AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಹಣ ವರ್ಗಾವಣೆ: ಶಿವಸೇನೆ ಶಾಸಕ ಪ್ರತಾಪ್ ಸರ್​ನಾಯಕ್ ಅರ್ಜಿಗೆ ಸುಪ್ರೀಂಕೋರ್ಟ್ ಮನ್ನಣೆ

₹ 175 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರತಾಪ್ ಸರ್​ನಾಯಕ್​, ಅವರ ಮಗ ವಿಹಾಂಗ್ ಸರ್​ನಾಯಕ್ ಮತ್ತು ದಾಯಾದಿ ಯೋಗೇಶ್ ಚಂಡೆಗಲ ಆರೋಪಿಗಳಾಗಿದ್ದಾರೆ.

ಅಕ್ರಮ ಹಣ ವರ್ಗಾವಣೆ: ಶಿವಸೇನೆ ಶಾಸಕ ಪ್ರತಾಪ್ ಸರ್​ನಾಯಕ್ ಅರ್ಜಿಗೆ ಸುಪ್ರೀಂಕೋರ್ಟ್ ಮನ್ನಣೆ
ಶಿವಸೇನೆ ಶಾಸಕ ಪ್ರತಾಪ್ ಸರ್ ನಾಯಕ್
Follow us
ಆಯೇಷಾ ಬಾನು
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 09, 2020 | 4:03 PM

ಮುಂಬೈ: ಮುಂಬೈ ಮೆಟ್ರೊಪಾಲಿಟನ್ ರೀಜನ್ ಡೆವಲಪ್​ಮೆಂಟ್ ಅಥಾರಿಟಿಯ (MMRDA) ವಿವಿಧ ಯೋಜನೆಗಳಿಗೆ ಸೆಕ್ಯುರಿಟಿ ಗಾರ್ಡ್​ಗಳನ್ನು ಒದಗಿಸುವ ಒಪ್ಪಂದದಲ್ಲಿ ನಡೆದಿರುವ ಅಕ್ರಮಗಳ ಆರೋಪ ಹೊತ್ತಿರುವ ಟಾಪ್ಸ್​ ಗ್ರೂಪ್​ನ ಆಡಳಿತ ಮಂಡಳಿ ಸದಸ್ಯ ಶಿವಸೇನೆಯ ಶಾಸಕ ಪ್ರತಾಪ್ ಸರ್​ನಾಯಕ್​ಗೆ ಸುಪ್ರೀಂಕೋರ್ಟ್​ ಕೆಲ ರಿಯಾಯ್ತಿಗಳನ್ನು ನೀಡಿದೆ.

₹ 175 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರತಾಪ್ ಸರ್​ನಾಯಕ್​, ಅವರ ಮಗ ವಿಹಾಂಗ್ ಸರ್​ನಾಯಕ್ ಮತ್ತು ದಾಯಾದಿ ಯೋಗೇಶ್ ಚಂಡೆಗಲ ಆರೋಪಿಗಳಾಗಿದ್ದಾರೆ. ಇವರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್​ ಜಾರಿ ಮಾಡಿತ್ತು.

ಇಡಿ ಸಮನ್ಸ್​ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಪ್ರತಾಪ್ ಸರ್​ನಾಯಕ್​ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಅರ್ಜಿದಾರರ ವಿರುದ್ಧ ಯಾವುದೇ ಏಕಪಕ್ಷೀಯ ಕ್ರಮ ತೆಗೆದುಕೊಳ್ಳಬಾರದು ಎಂದು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಸೂಚಿಸಿತು. ನಮ್ಮ ವಕೀಲರ ಸಮ್ಮುಖದಲ್ಲಿಯೇ ವಿಚಾರಣೆ ನಡೆಸಬೇಕು. ವಿಚಾರಣೆಯ ವಿಡಿಯೊ ಮತ್ತು ಆಡಿಯೊ ರೆಕಾರ್ಡ್​ ಮಾಡಬೇಕು ಎಂದು ಸರ್​ದೇಸಾಯಿ ಅರ್ಜಿಯಲ್ಲಿ ವಿನಂತಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಪ್ಸ್​ ಗ್ರೂಪ್​ನ ವ್ಯವಸ್ಥಾಪಕ ನಿರ್ದೇಶಕ ಶಶಿಧರನ್​ರನ್ನು ಇಡಿ ಈಚೆಗೆ ಬಂಧಿಸಿತ್ತು. ಶಶಿಧರನ್ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ವಿವಿಧ ಕಲಂಗಳ ಅನ್ವಯ ಆರೋಪ ಹೊರಿಸಲಾಗಿತ್ತು.

2014 ಮತ್ತು 2015ರ ಅವಧಿಯಲ್ಲಿ ಮುಂಬೈ ಮೆಟ್ರೊಪಾಲಿಟನ್ ರೀಜನ್ ಡೆವಲಪ್​ಮೆಂಟ್ ಅಥಾರಿಟಿಯ (MMRDA) ಯೋಜನೆಗಳಿಗೆ ಸೆಕ್ಯುರಿಟಿ ಗಾರ್ಡ್​ ಒದಗಿಸುವಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಇಡಿ ಪರಿಶೀಲನೆ ನಡೆಸುತ್ತಿತ್ತು. ಟಾಪ್ಸ್ ಗ್ರೂಪ್‌ನ ಮಾಜಿ ನಿರ್ದೇಶಕ ರಮೇಶ್ ಅಯ್ಯರ್ ಕಂಪನಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಶಶೀಧರನ್ ಇತ್ತೀಚೆಗೆ ಮುಂಬೈ ಪೊಲೀಸರಿಗೆ ದೂರು ಸಲ್ಲಿಸಿದ್ದರು.

ಈ ಪ್ರಕರಣವು ಮುಂಬೈ ಪೊಲೀಸ್ ಇಲಾಖೆ ನೀಡಿರುವ ಆರ್ಥಿಕ ಅಪರಾಧಗಳ ಮಾಹಿತಿಯನ್ನು ಆಧರಿಸಿದೆ. 2009ರಲ್ಲಿ ಕೆಲವು ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳುವುದು ಮತ್ತು ಇತರ ಕೆಲವು ವಹಿವಾಟುಗಳಲ್ಲಿ ನಡೆದ ಅಕ್ರಮದ ಕುರಿತು ಟಾಪ್ಸ್ ಗ್ರೂಪ್​ನ ಪ್ರವರ್ತಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಹಿಂದುತ್ವ: ಶಿವ ಸೇನಾ ಮತ್ತು ಬಿಜೆಪಿ ನಡುವೆ ನಿಲ್ಲದ ಜಗಳ | BJP-Shiv Sena again lock horns over Hindutva

ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ