AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IndiGo: ತಾಂತ್ರಿಕ ವೈಫಲ್ಯದಿಂದ ಕರಾಚಿಯಲ್ಲಿ ಇಂಡಿಗೊ ವಿಮಾನ ತುರ್ತು ಭೂಸ್ಪರ್ಶ: ಪ್ರಯಾಣಿಕರು ಸುರಕ್ಷಿತ

‘ಇಂಡಿಗೊ ವಿಮಾನಯಾನ ಸಂಸ್ಥೆಯ 6E-1406 ವಿಮಾನವು ಶಾರ್ಜಾದಿಂದ ಹೈದರಾಬಾದ್​ಗೆ ಬರಬೇಕಿತ್ತು‘.

IndiGo: ತಾಂತ್ರಿಕ ವೈಫಲ್ಯದಿಂದ ಕರಾಚಿಯಲ್ಲಿ ಇಂಡಿಗೊ ವಿಮಾನ ತುರ್ತು ಭೂಸ್ಪರ್ಶ: ಪ್ರಯಾಣಿಕರು ಸುರಕ್ಷಿತ
ಇಂಡಿಗೋ ವಿಮಾನ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Jul 17, 2022 | 10:36 AM

Share

ದೆಹಲಿ: ಶಾರ್ಜಾದಿಂದ ಹೈದರಾಬಾದ್​ಗೆ ಬರಬೇಕಿದ್ದ ‘ಇಂಡಿಗೊ’ (IndiGo) ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಾಕಿಸ್ತಾನದ ಕರಾಚಿಯಲ್ಲಿ (Karachi) ತುರ್ತು ಭೂಸ್ಪರ್ಶ ಮಾಡಿತು. ಎಲ್ಲ ಪ್ರಯಾಣಿಕರು ಕ್ಷೇಮವಾಗಿದ್ದಾರೆ. ತಾಂತ್ರಿಕ ಸಮಸ್ಯೆ ಇರುವ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೈದರಾಬಾದ್​ಗೆ (Hyderabad) ಕರೆತರಲು ಮತ್ತೊಂದು ವಿಮಾನವನ್ನು ಕಳಿಸಲಾಗುವುದು ಎಂದು ಇಂಡಿಗೊ ಹೇಳಿದೆ.

‘ಇಂಡಿಗೊ ವಿಮಾನಯಾನ ಸಂಸ್ಥೆಯ 6E-1406 ವಿಮಾನವು ಶಾರ್ಜಾದಿಂದ ಹೈದರಾಬಾದ್​ಗೆ ಬರಬೇಕಿತ್ತು. ತಾಂತ್ರಿಕ ವೈಫಲ್ಯವನ್ನು ಪೈಲಟ್ ಗುರುತಿಸಿದ ಹಿನ್ನೆಲೆಯಲ್ಲಿ ವಿಮಾನವನ್ನು ತಕ್ಷಣ ಕರಾಚಿಗೆ ಕೊಂಡೊಯ್ಯುವಂತೆ ಸೂಚಿಸಲಾಯಿತು’ ಎಂದು ಇಂಡಿಗೊ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ವಿಮಾನದ 2ನೇ ಎಂಜಿನ್​ನ (ಬಲಗಡೆಯ ಎಂಜಿನ್) ಕಾರ್ಯಾಚರಣೆ ವ್ಯವಸ್ಥೆಯಲ್ಲಿ ವೈಫಲ್ಯ ಎದುರಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರಾಚಿಯಲ್ಲಿ ಇಳಿಸಲಾಗಿದೆ ಎಂದು ಕೇಂದ್ರ ಸರ್ಕಾರದ ನಾಗರಿಕ ವಿಮಾನಯಾನ ಖಾತೆ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಎನ್​ಡಿಟಿವಿ ವರದಿ ಮಾಡಿದೆ. ಕಳೆದ ಎರಡು ವಾರಗಳಲ್ಲಿ ಪಾಕಿಸ್ತಾನದ ಕರಾಚಿಯಲ್ಲಿ ತಾಂತ್ರಿಕ ವೈಫಲ್ಯದ ಕಾರಣಕ್ಕೆ ಲ್ಯಾಂಡ್ ಆದ ಎರಡನೇ ವಿಮಾನ ಇದು.

ಈ ತಿಂಗಳ ಆರಂಭದಲ್ಲಿ ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ಸ್ಪೈಸ್​ಜೆಟ್ ವಿಮಾನವು ಕಾಕ್​ಪಿಟ್​ನ ಇಂಡಿಕೇಟರ್ ಲೈಟ್​ನಲ್ಲಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕರಾಚಿಗೆ ಮಾರ್ಗಬದಲಾವಣೆ ಮಾಡಿಕೊಂಡು, ಲ್ಯಾಂಡ್ ಆಗಿತ್ತು. ನಂತರ ಭಾರತದಿಂದ ಮತ್ತೊಂದು ವಿಮಾನವನ್ನು ಕಳಿಸಿ, 138 ಪ್ರಯಾಣಿಕರನ್ನು ದುಬೈಗೆ ತಲುಪಿಸಲಾಯಿತು. ಪರ್ಯಾಯ ವಿಮಾನಕ್ಕೆ ಟೇಕಾಫ್ ಆಗಲು ಅನುಮತಿ ನೀಡಲು ಪಾಕಿಸ್ತಾನ ಸರ್ಕಾರವು ಹಲವು ಗಂಟೆಗಳನ್ನು ತೆಗೆದುಕೊಂಡಿತ್ತು.

Published On - 10:34 am, Sun, 17 July 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು