕಾಣುತ್ತಿದೆ ಎಂದು ಹೇಳಿದ್ದಾರೆ. ಇದನ್ನು ಬಿಜೆಪಿ ಐಟಿ ಸೆಲ್​ ಮುಖ್ಯಸ್ಥ ಅಮಿತ್​ ಮಾಲವೀಯ ಹೊರಗೆಡವಿದ ಬೆನ್ನಲ್ಲೇ ಕಿಶೋರ್​ ಕೂಡ ಪ್ರತಿಕ್ರಿಯಿಸಿದ್ದಾರೆ. ನಮ್ಮ ಕ್ಲಬ್​ಹೌಸ್​ ಮಾತುಕತೆಯನ್ನು ಇಷ್ಟು ಗಂಭೀರವಾಗಿ ಪರಿಗಣಿಸಿದೆ ಎನ್ನುವುದು ಖುಷಿಯ ಸಂಗತಿ.

Prashant Kishor: ಬಿಜೆಪಿ ಗೆಲುವಿನ ಸುಳಿವು ಕೊಟ್ಟಿರುವ ಟಿಎಮ್​ಸಿ ಸಲಹೆಗಾರ ಪ್ರಶಾಂತ್​ ಕಿಶೋರ್​
ಪ್ರಶಾಂತ್​ ಕಿಶೋರ್​
Skanda
| Edited By: |

Updated on: Apr 10, 2021 | 10:51 AM

Share

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಈ ಬಾರಿ ಟಿಎಂಸಿ ಮತ್ತು ಬಿಜೆಪಿ ನಡುವಿನ ನೇರ ಹಣಾಹಣಿ ಎಂದು ಪರಿಗಣಿಸಲಾಗಿದೆ. ಸದ್ಯ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯುತ್ತಿರುವ ನಡುವಲ್ಲೇ ಟಿಎಂಸಿ ಪಕ್ಷದ ಚುನಾವಣಾ ಪ್ರಚಾರದ ಸಲಹೆಗಾರ ಪ್ರಶಾಂತ್​ ಕಿಶೋರ್ ಮಾತನಾಡಿದ್ದಾರೆ ಎನ್ನಲಾದ ಧ್ವನಿ ಮುದ್ರಿಕೆ ಹೊರಬಿದ್ದಿದ್ದು, ಅದರಲ್ಲಿ ಬಿಜೆಪಿಗೆ ಗೆಲುವು ಲಭಿಸುವ ಬಗ್ಗೆ ಮಾತುಕತೆ ನಡೆದಿದೆ. ಬಿಜೆಪಿಯ ಬಲದ ಬಗ್ಗೆ ಟಿಎಂಸಿಗೆ ಈಗ ಅರಿವಾಗಿದೆ ಎಂದು ಬಿಜೆಪಿಯ ಅಮಿತ್​ ಮಾಳವಿಯಾ ಸರಣಿ ಟ್ವೀಟ್​ ಮಾಡಿದ್ದಾರೆ ಹಾಗೂ ಅದಕ್ಕೆ ಸ್ವತಃ ಪ್ರಶಾಂತ್​ ಕಿಶೋರ್ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅಮಿತ್​ ಮಾಳವಿಯಾ, ಟಿಎಂಸಿಯ ಆಂತರಿಕ ಸರ್ವೇ ಕೂಡ ಬಿಜೆಪಿಗೆ ಬಹುಮತ ಬರುವ ಬಗ್ಗೆ ಅಭಿಪ್ರಾಯ ಹೊರಹಾಕಿದೆ ಎಂದು ಗೊತ್ತಾಗಿದೆ. ಇಲ್ಲಿನ ಮತಗಳು ಮೋದಿಗೆ ಬರಲಿದೆ. ಪಶ್ಚಿಮ ಬಂಗಾಳದ ಎಸ್​ಸಿ ಸಮುದಾಯ ಸಹ ಬಿಜೆಪಿಗೆ ಮತ ಹಾಕುತ್ತಿದೆ ಎಂದು ಹೇಳಿದ್ದಾರೆ. ಟಿಎಂಸಿ ಹಾಗೂ ಮಮತಾ 20 ವರ್ಷಗಳಿಂದ ಮುಸ್ಲಿಂ ಸಮುದಾಯಕ್ಕೆ ಏನು ಮಾಡಿದ್ದಾರೋ ಅದರ ಪ್ರತಿಫಲ ಈ ಬಾರಿ ಚುನಾವಣಾ ಫಲಿತಾಂಶದಲ್ಲಿ ಕಾಣಲಿದೆ. ಮೋದಿ ಪಶ್ಚಿಮ ಬಂಗಾಳದಲ್ಲಿ ದೊಡ್ಡ ಮಟ್ಟದಲ್ಲಿ ಪ್ರಸಿದ್ಧಿ ಗಳಿಸಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಬೇಡ. ಆಡಳಿತರೂಢ ಟಿಎಂಸಿ ವಿರೋಧಿ ಅಲೆ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಇಲ್ಲಿವರೆಗೆ ಜಾತೀ ಆಧಾರಿತ ಚುನಾವಣೆ ಪಶ್ಚಿಮ ಬಂಗಾಲದಲ್ಲಿ ನಡೆಯುತ್ತಿರಲಿಲ್ಲ. ಹಾಗಂತ, ಮೊದಲು ಆಳಿದ ಕಮ್ಯುನಿಸ್ಟ್​ರು ಮತ್ತು ಆ ನಂತರ ಬಂದ ತೃಣ ಮೂಲ ಕಾಂಗ್ರೆಸ್​ ಬಹಳ ಪ್ರಬುದ್ಧತೆ ತೋರಿಸಿದ್ದರು ಎಂಬ ಅರ್ಥ ಅಲ್ಲ. ಈ ಎರಡು ಪಕ್ಷಗಳ ಮೇಲೆ ಮುಸ್ಲಿಮ್​ ತುಷ್ಟೀಕರಣದ ಆರೋಪ ಇದೆ. ಒಮ್ಮೆ ಈಗ ಚರ್ಚೆ ಆಗಿರುವಂತೆ ಏನಾದರೂ ಬಿಜೆಪಿ ಮುನ್ನಡೆದರೆ, ಪ್ರಾಯಶಃ ಮುಸ್ಲಮ್​​ ತುಷ್ಟೀಕರಣಕ್ಕೆ ತೆತ್ತ ಬೆಲೆ ಇದಾಗುತ್ತದೆ.

ಎಸ್​ಸಿ ಸಮುದಾಯದ ಮತಗಳೇ ಬಿಜೆಪಿಗೆ ಲಾಭ ತಂದುಕೊಡಲಿವೆ ಎಂದು ಟಿಎಂಸಿ ಪಕ್ಷದ ಚುನಾವಣಾ ಪ್ರಚಾರದ ಸಲಹೆಗಾರರೇ ಹೇಳುತ್ತಿದ್ದಾರೆ. ಅವರಿಗೆ ತಾವು ಸಾರ್ವಜನಿಕವಾಗಿ ಈ ಗುಟ್ಟುಗಳನ್ನು ಹಂಚಿಕೊಳ್ಳುತ್ತಿದ್ದೇವೆಂದು ಅರಿವು ಇದ್ದಿರಲಿಕ್ಕಿಲ್ಲ. ಈಗ ಅವರ ಗುಟ್ಟು ಬಯಲಾಗಿದೆ ಎಂದು ಕಾಲೆಳೆದಿದ್ದಾರೆ.

ಬಿಜೆಪಿ ಅವರ ನಾಯಕರ ಮಾತಿಗಿಂತಲೂ ನಮ್ಮ ಚಾ್ಟ್ ಬಗ್ಗೆ ಗಂಭೀರವಾಗಿದೆ ಇದಕ್ಕೆ ಪ್ರತ್ಯುತ್ತರಿಸಿರುವ ಪ್ರಶಾಂತ್​ ಕಿಶೋರ್, ಬಿಜೆಪಿ ನಮ್ಮ ಕ್ಲಬ್​ಹೌಸ್​ ಮಾತುಕತೆಯನ್ನು ಇಷ್ಟು ಗಂಭೀರವಾಗಿ ಪರಿಗಣಿಸಿದೆ ಎನ್ನುವುದು ಖುಷಿಯ ಸಂಗತಿ. ಅವರು ತಮ್ಮ ನಾಯಕರ ಮಾತಿಗಿಂತಲೂ ನಮ್ಮ ಚಾಟ್​ ಬಗ್ಗೆ ಹೆಚ್ಚು ಗಮನ ನೀಡುತ್ತಿರುವಂತಿದೆ. ಮಾತುಕತೆಯಲ್ಲಿ ತಮಗೆ ಬೇಕಾದ ಭಾಗವನ್ನು ಮಾತ್ರ ಆರಿಸಿಕೊಂಡು ಬಿಡುಗಡೆ ಮಾಡುವುದಲ್ಲ. ಮಾಡುವುದಿದ್ದರೆ ಪೂರ್ತಿ ಬಿಡುಗಡೆಗೊಳಿಸಲಿ ಎಂದು ಸವಾಲೆಸೆದಿದ್ದಾರೆ.

ಇದನ್ನೂ ಓದಿ: ವಿಶ್ಲೇಷಣೆ: ಪಶ್ಚಿಮ ಬಂಗಾಳ ಕದನ ಕಣ; 4ನೇ ಹಂತದ ಮತದಾನದಲ್ಲಿ ಸಿಂಗೂರ್ ಕ್ಷೇತ್ರ ನಿರ್ಣಾಯಕ

ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ