AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಹಣ ವರ್ಗಾವಣೆ: ಶಿವಸೇನೆ ಶಾಸಕ ಪ್ರತಾಪ್ ಸರ್​ನಾಯಕ್ ಅರ್ಜಿಗೆ ಸುಪ್ರೀಂಕೋರ್ಟ್ ಮನ್ನಣೆ

₹ 175 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರತಾಪ್ ಸರ್​ನಾಯಕ್​, ಅವರ ಮಗ ವಿಹಾಂಗ್ ಸರ್​ನಾಯಕ್ ಮತ್ತು ದಾಯಾದಿ ಯೋಗೇಶ್ ಚಂಡೆಗಲ ಆರೋಪಿಗಳಾಗಿದ್ದಾರೆ.

ಅಕ್ರಮ ಹಣ ವರ್ಗಾವಣೆ: ಶಿವಸೇನೆ ಶಾಸಕ ಪ್ರತಾಪ್ ಸರ್​ನಾಯಕ್ ಅರ್ಜಿಗೆ ಸುಪ್ರೀಂಕೋರ್ಟ್ ಮನ್ನಣೆ
ಶಿವಸೇನೆ ಶಾಸಕ ಪ್ರತಾಪ್ ಸರ್ ನಾಯಕ್
ಆಯೇಷಾ ಬಾನು
| Edited By: |

Updated on: Dec 09, 2020 | 4:03 PM

Share

ಮುಂಬೈ: ಮುಂಬೈ ಮೆಟ್ರೊಪಾಲಿಟನ್ ರೀಜನ್ ಡೆವಲಪ್​ಮೆಂಟ್ ಅಥಾರಿಟಿಯ (MMRDA) ವಿವಿಧ ಯೋಜನೆಗಳಿಗೆ ಸೆಕ್ಯುರಿಟಿ ಗಾರ್ಡ್​ಗಳನ್ನು ಒದಗಿಸುವ ಒಪ್ಪಂದದಲ್ಲಿ ನಡೆದಿರುವ ಅಕ್ರಮಗಳ ಆರೋಪ ಹೊತ್ತಿರುವ ಟಾಪ್ಸ್​ ಗ್ರೂಪ್​ನ ಆಡಳಿತ ಮಂಡಳಿ ಸದಸ್ಯ ಶಿವಸೇನೆಯ ಶಾಸಕ ಪ್ರತಾಪ್ ಸರ್​ನಾಯಕ್​ಗೆ ಸುಪ್ರೀಂಕೋರ್ಟ್​ ಕೆಲ ರಿಯಾಯ್ತಿಗಳನ್ನು ನೀಡಿದೆ.

₹ 175 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರತಾಪ್ ಸರ್​ನಾಯಕ್​, ಅವರ ಮಗ ವಿಹಾಂಗ್ ಸರ್​ನಾಯಕ್ ಮತ್ತು ದಾಯಾದಿ ಯೋಗೇಶ್ ಚಂಡೆಗಲ ಆರೋಪಿಗಳಾಗಿದ್ದಾರೆ. ಇವರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್​ ಜಾರಿ ಮಾಡಿತ್ತು.

ಇಡಿ ಸಮನ್ಸ್​ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಪ್ರತಾಪ್ ಸರ್​ನಾಯಕ್​ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಅರ್ಜಿದಾರರ ವಿರುದ್ಧ ಯಾವುದೇ ಏಕಪಕ್ಷೀಯ ಕ್ರಮ ತೆಗೆದುಕೊಳ್ಳಬಾರದು ಎಂದು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಸೂಚಿಸಿತು. ನಮ್ಮ ವಕೀಲರ ಸಮ್ಮುಖದಲ್ಲಿಯೇ ವಿಚಾರಣೆ ನಡೆಸಬೇಕು. ವಿಚಾರಣೆಯ ವಿಡಿಯೊ ಮತ್ತು ಆಡಿಯೊ ರೆಕಾರ್ಡ್​ ಮಾಡಬೇಕು ಎಂದು ಸರ್​ದೇಸಾಯಿ ಅರ್ಜಿಯಲ್ಲಿ ವಿನಂತಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಪ್ಸ್​ ಗ್ರೂಪ್​ನ ವ್ಯವಸ್ಥಾಪಕ ನಿರ್ದೇಶಕ ಶಶಿಧರನ್​ರನ್ನು ಇಡಿ ಈಚೆಗೆ ಬಂಧಿಸಿತ್ತು. ಶಶಿಧರನ್ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ವಿವಿಧ ಕಲಂಗಳ ಅನ್ವಯ ಆರೋಪ ಹೊರಿಸಲಾಗಿತ್ತು.

2014 ಮತ್ತು 2015ರ ಅವಧಿಯಲ್ಲಿ ಮುಂಬೈ ಮೆಟ್ರೊಪಾಲಿಟನ್ ರೀಜನ್ ಡೆವಲಪ್​ಮೆಂಟ್ ಅಥಾರಿಟಿಯ (MMRDA) ಯೋಜನೆಗಳಿಗೆ ಸೆಕ್ಯುರಿಟಿ ಗಾರ್ಡ್​ ಒದಗಿಸುವಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಇಡಿ ಪರಿಶೀಲನೆ ನಡೆಸುತ್ತಿತ್ತು. ಟಾಪ್ಸ್ ಗ್ರೂಪ್‌ನ ಮಾಜಿ ನಿರ್ದೇಶಕ ರಮೇಶ್ ಅಯ್ಯರ್ ಕಂಪನಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಶಶೀಧರನ್ ಇತ್ತೀಚೆಗೆ ಮುಂಬೈ ಪೊಲೀಸರಿಗೆ ದೂರು ಸಲ್ಲಿಸಿದ್ದರು.

ಈ ಪ್ರಕರಣವು ಮುಂಬೈ ಪೊಲೀಸ್ ಇಲಾಖೆ ನೀಡಿರುವ ಆರ್ಥಿಕ ಅಪರಾಧಗಳ ಮಾಹಿತಿಯನ್ನು ಆಧರಿಸಿದೆ. 2009ರಲ್ಲಿ ಕೆಲವು ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳುವುದು ಮತ್ತು ಇತರ ಕೆಲವು ವಹಿವಾಟುಗಳಲ್ಲಿ ನಡೆದ ಅಕ್ರಮದ ಕುರಿತು ಟಾಪ್ಸ್ ಗ್ರೂಪ್​ನ ಪ್ರವರ್ತಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಹಿಂದುತ್ವ: ಶಿವ ಸೇನಾ ಮತ್ತು ಬಿಜೆಪಿ ನಡುವೆ ನಿಲ್ಲದ ಜಗಳ | BJP-Shiv Sena again lock horns over Hindutva

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ