AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IndiGo: ತಾಂತ್ರಿಕ ವೈಫಲ್ಯದಿಂದ ಕರಾಚಿಯಲ್ಲಿ ಇಂಡಿಗೊ ವಿಮಾನ ತುರ್ತು ಭೂಸ್ಪರ್ಶ: ಪ್ರಯಾಣಿಕರು ಸುರಕ್ಷಿತ

‘ಇಂಡಿಗೊ ವಿಮಾನಯಾನ ಸಂಸ್ಥೆಯ 6E-1406 ವಿಮಾನವು ಶಾರ್ಜಾದಿಂದ ಹೈದರಾಬಾದ್​ಗೆ ಬರಬೇಕಿತ್ತು‘.

IndiGo: ತಾಂತ್ರಿಕ ವೈಫಲ್ಯದಿಂದ ಕರಾಚಿಯಲ್ಲಿ ಇಂಡಿಗೊ ವಿಮಾನ ತುರ್ತು ಭೂಸ್ಪರ್ಶ: ಪ್ರಯಾಣಿಕರು ಸುರಕ್ಷಿತ
ಇಂಡಿಗೋ ವಿಮಾನ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Jul 17, 2022 | 10:36 AM

Share

ದೆಹಲಿ: ಶಾರ್ಜಾದಿಂದ ಹೈದರಾಬಾದ್​ಗೆ ಬರಬೇಕಿದ್ದ ‘ಇಂಡಿಗೊ’ (IndiGo) ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಾಕಿಸ್ತಾನದ ಕರಾಚಿಯಲ್ಲಿ (Karachi) ತುರ್ತು ಭೂಸ್ಪರ್ಶ ಮಾಡಿತು. ಎಲ್ಲ ಪ್ರಯಾಣಿಕರು ಕ್ಷೇಮವಾಗಿದ್ದಾರೆ. ತಾಂತ್ರಿಕ ಸಮಸ್ಯೆ ಇರುವ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೈದರಾಬಾದ್​ಗೆ (Hyderabad) ಕರೆತರಲು ಮತ್ತೊಂದು ವಿಮಾನವನ್ನು ಕಳಿಸಲಾಗುವುದು ಎಂದು ಇಂಡಿಗೊ ಹೇಳಿದೆ.

‘ಇಂಡಿಗೊ ವಿಮಾನಯಾನ ಸಂಸ್ಥೆಯ 6E-1406 ವಿಮಾನವು ಶಾರ್ಜಾದಿಂದ ಹೈದರಾಬಾದ್​ಗೆ ಬರಬೇಕಿತ್ತು. ತಾಂತ್ರಿಕ ವೈಫಲ್ಯವನ್ನು ಪೈಲಟ್ ಗುರುತಿಸಿದ ಹಿನ್ನೆಲೆಯಲ್ಲಿ ವಿಮಾನವನ್ನು ತಕ್ಷಣ ಕರಾಚಿಗೆ ಕೊಂಡೊಯ್ಯುವಂತೆ ಸೂಚಿಸಲಾಯಿತು’ ಎಂದು ಇಂಡಿಗೊ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ವಿಮಾನದ 2ನೇ ಎಂಜಿನ್​ನ (ಬಲಗಡೆಯ ಎಂಜಿನ್) ಕಾರ್ಯಾಚರಣೆ ವ್ಯವಸ್ಥೆಯಲ್ಲಿ ವೈಫಲ್ಯ ಎದುರಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರಾಚಿಯಲ್ಲಿ ಇಳಿಸಲಾಗಿದೆ ಎಂದು ಕೇಂದ್ರ ಸರ್ಕಾರದ ನಾಗರಿಕ ವಿಮಾನಯಾನ ಖಾತೆ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಎನ್​ಡಿಟಿವಿ ವರದಿ ಮಾಡಿದೆ. ಕಳೆದ ಎರಡು ವಾರಗಳಲ್ಲಿ ಪಾಕಿಸ್ತಾನದ ಕರಾಚಿಯಲ್ಲಿ ತಾಂತ್ರಿಕ ವೈಫಲ್ಯದ ಕಾರಣಕ್ಕೆ ಲ್ಯಾಂಡ್ ಆದ ಎರಡನೇ ವಿಮಾನ ಇದು.

ಈ ತಿಂಗಳ ಆರಂಭದಲ್ಲಿ ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ಸ್ಪೈಸ್​ಜೆಟ್ ವಿಮಾನವು ಕಾಕ್​ಪಿಟ್​ನ ಇಂಡಿಕೇಟರ್ ಲೈಟ್​ನಲ್ಲಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕರಾಚಿಗೆ ಮಾರ್ಗಬದಲಾವಣೆ ಮಾಡಿಕೊಂಡು, ಲ್ಯಾಂಡ್ ಆಗಿತ್ತು. ನಂತರ ಭಾರತದಿಂದ ಮತ್ತೊಂದು ವಿಮಾನವನ್ನು ಕಳಿಸಿ, 138 ಪ್ರಯಾಣಿಕರನ್ನು ದುಬೈಗೆ ತಲುಪಿಸಲಾಯಿತು. ಪರ್ಯಾಯ ವಿಮಾನಕ್ಕೆ ಟೇಕಾಫ್ ಆಗಲು ಅನುಮತಿ ನೀಡಲು ಪಾಕಿಸ್ತಾನ ಸರ್ಕಾರವು ಹಲವು ಗಂಟೆಗಳನ್ನು ತೆಗೆದುಕೊಂಡಿತ್ತು.

Published On - 10:34 am, Sun, 17 July 22

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?