AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashant Kishor: ಗಾಂಧಿ ಕುಟುಂಬದೊಂದಿಗಿನ ಬಿರುಕಿನ ಸುಳಿವು ನೀಡಿದ ಪ್ರಶಾಂತ್ ಕಿಶೋರ್ ಟ್ವೀಟ್

ದುರದೃಷ್ಟವಶಾತ್ ಹಳೆಯ ಪಕ್ಷವಾದ ಕಾಂಗ್ರೆಸ್​ನಲ್ಲಿ ಆಳವಾಗಿ ಬೇರೂರಿರುವ ಸಮಸ್ಯೆಗಳಿಗೆ ಮತ್ತು ಪಕ್ಷದ ದೌರ್ಬ್ಯಗಳಿಗೆ ಯಾವುದೇ ತ್ವರಿತ ಪರಿಹಾರಗಳೂ ಇಲ್ಲ ಎಂದು ಪ್ರಶಾಂತ್ ಕಿಶೋರ್ ಟ್ವೀಟ್ ಮಾಡಿದ್ದಾರೆ.

Prashant Kishor: ಗಾಂಧಿ ಕುಟುಂಬದೊಂದಿಗಿನ ಬಿರುಕಿನ ಸುಳಿವು ನೀಡಿದ ಪ್ರಶಾಂತ್ ಕಿಶೋರ್ ಟ್ವೀಟ್
ಪ್ರಶಾಂತ್ ಕಿಶೋರ್
TV9 Web
| Edited By: |

Updated on: Oct 09, 2021 | 2:36 PM

Share

ನವದೆಹಲಿ: ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡಿದ್ದವು. ಜುಲೈನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಜೊತೆಗೆ ಚರ್ಚೆ ನಡೆಸಿದ ನಂತರವಂತೂ ಅವರು ಕಾಂಗ್ರೆಸ್ ಸೇರುವುದು ಖಚಿತ ಎನ್ನಲಾಗಿತ್ತು. ಆದರೆ, ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್​ಗೆ ಮುಜುಗರ ಉಂಟಾಗುವಂತೆ ಪ್ರಶಾಂತ್ ಕಿಶೋರ್ ಹೇಳಿಕೆ ನೀಡಿದ್ದೇ ಅವರ ದಾರಿಗೆ ಅಡ್ಡವಾದಂತಾಗಿದೆ.

ನಿನ್ನೆ ಮತ್ತೊಮ್ಮೆ ಲಖಿಂಪುರ ಖೇರಿ ಹಿಂಸಾಚಾರದ ಬಗ್ಗೆ ಟ್ವೀಟ್ ಮಾಡಿರುವ ಪ್ರಶಾಂತ್ ಕಿಶೋರ್ ಗ್ರ್ಯಾಂಡ್ ಓಲ್ಡ್ ಪಾರ್ಟಿ (ಜಿಓಪಿ)ಯನ್ನು ಲಖಿಂಪುರ ಖೇರಿಯಲ್ಲಿ ನಡೆದ ಘಟನೆಯ ಬಳಿಕ ತ್ವರಿತವಾಗಿ ಪುನಶ್ಚೇತನಗೊಳಿಸಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ ಉಂಟಾಗಿದೆ. ದುರದೃಷ್ಟವಶಾತ್ ಹಳೆಯ ಪಕ್ಷವಾದ ಕಾಂಗ್ರೆಸ್​ನಲ್ಲಿ ಆಳವಾಗಿ ಬೇರೂರಿರುವ ಸಮಸ್ಯೆಗಳಿಗೆ ಮತ್ತು ಪಕ್ಷದ ದೌರ್ಬ್ಯಗಳಿಗೆ ಯಾವುದೇ ತ್ವರಿತ ಪರಿಹಾರಗಳೂ ಇಲ್ಲ ಎಂದು ಪ್ರಶಾಂತ್ ಕಿಶೋರ್ ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಉಂಟಾದ ಹಿಂಸಾಚಾರವನ್ನು ವಿಪಕ್ಷವಾಗಿರುವ ಕಾಂಗ್ರೆಸ್ ಬಳಸಿಕೊಂಡು ಸರ್ಕಾರದ ವಿರುದ್ಧ ಸೂಕ್ತ ರೀತಿಯಲ್ಲಿ ಧ್ವನಿಯೆತ್ತಬಹುದಿತ್ತು. ಆದರೆ, ಕಾಂಗ್ರೆಸ್​ನಲ್ಲಿ ಇರುವ ದೌರ್ಬಲ್ಯ ಮತ್ತು ಬೇರೂರಿರುವ ಸಮಸ್ಯೆಗಳಿಗೆ ತಕ್ಷಣದ ಪರಿಹಾರಗಳಿಲ್ಲ ಎಂದು ಪ್ರಶಾಂತ್ ಕಿಶೋರ್ ನೀಡಿರುವ ಹೇಳಿಕೆ ಅವರು ಕಾಂಗ್ರೆಸ್ ಸೇರುವುದು ಅನುಮಾನ ಎಂಬುದಕ್ಕೆ ಪುಷ್ಠಿ ನೀಡಿದೆ.

ಗೋವಾದ ಕಾಂಗ್ರೆಸ್ ನಾಯಕರಾಗಿದ್ದ ಫೆಲೆರಿಯೋ ಸೆಪ್ಟೆಂಬರ್​ನಲ್ಲಿ ಕಾಂಗ್ರೆಸ್ ತೊರೆದು ಟಿಎಂಸಿ ಸೇರಿದ್ದರು. ನನಗೆ ಯಾವ ನಿರ್ಧಾರ ತೆಗೆದುಕೊಳ್ಳಬೇಕೆಂಬ ಗೊಂದಲವಿತ್ತು. ಆಗ ನಾನು ಪ್ರಶಾಂತ್ ಕಿಶೋರ್ ಅವರ ಸಲಹೆಯನ್ನು ಕೇಳಿದ್ದೆ. ಅವರ ಜೊತೆ ಸಾಕಷ್ಟು ಚರ್ಚೆ ನಡೆಸಿದ ನಂತರ ಕಾಂಗ್ರೆಸ್ ತೊರೆದು ಟಿಎಂಸಿಗೆ ಸೇರಲು ನಿರ್ಧರಿಸಿದೆ ಎಂದು ಹೇಳಿದ್ದರು. ಅದಾದ ಬಳಿಕ ಪ್ರಶಾಂತ್ ಕಿಶೋರ್ ನನಗೆ ಟಿಎಂಸಿ ಸೇರಲು ಸಲಹೆ ನೀಡಿರಲಿಲ್ಲ, ಅದು ನನ್ನ ಸ್ವಂತ ನಿರ್ಧಾರ ಎಂದು ಕೂಡ ಹೇಳಿದ್ದರು. ಹಾಗೇ, ಸುಮಾರು 1 ತಿಂಗಳ ಹಿಂದೆ ಕಾಂಗ್ರೆಸ್ ಉನ್ನತ ನಾಯಕರೊಂದಿಗೆ ಪ್ರಶಾಂತ್ ಕಿಶೋರ್ ಭೇಟಿ ಮಾಡಿದಾಗ ಹಲವು ಬೇಡಿಕೆಗಳನ್ನು ಇಟ್ಟಿದ್ದರು ಎನ್ನಲಾಗಿದೆ. ಇದರಿಂದ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆಯ ಹಾದಿಗಳು ಮುಚ್ಚಿವೆ ಎನ್ನಲಾಗುತ್ತಿದೆ.

ಮುಂಬರುವ ದಿನಗಳಲ್ಲಿ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ಇದಾದ ನಂತರ ಸಾರ್ವತ್ರಿಕ ಚುನಾವಣೆ ಬರುವ ಹಿನ್ನಲೆಯಲ್ಲಿ ಪಕ್ಷದಲ್ಲಿ ಅವರಿಗೆ ನೀಡುವ ಸ್ಥಾನದ ವಿಚಾರವಾಗಿ ಚರ್ಚೆಗಳನ್ನು ಮಾಡಲಾಗಿದೆ ಎಂದು ಮೂಲಗಳು ಹೇಳಿತ್ತು. 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯ ತಂತ್ರವನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಪ್ರಶಾಂತ್ ಕ್ರಿಶೋರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗಿತ್ತು. ಏಪ್ರಿಲ್-ಮೇ ತಿಂಗಳಲ್ಲಿ ನಡೆದ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಚುನಾವಣೆಗಳಲ್ಲಿ ಪ್ರಶಾಂತ್ ಕಿಶೋರ್ ತಂತ್ರಗಾರಿಕೆ ರೂಪಿಸುವಲ್ಲಿ ಯಶಸ್ವಿಯಾಗಿದ್ದರು. ಈ ವರ್ಷ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತ್ತು ತಮಿಳುನಾಡು ಚುನಾವಣೆಯಲ್ಲಿ ಡಿಎಂಕೆ ಗೆಲ್ಲಲು ಹಾಗೂ ಕಳೆದ ವರ್ಷ ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿ ಗೆಲ್ಲಲು ಪ್ರಶಾಂತ್ ಕಿಶೋರ್ ಅವರ ತಂತ್ರಗಾರಿಕೆಯೂ ಕಾರಣ.

ಇದನ್ನೂ ಓದಿ: Prashant Kishor: ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕಾಂಗ್ರೆಸ್​ ಸೇರ್ಪಡೆಗೆ ಹಿನ್ನಡೆಯಾಗಲು ಇದೇ ಕಾರಣ

ಕಾಂಗ್ರೆಸ್ ಪಕ್ಷ ಸೇರಲು ಪ್ರಶಾಂತ್ ಕಿಶೋರ್​ ಪ್ಲ್ಯಾನ್​?-ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಹೊರಬಿತ್ತು ಅಚ್ಚರಿಯ ವಿಚಾರ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!