AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prayagraj murders: ವಕೀಲ ಉಮೇಶ್‌ ಪಾಲ್‌ ಹಂತಕರ ಕಾರು ಚಲಾಯಿಸಿದ್ದ ವ್ಯಕ್ತಿಯನ್ನು ಎನ್​​ಕೌಂಟರ್ ಮಾಡಿದ ಯುಪಿ ಪೊಲೀಸ್

ದುಷ್ಕರ್ಮಿಗಳು ಬಂದು ಧೂಮಂಗಂಜ್ ಪ್ರದೇಶದಲ್ಲಿ ವಕೀಲ ಉಮೇಶ್ ಪಾಲ್ (48) ಮತ್ತು ಅವರ ಇಬ್ಬರು ಗನ್ನರ್ ಮೇಲೆ ದಾಳಿ ಮಾಡಿದ ಕಾರನ್ನು ಅರ್ಬಾಜ್ ಓಡಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಕೋರರು ಅದೇ ವಾಹನದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ

Prayagraj murders: ವಕೀಲ ಉಮೇಶ್‌ ಪಾಲ್‌ ಹಂತಕರ ಕಾರು ಚಲಾಯಿಸಿದ್ದ ವ್ಯಕ್ತಿಯನ್ನು ಎನ್​​ಕೌಂಟರ್ ಮಾಡಿದ ಯುಪಿ ಪೊಲೀಸ್
ಪ್ರಯಾಗ್ ರಾಜ್ ಮರ್ಡರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 27, 2023 | 10:35 PM

Share

2005ರಲ್ಲಿ ನಡೆದ ಬಹುಜನ ಸಮಾಜ ಪಕ್ಷದ (BSP) ಶಾಸಕ ರಾಜು ಪಾಲ್‌ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್‌ ಪಾಲ್‌ (Umesh Pal)ಮತ್ತು ಆತನ ಪೊಲೀಸ್‌ ಕಾವಲುಗಾರನ ಹತ್ಯೆಯಲ್ಲಿ ಭಾಗಿಯಾದ ಯುವಕನನ್ನು ಉತ್ತರ ಪ್ರದೇಶ ಪೊಲೀಸರು (UP Police) ಸೋಮವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆನ್ನು.ಪ್ರಯಾಗ್‌ರಾಜ್‌ನ ಧೂಮಂಗಂಜ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಅರ್ಬಾಜ್ ಎಂದು ಗುರುತಿಸಲಾದ ಆರೋಪಿಯ ಗುಂಡಿಕ್ಕಿ ಕೊಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಧೂಮಂಗಂಜ್‌ನ ನೆಹರು ಪಾರ್ಕ್ ಬಳಿ ಸ್ಥಳದಿಂದ ಮೋಟಾರ್‌ಸೈಕಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ದುಷ್ಕರ್ಮಿಗಳು ಬಂದು ಧೂಮಂಗಂಜ್ ಪ್ರದೇಶದಲ್ಲಿ ವಕೀಲ ಉಮೇಶ್ ಪಾಲ್ (48) ಮತ್ತು ಅವರ ಇಬ್ಬರು ಗನ್ನರ್ ಮೇಲೆ ದಾಳಿ ಮಾಡಿದ ಕಾರನ್ನು ಅರ್ಬಾಜ್ ಓಡಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಕೋರರು ಅದೇ ವಾಹನದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಅವರು ಹೇಳಿದರು. ಉಮೇಶ್ ಕಾರಿನಿಂದ ಹೊರಬರುತ್ತಿದ್ದಾಗ ಈ ಘಟನೆ ನಡೆದಿದೆ.

ದಾಳಿಯಲ್ಲಿ ಉಮೇಶ್ ಮತ್ತು ಗನ್ನರ್‌ಗಳಲ್ಲಿ ಒಬ್ಬರಾದ ಸಂದೀಪ್ ನಿಶಾದ್ ಮೃತಪಟ್ಟರೆ, ಎರಡನೇ ಗನ್ನರ್ ರಾಘವೇಂದ್ರ ಸಿಂಗ್ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದರು.

ಉಮೇಶ್ ಅವರು ಪತ್ನಿ ಜಯ ಹಾಗೂ ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

ಜೈಲಿನಲ್ಲಿರುವ ಮಾಜಿ ಸಂಸದ ಅತೀಕ್ ಅಹ್ಮದ್, ಅವರ ಪತ್ನಿ ಸಹಿಸ್ತಾ ಪರ್ವೀನ್, ಅವರ ಇಬ್ಬರು ಪುತ್ರರು, ಅವರ ಕಿರಿಯ ಸಹೋದರ ಖಾಲಿದ್ ಅಜೀಂ ಅಲಿಯಾಸ್ ಅಶ್ರಫ್ ಮತ್ತು ಇತರರ ವಿರುದ್ಧ ಜಯಾ ದೂರಿನ ಆಧಾರದ ಮೇಲೆ ಪೊಲೀಸರು ಶನಿವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ:2024ರ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಮೂಲಕ ಜನರು ಇದಕ್ಕೆ ಉತ್ತರಿಸುತ್ತಾರೆ: ಸಿಸೋಡಿಯಾ ಬಂಧನ ಖಂಡಿಸಿ ಅಖಿಲೇಶ್ ಟ್ವೀಟ್

ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 2005ರ ಜನವರಿ 25ರಂದು ನಡೆದಿದ್ದ ಬಿಎಸ್‌ಪಿ ಶಾಸಕ ರಾಜುಪಾಲ್‌ ಹತ್ಯೆಗೆ ಪತಿ ಉಮೇಶ್‌ ಪ್ರತ್ಯಕ್ಷದರ್ಶಿಯಾಗಿದ್ದರು ಎಂದು ಜಯಾ ಹೇಳಿದ್ದಾರೆ. 2006ರಲ್ಲಿ ಅಹ್ಮದ್‌ ಮತ್ತು ಆತನ ಸಹಚರರು ಉಮೇಶ್‌ನನ್ನು ಅಪಹರಿಸಿ ನ್ಯಾಯಾಲಯದಲ್ಲಿ ಅವರ ಪರವಾಗಿ ಹೇಳಿಕೆ ನೀಡುವಂತೆ ಒತ್ತಾಯಿಸಿದ್ದರು ಎಂದು ಜಯಾ ಆರೋಪಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:31 pm, Mon, 27 February 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ