AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lookout Notice: ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳ ಬಂಧನಕ್ಕೆ ಲುಕ್​ಔಟ್ ನೊಟೀಸ್ ಹೊರಡಿಸಿದ ಎನ್​ಐಎ, ಸುಳಿವು ಕೊಟ್ಟವರಿಗೆ ಬಹುಮಾನ

ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿಗಾಗಿ ಒಟ್ಟು ₹ 14 ಲಕ್ಷ ನಗದು ಬಹುಮಾನ ನೀಡುವಾಗಿ ಎನ್​ಐಎ ಘೋಷಿಸಿದೆ.

Lookout Notice: ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳ ಬಂಧನಕ್ಕೆ ಲುಕ್​ಔಟ್ ನೊಟೀಸ್ ಹೊರಡಿಸಿದ ಎನ್​ಐಎ, ಸುಳಿವು ಕೊಟ್ಟವರಿಗೆ ಬಹುಮಾನ
ಮೃತ ಪ್ರವೀಣ್ ನೆಟ್ಟಾರು (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Nov 02, 2022 | 10:27 AM

Share

ದೆಹಲಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ (Praveen Nettar Murder) ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ರಾಷ್ಟ್ರೀಯ ತನಿಖಾ ದಳವು (National Investigative Agency – NIA) ಲುಕ್​ಔಟ್ ನೊಟೀಸ್ ಜಾರಿ ಮಾಡಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ನಿರಂತರ ಹುಡುಕಾಟ ನಡೆಯುತ್ತಿದೆ. ಆರೋಪಿಗಳ ಬಗ್ಗೆ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ ಘೋಷಿಸಲಾಗಿದೆ.

ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿಗಾಗಿ ಒಟ್ಟು ₹ 14 ಲಕ್ಷ ನಗದು ಬಹುಮಾನ ನೀಡುವಾಗಿ ಎನ್​ಐಎ ಘೋಷಿಸಿದೆ. ಮೊಹಮ್ಮದ್ ಮುಸ್ತಫಾ ಮತ್ತು ತುಫೈಲ್ ಬಗ್ಗೆ ಮಾಹಿತಿ ನೀಡಿದರೆ ₹ 5 ಲಕ್ಷ, ಇಬ್ಬರು ಆರೋಪಿಗಳಾದ ಉಮರ್ ಫಾರೂಕ್‌ ಹಾಗೂ ಅಬೂಬಕರ್ ಸಿದ್ದಿಕ್ ಬಗ್ಗೆ ಮಾಹಿತಿ ನೀಡಿದರೆ ₹ 2 ಲಕ್ಷ ನಗದು ಬಹುಮಾನ ನೀಡುವಾಗಿ ಎನ್​ಐಎ ಪ್ರಕಟಣೆಯಲ್ಲಿ ತಿಳಿಸಿದೆ.

ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಅವರನ್ನು ಜುಲೈ 26 ರಂದು ಬೆಳ್ಳಾರೆಯಲ್ಲಿರುವ ಅವರ ಕೋಳಿ ಅಂಗಡಿ ಬಳಿಯೇ ಹಂತಕರು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಇದು ಇಡೀ ರಾಜ್ಯಾದ್ಯಂತ ಕಾರ್ಯಕರ್ತರಲ್ಲಿ ಕಿಚ್ಚು ಹೊತ್ತಿಸಿತ್ತು. ಸ್ಥಳಕ್ಕೆ ಬಂದಿದ್ದ ಸಚಿವ ವಿ.ಸುನಿಲ್ ಕುಮಾರ್ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್​ ಕುಮಾರ್ ಕಟೀಲ್ ಅವರ ಕಾರು ತಡೆದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರವೀಣ್ ನೆಟ್ಟಾರು ಪತ್ನಿಗೆ ನೌಕರಿ

ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಎಂ. ಅವರಿಗೆ ಗುತ್ತಿಗೆ ಆಧಾರಿತ ಹಿರಿಯ ಸಹಾಯಕ ಹುದ್ದೆ ನೀಡಿ ರಾಜ್ಯ ಸರ್ಕಾರ ಆದೇಶ ನೀಡಿತ್ತು. ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಜನಸ್ಪಂದನ ಸಮಾವೇಶದಲ್ಲಿ ನೇಮಕಾತಿ ಮಾಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು. ಅದರಂತೆ ಸಿ ಗ್ರೂಪ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಡಿಸಿತ್ತು.

ಪ್ರವೀಣ್ ನೆಟ್ಟಾರು ಹತ್ಯೆಗೂ ಪಿಎಫ್​ಐ ನಿಷೇಧಕ್ಕೂ ಇದೆ ನಂಟು

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (Pupular Front of India – PFI) ಹಾಗೂ ಅದರ ಸಹವರ್ತಿ ಸಂಘಟನೆಗಳು ಅಥವಾ ಅಧೀನ ಸಂಘಟನೆಗಳನ್ನು ಕೇಂದ್ರ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ನಿಷೇಧಿಸಿ ಸೆಪ್ಟೆಂಬರ್ ತಿಂಗಳಲ್ಲಿ ಆದೇಶ ಹೊರಡಿಸಿತ್ತು. ನಿಷೇಧಕ್ಕೆ ಸಂಬಂಧಿಸಿದಂತೆ ಹೊರಡಿಸಿರುವ ಅಧಿಸೂಚನೆಯಲ್ಲಿ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣ ಪ್ರಸ್ತಾಪವಾಗಿತ್ತು. ಪಿಎಫ್​ಐ ನಿಷೇಧಕ್ಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತನ್ನ ಅಧಿಸೂಚನೆಯಲ್ಲಿ ನೀಡಿರುವ ವಿವರಣೆಯಲ್ಲಿ ಕರ್ನಾಟಕ ಸರ್ಕಾರದ ಶಿಫಾರಸನ್ನೂ ಉಲ್ಲೇಖಿಸಿತ್ತು.

ಸಂಜಿತ್ (ಕೇರಳ 2021), ವಿ.ರಾಮಲಿಂಗಮ್ (ತಮಿಳುನಾಡು 2019), ನಂದು (ಕೇರಳ 2021), ಅಭಿಮನ್ಯು (ಕೇರಳ 2018), ಬಿಬಿನ್ (ಕೇರಳ 2017), ಶರತ್ (ಕರ್ನಾಟಕ 2017), ಆರ್.ರುದ್ರೇಶ್ (ಕರ್ನಾಟಕ 2016), ಪ್ರವೀಣ್ ಪೂಜಾರಿ (ಕರ್ನಾಟಕ 2016), ಶಶಿ ಕುಮಾರ (ತಮಿಳುನಾಡು 2016) ಮತ್ತು ಪ್ರವೀಣ್ ನೆಟ್ಟಾರು (ಕರ್ನಾಟಕ 2022) ಅವರ ಕೊಲೆ ಸೇರಿದಂತೆ ಹಲವು ಅಪರಾಧ ಚಟುವಟಿಕೆಗಳಲ್ಲಿ ಪಿಎಫ್​ಐ ಭಾಗಿಯಾಗಿದೆ. ಸಾರ್ವಜನಿಕ ನೆಮ್ಮದಿಗೆ ಭಂಗ ತರುವುದು ಹಾಗೂ ಭಯ ಹೆಚ್ಚಿಸುವ ಉದ್ದೇಶವನ್ನು ಪಿಎಫ್​ಐ ಹೊಂದಿದೆ ಎಂದು ಕೇಂದ್ರ ಸರ್ಕಾರದ ಅಧಿಸೂಚನೆ ಹೇಳಿತ್ತು.

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ