AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂಗಿಯನ್ನು ನಂಬಿಸಿ ಮೋಸ ಮಾಡಿದ್ದಕ್ಕೆ ಮೈದುನನ ಖಾಸಗಿ ಭಾಗ ಕತ್ತರಿಸಿದ ಮಹಿಳೆ

ತಂಗಿಯನ್ನು ಮದುವೆ(Marriage)ಯಾಗುವುದಾಗಿ ನಂಬಿಸಿ ಆಕೆಯ ಜತೆ ಸಂಬಂಧ ಬೆಳೆಸಿ ಬಳಿಕ ಕೈಕೊಟ್ಟಿದ್ದಕ್ಕೆ ಮಹಿಳೆಯೊಬ್ಬಳು ಮೈದುನನ ಖಾಸಗಿ ಭಾಗವನ್ನು ಕತ್ತರಿಸಿರುವ ಘಟನೆ ಪ್ರಯಾಗ್​​ರಾಜ್​​ನಲ್ಲಿ ನಡೆದಿದೆ. ಈ ಘಟನೆ ಬಳಿಕ ಮಹಿಳೆಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆ ವೇಳೆ ಕುಟುಂಬದೊಳಗಿನ ಸೇಡು ಮತ್ತು ಭಾವನಾತ್ಮಕ ಪ್ರಕ್ಷುಬ್ಧತೆಯಿಂದ ಈ ಆಘಾತಕಾರಿ ಕೃತ್ಯ ನಡೆದಿದೆ ಎಂಬುದು ಬೆಳಕಿಗೆ ಬಂದಿದೆ.

ತಂಗಿಯನ್ನು ನಂಬಿಸಿ ಮೋಸ ಮಾಡಿದ್ದಕ್ಕೆ ಮೈದುನನ ಖಾಸಗಿ ಭಾಗ ಕತ್ತರಿಸಿದ ಮಹಿಳೆ
ಕ್ರೈಂ
ನಯನಾ ರಾಜೀವ್
|

Updated on: Oct 21, 2025 | 7:38 AM

Share

ಪ್ರಯಾಗ್​ರಾಜ್, ಅಕ್ಟೋಬರ್ 21: ತಂಗಿಯನ್ನು ಮದುವೆ(Marriage)ಯಾಗುವುದಾಗಿ ನಂಬಿಸಿ ಆಕೆಯ ಜತೆ ಸಂಬಂಧ ಬೆಳೆಸಿ ಬಳಿಕ ಕೈಕೊಟ್ಟಿದ್ದಕ್ಕೆ ಮಹಿಳೆಯೊಬ್ಬಳು ಮೈದುನನ ಖಾಸಗಿ ಭಾಗವನ್ನು ಕತ್ತರಿಸಿರುವ ಘಟನೆ ಪ್ರಯಾಗ್​​ರಾಜ್​​ನಲ್ಲಿ ನಡೆದಿದೆ. ಈ ಘಟನೆ ಬಳಿಕ ಮಹಿಳೆಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆ ವೇಳೆ ಕುಟುಂಬದೊಳಗಿನ ಸೇಡು ಮತ್ತು ಭಾವನಾತ್ಮಕ ಪ್ರಕ್ಷುಬ್ಧತೆಯಿಂದ ಈ ಆಘಾತಕಾರಿ ಕೃತ್ಯ ನಡೆದಿದೆ ಎಂಬುದು ಬೆಳಕಿಗೆ ಬಂದಿದೆ.

ಅಕ್ಟೋಬರ್ 16ರ ರಾತ್ರಿ ಮೌಯಿಮಾದ ಮಲ್ಖಾನ್‌ಪುರ ಗ್ರಾಮದ ರಾಮ್ ಅಸರೆ ಅವರ ಪುತ್ರ 20 ವರ್ಷದ ಉಮೇಶ್ ತನ್ನ ಕೋಣೆಯಲ್ಲಿ ರಕ್ತಸಿಕ್ತವಾಗಿ ಬಿದ್ದಿದ್ದ. ಅವನ ಕಿರುಚಾಟದಿಂದ ಎಚ್ಚರಗೊಂಡ ಅವನ ಕುಟುಂಬ ಸದಸ್ಯರು ಧಾವಿಸಿ ಬಂದಾಗ ಅವನು ನೋವಿನಿಂದ ನರಳುತ್ತಿದ್ದ, ತೀವ್ರವಾದ ಇರಿತದ ಗಾಯಗಳಾಗಿದ್ದು ಮತ್ತು ಅವನ ಖಾಸಗಿ ಭಾಗಗಳು ಕತ್ತರಿಸಿದ್ದು ಕಂಡುಬಂದಿತ್ತು.

ಕುಟುಂಬವು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು, ಬಳಿಕ ಪೊಲೀಸರಿಗೆ ದೂರು ನೀಡಲಾಯಿತು. ನಂತರ ನಡೆದ ತನಿಖೆಯು ಉದ್ವಿಗ್ನ ಮತ್ತು ಗೊಂದಲಮಯವಾಗಿತ್ತು ಏಕೆಂದರೆ ಆರಂಭದಲ್ಲಿ ಅಂತಹ ಕೃತ್ಯವನ್ನು ಯಾರು ಮಾಡಿದ್ದಾರೆ ಅಥವಾ ಏಕೆ ಮಾಡಿದ್ದಾರೆಂದು ಯಾರಿಗೂ ಅರ್ಥವಾಗಲಿಲ್ಲ.

ಮತ್ತಷ್ಟು ಓದಿ: ಮದುವೆಗೆ ವಯಸ್ಸು ಮುಖ್ಯನಾ? ಮ್ಯಾರೇಜ್ ಆಗೋಕೆ ಪರ್ಫೆಕ್ಟ್‌ ಏಜ್‌ ಯಾವುದು? ಇಲ್ಲಿದೆ ಮಾಹಿತಿ

ಪೊಲೀಸರು ಆಳವಾಗಿ ತನಿಖೆ ನಡೆಸುತ್ತಿದ್ದಂತೆ, ಸತ್ಯ ಹೊರಬಂದಿತ್ತು. ಉಮೇಶ್‌ನ ಅಣ್ಣ ಉದಯ್, ಮಂಜುಳನ್ನು ಮದುವೆಯಾಗಿದ್ದಾರೆ. ಸ್ವಲ್ಪ ಸಮಯದ ಬಳಿಕ, ಉಮೇಶ್ ಮಂಜುಳ ​​ತಂಗಿಯೊಂದಿಗೆ ಸಂಬಂಧವನ್ನು ಬೆಳೆಸಿಕೊಂಡಿದ್ದ. ಇಬ್ಬರೂ ಆತ್ಮೀಯರಾಗಿದ್ದರು ಮತ್ತು ಪರಸ್ಪರ ಮದುವೆಯಾಗುವುದಾಗಿಯೂ ಹೇಳಿದ್ದರು.

ಕುಟುಂಬದ ವಿರೋಧವಿತ್ತು. ಅಂತಿಮವಾಗಿ, ಉಮೇಶ್ ಆ ಸಂಬಂಧದಿಂದ ಹಿಂದೆ ಸರಿದಿದ್ದ, ವರದಿಯ ಪ್ರಕಾರ, ಇನ್ನೊಬ್ಬಳನ್ನು ಇಷ್ಟ ಪಡುತ್ತಿದ್ದ, ಇದು ಮಂಜುಳನ ತಂಗಿಯ ಮೇಲೆ ತೀವ್ರ ಪರಿಣಾಮ ಬೀರಿತ್ತು. ಕುಟುಂಬ ಸದಸ್ಯರ ಪ್ರಕಾರ ಆಕೆ ಖಿನ್ನೆತೆಗೆ ಒಳಗಾಗಿದ್ದಳು. ಒಂಟಿಯಾಗಿರಲು ಶುರು ಮಾಡಿದ್ದಳು. ಇದನ್ನು ಕಂಡ ಮಂಜುಳಾಗೆ ಕೋಪ ಬಂದಿತ್ತು. ತನ್ನ ಮೈದುನನಿಂದಲೇ ಇಷ್ಟೆಲ್ಲಾ ಆಗಿದ್ದು ಎಂದು ಹೇಳಿ ಆತನ ಮೇಲೆ ಹಲ್ಲೆ ನಡೆಸಿ ಖಾಸಗಿ ಭಾಗವನ್ನು ಕತ್ತರಿಸಿದ್ದಾಳೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ