AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lookout Notice: ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳ ಬಂಧನಕ್ಕೆ ಲುಕ್​ಔಟ್ ನೊಟೀಸ್ ಹೊರಡಿಸಿದ ಎನ್​ಐಎ, ಸುಳಿವು ಕೊಟ್ಟವರಿಗೆ ಬಹುಮಾನ

ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿಗಾಗಿ ಒಟ್ಟು ₹ 14 ಲಕ್ಷ ನಗದು ಬಹುಮಾನ ನೀಡುವಾಗಿ ಎನ್​ಐಎ ಘೋಷಿಸಿದೆ.

Lookout Notice: ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳ ಬಂಧನಕ್ಕೆ ಲುಕ್​ಔಟ್ ನೊಟೀಸ್ ಹೊರಡಿಸಿದ ಎನ್​ಐಎ, ಸುಳಿವು ಕೊಟ್ಟವರಿಗೆ ಬಹುಮಾನ
ಮೃತ ಪ್ರವೀಣ್ ನೆಟ್ಟಾರು (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 02, 2022 | 10:27 AM

Share

ದೆಹಲಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ (Praveen Nettar Murder) ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ರಾಷ್ಟ್ರೀಯ ತನಿಖಾ ದಳವು (National Investigative Agency – NIA) ಲುಕ್​ಔಟ್ ನೊಟೀಸ್ ಜಾರಿ ಮಾಡಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ನಿರಂತರ ಹುಡುಕಾಟ ನಡೆಯುತ್ತಿದೆ. ಆರೋಪಿಗಳ ಬಗ್ಗೆ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ ಘೋಷಿಸಲಾಗಿದೆ.

ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿಗಾಗಿ ಒಟ್ಟು ₹ 14 ಲಕ್ಷ ನಗದು ಬಹುಮಾನ ನೀಡುವಾಗಿ ಎನ್​ಐಎ ಘೋಷಿಸಿದೆ. ಮೊಹಮ್ಮದ್ ಮುಸ್ತಫಾ ಮತ್ತು ತುಫೈಲ್ ಬಗ್ಗೆ ಮಾಹಿತಿ ನೀಡಿದರೆ ₹ 5 ಲಕ್ಷ, ಇಬ್ಬರು ಆರೋಪಿಗಳಾದ ಉಮರ್ ಫಾರೂಕ್‌ ಹಾಗೂ ಅಬೂಬಕರ್ ಸಿದ್ದಿಕ್ ಬಗ್ಗೆ ಮಾಹಿತಿ ನೀಡಿದರೆ ₹ 2 ಲಕ್ಷ ನಗದು ಬಹುಮಾನ ನೀಡುವಾಗಿ ಎನ್​ಐಎ ಪ್ರಕಟಣೆಯಲ್ಲಿ ತಿಳಿಸಿದೆ.

ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಅವರನ್ನು ಜುಲೈ 26 ರಂದು ಬೆಳ್ಳಾರೆಯಲ್ಲಿರುವ ಅವರ ಕೋಳಿ ಅಂಗಡಿ ಬಳಿಯೇ ಹಂತಕರು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಇದು ಇಡೀ ರಾಜ್ಯಾದ್ಯಂತ ಕಾರ್ಯಕರ್ತರಲ್ಲಿ ಕಿಚ್ಚು ಹೊತ್ತಿಸಿತ್ತು. ಸ್ಥಳಕ್ಕೆ ಬಂದಿದ್ದ ಸಚಿವ ವಿ.ಸುನಿಲ್ ಕುಮಾರ್ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್​ ಕುಮಾರ್ ಕಟೀಲ್ ಅವರ ಕಾರು ತಡೆದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರವೀಣ್ ನೆಟ್ಟಾರು ಪತ್ನಿಗೆ ನೌಕರಿ

ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಎಂ. ಅವರಿಗೆ ಗುತ್ತಿಗೆ ಆಧಾರಿತ ಹಿರಿಯ ಸಹಾಯಕ ಹುದ್ದೆ ನೀಡಿ ರಾಜ್ಯ ಸರ್ಕಾರ ಆದೇಶ ನೀಡಿತ್ತು. ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಜನಸ್ಪಂದನ ಸಮಾವೇಶದಲ್ಲಿ ನೇಮಕಾತಿ ಮಾಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು. ಅದರಂತೆ ಸಿ ಗ್ರೂಪ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಡಿಸಿತ್ತು.

ಪ್ರವೀಣ್ ನೆಟ್ಟಾರು ಹತ್ಯೆಗೂ ಪಿಎಫ್​ಐ ನಿಷೇಧಕ್ಕೂ ಇದೆ ನಂಟು

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (Pupular Front of India – PFI) ಹಾಗೂ ಅದರ ಸಹವರ್ತಿ ಸಂಘಟನೆಗಳು ಅಥವಾ ಅಧೀನ ಸಂಘಟನೆಗಳನ್ನು ಕೇಂದ್ರ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ನಿಷೇಧಿಸಿ ಸೆಪ್ಟೆಂಬರ್ ತಿಂಗಳಲ್ಲಿ ಆದೇಶ ಹೊರಡಿಸಿತ್ತು. ನಿಷೇಧಕ್ಕೆ ಸಂಬಂಧಿಸಿದಂತೆ ಹೊರಡಿಸಿರುವ ಅಧಿಸೂಚನೆಯಲ್ಲಿ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣ ಪ್ರಸ್ತಾಪವಾಗಿತ್ತು. ಪಿಎಫ್​ಐ ನಿಷೇಧಕ್ಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತನ್ನ ಅಧಿಸೂಚನೆಯಲ್ಲಿ ನೀಡಿರುವ ವಿವರಣೆಯಲ್ಲಿ ಕರ್ನಾಟಕ ಸರ್ಕಾರದ ಶಿಫಾರಸನ್ನೂ ಉಲ್ಲೇಖಿಸಿತ್ತು.

ಸಂಜಿತ್ (ಕೇರಳ 2021), ವಿ.ರಾಮಲಿಂಗಮ್ (ತಮಿಳುನಾಡು 2019), ನಂದು (ಕೇರಳ 2021), ಅಭಿಮನ್ಯು (ಕೇರಳ 2018), ಬಿಬಿನ್ (ಕೇರಳ 2017), ಶರತ್ (ಕರ್ನಾಟಕ 2017), ಆರ್.ರುದ್ರೇಶ್ (ಕರ್ನಾಟಕ 2016), ಪ್ರವೀಣ್ ಪೂಜಾರಿ (ಕರ್ನಾಟಕ 2016), ಶಶಿ ಕುಮಾರ (ತಮಿಳುನಾಡು 2016) ಮತ್ತು ಪ್ರವೀಣ್ ನೆಟ್ಟಾರು (ಕರ್ನಾಟಕ 2022) ಅವರ ಕೊಲೆ ಸೇರಿದಂತೆ ಹಲವು ಅಪರಾಧ ಚಟುವಟಿಕೆಗಳಲ್ಲಿ ಪಿಎಫ್​ಐ ಭಾಗಿಯಾಗಿದೆ. ಸಾರ್ವಜನಿಕ ನೆಮ್ಮದಿಗೆ ಭಂಗ ತರುವುದು ಹಾಗೂ ಭಯ ಹೆಚ್ಚಿಸುವ ಉದ್ದೇಶವನ್ನು ಪಿಎಫ್​ಐ ಹೊಂದಿದೆ ಎಂದು ಕೇಂದ್ರ ಸರ್ಕಾರದ ಅಧಿಸೂಚನೆ ಹೇಳಿತ್ತು.

Follow Us
Web contact
Web contact

TV9 Kannada

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು