AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IndiGo: ತಾಂತ್ರಿಕ ವೈಫಲ್ಯದಿಂದ ಕರಾಚಿಯಲ್ಲಿ ಇಂಡಿಗೊ ವಿಮಾನ ತುರ್ತು ಭೂಸ್ಪರ್ಶ: ಪ್ರಯಾಣಿಕರು ಸುರಕ್ಷಿತ

‘ಇಂಡಿಗೊ ವಿಮಾನಯಾನ ಸಂಸ್ಥೆಯ 6E-1406 ವಿಮಾನವು ಶಾರ್ಜಾದಿಂದ ಹೈದರಾಬಾದ್​ಗೆ ಬರಬೇಕಿತ್ತು‘.

IndiGo: ತಾಂತ್ರಿಕ ವೈಫಲ್ಯದಿಂದ ಕರಾಚಿಯಲ್ಲಿ ಇಂಡಿಗೊ ವಿಮಾನ ತುರ್ತು ಭೂಸ್ಪರ್ಶ: ಪ್ರಯಾಣಿಕರು ಸುರಕ್ಷಿತ
ಇಂಡಿಗೋ ವಿಮಾನ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 17, 2022 | 10:36 AM

ದೆಹಲಿ: ಶಾರ್ಜಾದಿಂದ ಹೈದರಾಬಾದ್​ಗೆ ಬರಬೇಕಿದ್ದ ‘ಇಂಡಿಗೊ’ (IndiGo) ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಾಕಿಸ್ತಾನದ ಕರಾಚಿಯಲ್ಲಿ (Karachi) ತುರ್ತು ಭೂಸ್ಪರ್ಶ ಮಾಡಿತು. ಎಲ್ಲ ಪ್ರಯಾಣಿಕರು ಕ್ಷೇಮವಾಗಿದ್ದಾರೆ. ತಾಂತ್ರಿಕ ಸಮಸ್ಯೆ ಇರುವ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೈದರಾಬಾದ್​ಗೆ (Hyderabad) ಕರೆತರಲು ಮತ್ತೊಂದು ವಿಮಾನವನ್ನು ಕಳಿಸಲಾಗುವುದು ಎಂದು ಇಂಡಿಗೊ ಹೇಳಿದೆ.

‘ಇಂಡಿಗೊ ವಿಮಾನಯಾನ ಸಂಸ್ಥೆಯ 6E-1406 ವಿಮಾನವು ಶಾರ್ಜಾದಿಂದ ಹೈದರಾಬಾದ್​ಗೆ ಬರಬೇಕಿತ್ತು. ತಾಂತ್ರಿಕ ವೈಫಲ್ಯವನ್ನು ಪೈಲಟ್ ಗುರುತಿಸಿದ ಹಿನ್ನೆಲೆಯಲ್ಲಿ ವಿಮಾನವನ್ನು ತಕ್ಷಣ ಕರಾಚಿಗೆ ಕೊಂಡೊಯ್ಯುವಂತೆ ಸೂಚಿಸಲಾಯಿತು’ ಎಂದು ಇಂಡಿಗೊ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ವಿಮಾನದ 2ನೇ ಎಂಜಿನ್​ನ (ಬಲಗಡೆಯ ಎಂಜಿನ್) ಕಾರ್ಯಾಚರಣೆ ವ್ಯವಸ್ಥೆಯಲ್ಲಿ ವೈಫಲ್ಯ ಎದುರಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರಾಚಿಯಲ್ಲಿ ಇಳಿಸಲಾಗಿದೆ ಎಂದು ಕೇಂದ್ರ ಸರ್ಕಾರದ ನಾಗರಿಕ ವಿಮಾನಯಾನ ಖಾತೆ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಎನ್​ಡಿಟಿವಿ ವರದಿ ಮಾಡಿದೆ. ಕಳೆದ ಎರಡು ವಾರಗಳಲ್ಲಿ ಪಾಕಿಸ್ತಾನದ ಕರಾಚಿಯಲ್ಲಿ ತಾಂತ್ರಿಕ ವೈಫಲ್ಯದ ಕಾರಣಕ್ಕೆ ಲ್ಯಾಂಡ್ ಆದ ಎರಡನೇ ವಿಮಾನ ಇದು.

ಈ ತಿಂಗಳ ಆರಂಭದಲ್ಲಿ ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ಸ್ಪೈಸ್​ಜೆಟ್ ವಿಮಾನವು ಕಾಕ್​ಪಿಟ್​ನ ಇಂಡಿಕೇಟರ್ ಲೈಟ್​ನಲ್ಲಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕರಾಚಿಗೆ ಮಾರ್ಗಬದಲಾವಣೆ ಮಾಡಿಕೊಂಡು, ಲ್ಯಾಂಡ್ ಆಗಿತ್ತು. ನಂತರ ಭಾರತದಿಂದ ಮತ್ತೊಂದು ವಿಮಾನವನ್ನು ಕಳಿಸಿ, 138 ಪ್ರಯಾಣಿಕರನ್ನು ದುಬೈಗೆ ತಲುಪಿಸಲಾಯಿತು. ಪರ್ಯಾಯ ವಿಮಾನಕ್ಕೆ ಟೇಕಾಫ್ ಆಗಲು ಅನುಮತಿ ನೀಡಲು ಪಾಕಿಸ್ತಾನ ಸರ್ಕಾರವು ಹಲವು ಗಂಟೆಗಳನ್ನು ತೆಗೆದುಕೊಂಡಿತ್ತು.

Published On - 10:34 am, Sun, 17 July 22

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ