AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashant Kishor: ಬಿಜೆಪಿ ಗೆಲುವಿನ ಸುಳಿವು ಕೊಟ್ಟಿರುವ ಟಿಎಮ್​ಸಿ ಸಲಹೆಗಾರ ಪ್ರಶಾಂತ್​ ಕಿಶೋರ್​

West Bengal Assembly Elections 2021: ಟಿಎಮ್​ಸಿ ಸಲಹೆಗಾರ ಪ್ರಶಾಂತ್​ ಕಿಶೋರ್​​, ತಮ್ಮ ಅಂತರಿಕ ಆನ್​ಲೈನ್​ ಮೀಟಿಂಗ್​ನಲ್ಲಿ, ಬಿಜೆಪಿಗೆ ಬೆಂಬಲ ಸಿಗುವ ಲಕ್ಷಣ ಕಾಣುತ್ತಿದೆ ಎಂದು ಹೇಳಿದ್ದಾರೆ. ಇದನ್ನು ಬಿಜೆಪಿ ಐಟಿ ಸೆಲ್​ ಮುಖ್ಯಸ್ಥ ಅಮಿತ್​ ಮಾಲವೀಯ ಹೊರಗೆಡವಿದ ಬೆನ್ನಲ್ಲೇ ಕಿಶೋರ್​ ಕೂಡ ಪ್ರತಿಕ್ರಿಯಿಸಿದ್ದಾರೆ. ನಮ್ಮ ಕ್ಲಬ್​ಹೌಸ್​ ಮಾತುಕತೆಯನ್ನು ಇಷ್ಟು ಗಂಭೀರವಾಗಿ ಪರಿಗಣಿಸಿದೆ ಎನ್ನುವುದು ಖುಷಿಯ ಸಂಗತಿ.

Prashant Kishor: ಬಿಜೆಪಿ ಗೆಲುವಿನ ಸುಳಿವು ಕೊಟ್ಟಿರುವ ಟಿಎಮ್​ಸಿ ಸಲಹೆಗಾರ ಪ್ರಶಾಂತ್​ ಕಿಶೋರ್​
ಪ್ರಶಾಂತ್​ ಕಿಶೋರ್​
Skanda
| Updated By: Digi Tech Desk|

Updated on: Apr 10, 2021 | 10:51 AM

Share

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಈ ಬಾರಿ ಟಿಎಂಸಿ ಮತ್ತು ಬಿಜೆಪಿ ನಡುವಿನ ನೇರ ಹಣಾಹಣಿ ಎಂದು ಪರಿಗಣಿಸಲಾಗಿದೆ. ಸದ್ಯ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯುತ್ತಿರುವ ನಡುವಲ್ಲೇ ಟಿಎಂಸಿ ಪಕ್ಷದ ಚುನಾವಣಾ ಪ್ರಚಾರದ ಸಲಹೆಗಾರ ಪ್ರಶಾಂತ್​ ಕಿಶೋರ್ ಮಾತನಾಡಿದ್ದಾರೆ ಎನ್ನಲಾದ ಧ್ವನಿ ಮುದ್ರಿಕೆ ಹೊರಬಿದ್ದಿದ್ದು, ಅದರಲ್ಲಿ ಬಿಜೆಪಿಗೆ ಗೆಲುವು ಲಭಿಸುವ ಬಗ್ಗೆ ಮಾತುಕತೆ ನಡೆದಿದೆ. ಬಿಜೆಪಿಯ ಬಲದ ಬಗ್ಗೆ ಟಿಎಂಸಿಗೆ ಈಗ ಅರಿವಾಗಿದೆ ಎಂದು ಬಿಜೆಪಿಯ ಅಮಿತ್​ ಮಾಳವಿಯಾ ಸರಣಿ ಟ್ವೀಟ್​ ಮಾಡಿದ್ದಾರೆ ಹಾಗೂ ಅದಕ್ಕೆ ಸ್ವತಃ ಪ್ರಶಾಂತ್​ ಕಿಶೋರ್ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅಮಿತ್​ ಮಾಳವಿಯಾ, ಟಿಎಂಸಿಯ ಆಂತರಿಕ ಸರ್ವೇ ಕೂಡ ಬಿಜೆಪಿಗೆ ಬಹುಮತ ಬರುವ ಬಗ್ಗೆ ಅಭಿಪ್ರಾಯ ಹೊರಹಾಕಿದೆ ಎಂದು ಗೊತ್ತಾಗಿದೆ. ಇಲ್ಲಿನ ಮತಗಳು ಮೋದಿಗೆ ಬರಲಿದೆ. ಪಶ್ಚಿಮ ಬಂಗಾಳದ ಎಸ್​ಸಿ ಸಮುದಾಯ ಸಹ ಬಿಜೆಪಿಗೆ ಮತ ಹಾಕುತ್ತಿದೆ ಎಂದು ಹೇಳಿದ್ದಾರೆ. ಟಿಎಂಸಿ ಹಾಗೂ ಮಮತಾ 20 ವರ್ಷಗಳಿಂದ ಮುಸ್ಲಿಂ ಸಮುದಾಯಕ್ಕೆ ಏನು ಮಾಡಿದ್ದಾರೋ ಅದರ ಪ್ರತಿಫಲ ಈ ಬಾರಿ ಚುನಾವಣಾ ಫಲಿತಾಂಶದಲ್ಲಿ ಕಾಣಲಿದೆ. ಮೋದಿ ಪಶ್ಚಿಮ ಬಂಗಾಳದಲ್ಲಿ ದೊಡ್ಡ ಮಟ್ಟದಲ್ಲಿ ಪ್ರಸಿದ್ಧಿ ಗಳಿಸಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಬೇಡ. ಆಡಳಿತರೂಢ ಟಿಎಂಸಿ ವಿರೋಧಿ ಅಲೆ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಇಲ್ಲಿವರೆಗೆ ಜಾತೀ ಆಧಾರಿತ ಚುನಾವಣೆ ಪಶ್ಚಿಮ ಬಂಗಾಲದಲ್ಲಿ ನಡೆಯುತ್ತಿರಲಿಲ್ಲ. ಹಾಗಂತ, ಮೊದಲು ಆಳಿದ ಕಮ್ಯುನಿಸ್ಟ್​ರು ಮತ್ತು ಆ ನಂತರ ಬಂದ ತೃಣ ಮೂಲ ಕಾಂಗ್ರೆಸ್​ ಬಹಳ ಪ್ರಬುದ್ಧತೆ ತೋರಿಸಿದ್ದರು ಎಂಬ ಅರ್ಥ ಅಲ್ಲ. ಈ ಎರಡು ಪಕ್ಷಗಳ ಮೇಲೆ ಮುಸ್ಲಿಮ್​ ತುಷ್ಟೀಕರಣದ ಆರೋಪ ಇದೆ. ಒಮ್ಮೆ ಈಗ ಚರ್ಚೆ ಆಗಿರುವಂತೆ ಏನಾದರೂ ಬಿಜೆಪಿ ಮುನ್ನಡೆದರೆ, ಪ್ರಾಯಶಃ ಮುಸ್ಲಮ್​​ ತುಷ್ಟೀಕರಣಕ್ಕೆ ತೆತ್ತ ಬೆಲೆ ಇದಾಗುತ್ತದೆ.

ಎಸ್​ಸಿ ಸಮುದಾಯದ ಮತಗಳೇ ಬಿಜೆಪಿಗೆ ಲಾಭ ತಂದುಕೊಡಲಿವೆ ಎಂದು ಟಿಎಂಸಿ ಪಕ್ಷದ ಚುನಾವಣಾ ಪ್ರಚಾರದ ಸಲಹೆಗಾರರೇ ಹೇಳುತ್ತಿದ್ದಾರೆ. ಅವರಿಗೆ ತಾವು ಸಾರ್ವಜನಿಕವಾಗಿ ಈ ಗುಟ್ಟುಗಳನ್ನು ಹಂಚಿಕೊಳ್ಳುತ್ತಿದ್ದೇವೆಂದು ಅರಿವು ಇದ್ದಿರಲಿಕ್ಕಿಲ್ಲ. ಈಗ ಅವರ ಗುಟ್ಟು ಬಯಲಾಗಿದೆ ಎಂದು ಕಾಲೆಳೆದಿದ್ದಾರೆ.

ಬಿಜೆಪಿ ಅವರ ನಾಯಕರ ಮಾತಿಗಿಂತಲೂ ನಮ್ಮ ಚಾ್ಟ್ ಬಗ್ಗೆ ಗಂಭೀರವಾಗಿದೆ ಇದಕ್ಕೆ ಪ್ರತ್ಯುತ್ತರಿಸಿರುವ ಪ್ರಶಾಂತ್​ ಕಿಶೋರ್, ಬಿಜೆಪಿ ನಮ್ಮ ಕ್ಲಬ್​ಹೌಸ್​ ಮಾತುಕತೆಯನ್ನು ಇಷ್ಟು ಗಂಭೀರವಾಗಿ ಪರಿಗಣಿಸಿದೆ ಎನ್ನುವುದು ಖುಷಿಯ ಸಂಗತಿ. ಅವರು ತಮ್ಮ ನಾಯಕರ ಮಾತಿಗಿಂತಲೂ ನಮ್ಮ ಚಾಟ್​ ಬಗ್ಗೆ ಹೆಚ್ಚು ಗಮನ ನೀಡುತ್ತಿರುವಂತಿದೆ. ಮಾತುಕತೆಯಲ್ಲಿ ತಮಗೆ ಬೇಕಾದ ಭಾಗವನ್ನು ಮಾತ್ರ ಆರಿಸಿಕೊಂಡು ಬಿಡುಗಡೆ ಮಾಡುವುದಲ್ಲ. ಮಾಡುವುದಿದ್ದರೆ ಪೂರ್ತಿ ಬಿಡುಗಡೆಗೊಳಿಸಲಿ ಎಂದು ಸವಾಲೆಸೆದಿದ್ದಾರೆ.

ಇದನ್ನೂ ಓದಿ: ವಿಶ್ಲೇಷಣೆ: ಪಶ್ಚಿಮ ಬಂಗಾಳ ಕದನ ಕಣ; 4ನೇ ಹಂತದ ಮತದಾನದಲ್ಲಿ ಸಿಂಗೂರ್ ಕ್ಷೇತ್ರ ನಿರ್ಣಾಯಕ

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್