AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಲಲ್ಲಾ ಪ್ರತಿಷ್ಠಾ ವರ್ಷಾಚರಣೆ ಜನವರಿ 11 ರಂದೇ ಏಕೆ? ಪ್ರತಿ ವರ್ಷವೂ ಇದೇ ದಿನ ಬರಲಿದೆಯೇ? ಇಲ್ಲಿದೆ ಉತ್ತರ

ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯಾಗಿದ್ದು 2024ರ ಜನವರಿ 22ರಂದು. ಆದರೆ, ಪ್ರತಿಷ್ಠಾ ವರ್ಷಾಚರಣೆಯನ್ನು 2025ರ ಜನವರಿ 11ರಂದು ಆಚರಿಸಲಾಗುತ್ತಿದೆ. ಇದಕ್ಕೆ ಕಾರಣವೇನು? ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಜನವರಿ 11 ಅನ್ನೇ ವರ್ಷಾಚರಣೆಗೆ ಆಯ್ಕೆ ಮಾಡಿಕೊಂಡಿದ್ದೇಕೆ? ಪ್ರತಿ ವರ್ಷವೂ ಜನವರಿ 11ರಂದೇ ವರ್ಷಾಚರಣೆ ನಡೆಯಲಿದೆಯೇ? ಈ ಪ್ರಶ್ನೆಗಳಿಗೆ ಉತ್ತರ ತಿಳಿಯಲು ಮುಂದೆ ಓದಿ.

ರಾಮಲಲ್ಲಾ ಪ್ರತಿಷ್ಠಾ ವರ್ಷಾಚರಣೆ ಜನವರಿ 11 ರಂದೇ ಏಕೆ? ಪ್ರತಿ ವರ್ಷವೂ ಇದೇ ದಿನ ಬರಲಿದೆಯೇ? ಇಲ್ಲಿದೆ ಉತ್ತರ
ರಾಮಲಲ್ಲಾ ಪ್ರತಿಷ್ಠಾ ವರ್ಷಾಚರಣೆ
ಗಣಪತಿ ಶರ್ಮಾ
|

Updated on:Jan 11, 2025 | 10:47 AM

Share

ಅಯೋಧ್ಯೆ, ಜನವರಿ 11: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರ ಲಕ್ಷಾಂತರ ಹಿಂದೂಗಳ ನಂಬಿಕೆ, ಭಕ್ತಿ ಮತ್ತು ಪರಿಶ್ರಮದ ಸಂಕೇತವಾಗಿದ್ದು, ಅಲ್ಲಿ 2024 ರ ಜನವರಿ 22 ರಂದು ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠೆ ನೆರವೇರಿತ್ತು. ಅಚ್ಚರಿಯ ವಿಚಾರವೆಂದರೆ, ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆಯ ವಾರ್ಷಿಕೋತ್ಸವವನ್ನು ಜನವರಿ 11 ರಂದು ಆಚರಿಸಲಾಗುತ್ತದೆ! ಇದಕ್ಕೆ ಕಾರಣ ಹಿಂದೂ ಸಂಪ್ರದಾಯ. ಪ್ರತಿಷ್ಠಾ ಮಹೋತ್ಸವ ನಡೆದ ದಿನ ಹಿಂದೂ ಪಂಚಾಂಗದ ಪ್ರಕಾರ ಜನವರಿ 11 ರಂದು ಬರುತ್ತದೆ. ಹೀಗಾಗಿ ಜನವರಿ 11ರಂದು ಪ್ರತಿಷ್ಠಾ ವರ್ಷಾಚರಣೆ ನಡೆಯುತ್ತಿದೆ.

ಈ ಆಚರಣೆಯು ಹಿಂದೂ ಸಂಸ್ಕೃತಿ ಮತ್ತು ಜ್ಯೋತಿಷ್ಯ ಶಾಸ್ತ್ರದೊಂದಿಗೆ ದೇವಾಲಯದ ಆಚರಣೆಯನ್ನು ಪ್ರತಿಬಿಂಬಿಸುತ್ತದೆ.

ಪುಷ್ಯ ಶುಕ್ಲ ದ್ವಾದಶಿಯಂದು ನೆರವೇರಿದ್ದ ಪ್ರಾಣ ಪ್ರತಿಷ್ಠೆ

ಕಳೆದ ವರ್ಷ ಪುಷ್ಯ (ಪೌಷ) ಶುಕ್ಲ ದ್ವಾದಶಿಯಂದು ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ವಿಗ್ರಹದ ಪ್ರಾಣಪ್ರತಿಷ್ಠೆ ನೆರವೇರಿತ್ತು. ಆ ಶುಭ ದಿನವನ್ನು ‘ಪ್ರತಿಷ್ಠಾ ದ್ವಾದಶಿ’ ಎಂದು ಆಚರಿಸಲು ರಾಮಜನ್ಮಭೂಮಿ ಟ್ರಸ್ಟ್ ಕರೆ ನೀಡಿತ್ತು. ಈ ವರ್ಷ (2025) ಜನವರಿ 11 ರಂದು ಪುಷ್ಯ ಶುಕ್ಲ ದ್ವಾದಶಿ ಇದೆ. ಹೀಗಾಗಿ ಪ್ರಾಣಪ್ರತಿಷ್ಠೆಯ ವರ್ಷಾಚರಣೆಯನ್ನು ಇಂದೇ ನಡೆಸಲಾಗುತ್ತಿದೆ.

ಪ್ರತಿ ವರ್ಷವೂ ಜನವರಿ 11ರಂದೇ ನಡೆಯಲಿದೆಯಾ ಉತ್ಸವ?

ಪ್ರತಿಷ್ಠಾ ಮಹೊತ್ಸವದ ವರ್ಷಾಚರಣೆ ಹಿಂದೂ ಕ್ಯಾಲೆಂಡರ್‌ ಪ್ರಕಾರ ನಡೆಯುವುದರಿಂದ ಪ್ರತಿ ವರ್ಷವೂ ಜನವರಿ 11ರಂದೇ ನಡೆಯಲಾರದು. ಇದು ಪ್ರತಿ ವರ್ಷವೂ ಬದಲಾಗಬಹುದು.

ಹಿಂದೂ ಸಂಪ್ರದಾಯದ ಪ್ರಕಾರ, ಹಬ್ಬಗಳನ್ನು ಪಾಶ್ಚಾತ್ಯ ಕ್ಯಾಲೆಂಡರ್​​ ದಿನಾಂಕಗಳಿಗೆ ಬದಲಾಗಿ ಪಂಚಾಗಗಳಲ್ಲಿ ಉಲ್ಲೇಖವಾಗಿರುವ ದಿನಗಳ ಆಧಾರದ ಮೇಲೆ ಆಚರಿಸಲಾಗುತ್ತದೆ. ಹೀಗಾಗಿ ಪ್ರಾಣಪ್ರತಿಷ್ಠೆಯ ವರ್ಷಾಚರಣೆ ಕೂಡ ಇದರಂತೆಯೇ ನಡೆಯುತ್ತಿದೆ.

ಇದನ್ನೂ ಓದಿ: ಪ್ರತಿಷ್ಠಾ ದ್ವಾದಶಿ: ಅಯೋಧ್ಯೆಯಲ್ಲಿ ಇಂದಿನಿಂದ ಮೂರು ದಿನ ಉತ್ಸವ, ಏನೇನಿರಲಿವೆ ನೋಡಿ

ಮೂರು ದಿನಗಳ ಕಾಲ ಅಯೋಧ್ಯೆಯಲ್ಲಿ ಉತ್ಸವ

ಅಯೋಧ್ಯೆಯಲ್ಲಿ ಮೂರು ದಿನಗಳ ಕಾಲ ಉತ್ಸವ ನಡೆಯಲಿದ್ದು, ವಿವಿಧ ಆಚರಣೆಗಳು, ಪ್ರಾರ್ಥನೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳಗೊಂಡಿರುತ್ತದೆ. ಭಕ್ತರು ಮತ್ತು ಸಂತರು ಭಗವಾನ್ ರಾಮನನ್ನು ಗೌರವಿಸಲು, ಪೂಜಿಸಲು ಈ ಉತ್ಸವ ಅನುವು ಮಾಡಿಕೊಡಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:12 am, Sat, 11 January 25

Follow Us
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ