AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂಗಿಯನ್ನು ನಂಬಿಸಿ ಮೋಸ ಮಾಡಿದ್ದಕ್ಕೆ ಮೈದುನನ ಖಾಸಗಿ ಭಾಗ ಕತ್ತರಿಸಿದ ಮಹಿಳೆ

ತಂಗಿಯನ್ನು ಮದುವೆ(Marriage)ಯಾಗುವುದಾಗಿ ನಂಬಿಸಿ ಆಕೆಯ ಜತೆ ಸಂಬಂಧ ಬೆಳೆಸಿ ಬಳಿಕ ಕೈಕೊಟ್ಟಿದ್ದಕ್ಕೆ ಮಹಿಳೆಯೊಬ್ಬಳು ಮೈದುನನ ಖಾಸಗಿ ಭಾಗವನ್ನು ಕತ್ತರಿಸಿರುವ ಘಟನೆ ಪ್ರಯಾಗ್​​ರಾಜ್​​ನಲ್ಲಿ ನಡೆದಿದೆ. ಈ ಘಟನೆ ಬಳಿಕ ಮಹಿಳೆಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆ ವೇಳೆ ಕುಟುಂಬದೊಳಗಿನ ಸೇಡು ಮತ್ತು ಭಾವನಾತ್ಮಕ ಪ್ರಕ್ಷುಬ್ಧತೆಯಿಂದ ಈ ಆಘಾತಕಾರಿ ಕೃತ್ಯ ನಡೆದಿದೆ ಎಂಬುದು ಬೆಳಕಿಗೆ ಬಂದಿದೆ.

ತಂಗಿಯನ್ನು ನಂಬಿಸಿ ಮೋಸ ಮಾಡಿದ್ದಕ್ಕೆ ಮೈದುನನ ಖಾಸಗಿ ಭಾಗ ಕತ್ತರಿಸಿದ ಮಹಿಳೆ
ಕ್ರೈಂ
ನಯನಾ ರಾಜೀವ್
|

Updated on: Oct 21, 2025 | 7:38 AM

Share

ಪ್ರಯಾಗ್​ರಾಜ್, ಅಕ್ಟೋಬರ್ 21: ತಂಗಿಯನ್ನು ಮದುವೆ(Marriage)ಯಾಗುವುದಾಗಿ ನಂಬಿಸಿ ಆಕೆಯ ಜತೆ ಸಂಬಂಧ ಬೆಳೆಸಿ ಬಳಿಕ ಕೈಕೊಟ್ಟಿದ್ದಕ್ಕೆ ಮಹಿಳೆಯೊಬ್ಬಳು ಮೈದುನನ ಖಾಸಗಿ ಭಾಗವನ್ನು ಕತ್ತರಿಸಿರುವ ಘಟನೆ ಪ್ರಯಾಗ್​​ರಾಜ್​​ನಲ್ಲಿ ನಡೆದಿದೆ. ಈ ಘಟನೆ ಬಳಿಕ ಮಹಿಳೆಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆ ವೇಳೆ ಕುಟುಂಬದೊಳಗಿನ ಸೇಡು ಮತ್ತು ಭಾವನಾತ್ಮಕ ಪ್ರಕ್ಷುಬ್ಧತೆಯಿಂದ ಈ ಆಘಾತಕಾರಿ ಕೃತ್ಯ ನಡೆದಿದೆ ಎಂಬುದು ಬೆಳಕಿಗೆ ಬಂದಿದೆ.

ಅಕ್ಟೋಬರ್ 16ರ ರಾತ್ರಿ ಮೌಯಿಮಾದ ಮಲ್ಖಾನ್‌ಪುರ ಗ್ರಾಮದ ರಾಮ್ ಅಸರೆ ಅವರ ಪುತ್ರ 20 ವರ್ಷದ ಉಮೇಶ್ ತನ್ನ ಕೋಣೆಯಲ್ಲಿ ರಕ್ತಸಿಕ್ತವಾಗಿ ಬಿದ್ದಿದ್ದ. ಅವನ ಕಿರುಚಾಟದಿಂದ ಎಚ್ಚರಗೊಂಡ ಅವನ ಕುಟುಂಬ ಸದಸ್ಯರು ಧಾವಿಸಿ ಬಂದಾಗ ಅವನು ನೋವಿನಿಂದ ನರಳುತ್ತಿದ್ದ, ತೀವ್ರವಾದ ಇರಿತದ ಗಾಯಗಳಾಗಿದ್ದು ಮತ್ತು ಅವನ ಖಾಸಗಿ ಭಾಗಗಳು ಕತ್ತರಿಸಿದ್ದು ಕಂಡುಬಂದಿತ್ತು.

ಕುಟುಂಬವು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು, ಬಳಿಕ ಪೊಲೀಸರಿಗೆ ದೂರು ನೀಡಲಾಯಿತು. ನಂತರ ನಡೆದ ತನಿಖೆಯು ಉದ್ವಿಗ್ನ ಮತ್ತು ಗೊಂದಲಮಯವಾಗಿತ್ತು ಏಕೆಂದರೆ ಆರಂಭದಲ್ಲಿ ಅಂತಹ ಕೃತ್ಯವನ್ನು ಯಾರು ಮಾಡಿದ್ದಾರೆ ಅಥವಾ ಏಕೆ ಮಾಡಿದ್ದಾರೆಂದು ಯಾರಿಗೂ ಅರ್ಥವಾಗಲಿಲ್ಲ.

ಮತ್ತಷ್ಟು ಓದಿ: ಮದುವೆಗೆ ವಯಸ್ಸು ಮುಖ್ಯನಾ? ಮ್ಯಾರೇಜ್ ಆಗೋಕೆ ಪರ್ಫೆಕ್ಟ್‌ ಏಜ್‌ ಯಾವುದು? ಇಲ್ಲಿದೆ ಮಾಹಿತಿ

ಪೊಲೀಸರು ಆಳವಾಗಿ ತನಿಖೆ ನಡೆಸುತ್ತಿದ್ದಂತೆ, ಸತ್ಯ ಹೊರಬಂದಿತ್ತು. ಉಮೇಶ್‌ನ ಅಣ್ಣ ಉದಯ್, ಮಂಜುಳನ್ನು ಮದುವೆಯಾಗಿದ್ದಾರೆ. ಸ್ವಲ್ಪ ಸಮಯದ ಬಳಿಕ, ಉಮೇಶ್ ಮಂಜುಳ ​​ತಂಗಿಯೊಂದಿಗೆ ಸಂಬಂಧವನ್ನು ಬೆಳೆಸಿಕೊಂಡಿದ್ದ. ಇಬ್ಬರೂ ಆತ್ಮೀಯರಾಗಿದ್ದರು ಮತ್ತು ಪರಸ್ಪರ ಮದುವೆಯಾಗುವುದಾಗಿಯೂ ಹೇಳಿದ್ದರು.

ಕುಟುಂಬದ ವಿರೋಧವಿತ್ತು. ಅಂತಿಮವಾಗಿ, ಉಮೇಶ್ ಆ ಸಂಬಂಧದಿಂದ ಹಿಂದೆ ಸರಿದಿದ್ದ, ವರದಿಯ ಪ್ರಕಾರ, ಇನ್ನೊಬ್ಬಳನ್ನು ಇಷ್ಟ ಪಡುತ್ತಿದ್ದ, ಇದು ಮಂಜುಳನ ತಂಗಿಯ ಮೇಲೆ ತೀವ್ರ ಪರಿಣಾಮ ಬೀರಿತ್ತು. ಕುಟುಂಬ ಸದಸ್ಯರ ಪ್ರಕಾರ ಆಕೆ ಖಿನ್ನೆತೆಗೆ ಒಳಗಾಗಿದ್ದಳು. ಒಂಟಿಯಾಗಿರಲು ಶುರು ಮಾಡಿದ್ದಳು. ಇದನ್ನು ಕಂಡ ಮಂಜುಳಾಗೆ ಕೋಪ ಬಂದಿತ್ತು. ತನ್ನ ಮೈದುನನಿಂದಲೇ ಇಷ್ಟೆಲ್ಲಾ ಆಗಿದ್ದು ಎಂದು ಹೇಳಿ ಆತನ ಮೇಲೆ ಹಲ್ಲೆ ನಡೆಸಿ ಖಾಸಗಿ ಭಾಗವನ್ನು ಕತ್ತರಿಸಿದ್ದಾಳೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!