AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ, ಬಾಣಂತಿಯರಿಗೆ ತೀವ್ರವಾಗಿ ಬಾಧಿಸಿದ ಕೊವಿಡ್​ 19 ಎರಡನೇ ಅಲೆ; ಐಸಿಎಂಆರ್​ ಅಧ್ಯಯನ

ಸುಮಾರು 1530 ಗರ್ಭಿಣಿ-ಬಾಣಂತಿಯರನ್ನು ಅಧ್ಯಯನದಲ್ಲಿ ಒಳಪಡಿಸಿಕೊಳ್ಳಲಾಗಿತ್ತು. ಅವರಲ್ಲಿ 1,143 ಮಂದಿ ಮೊದಲ ಅಲೆಯಲ್ಲಿ ಕೊವಿಡ್​ 19 ಸೋಂಕಿಗೆ ಒಳಗಾದವರು ಹಾಗೂ 387 ಮಂದಿ ಸೋಂಕಿಗೆ ಒಳಗಾದವರಾಗಿದ್ದರು.

ಗರ್ಭಿಣಿ, ಬಾಣಂತಿಯರಿಗೆ ತೀವ್ರವಾಗಿ ಬಾಧಿಸಿದ ಕೊವಿಡ್​ 19 ಎರಡನೇ ಅಲೆ; ಐಸಿಎಂಆರ್​ ಅಧ್ಯಯನ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Jun 17, 2021 | 9:12 AM

Share

ಕೊವಿಡ್​ 19 ಮೊದಲನೇ ಅಲೆಗೆ ಹೋಲಿಸಿದರೆ, ಎರಡನೇ ಅಲೆಯಲ್ಲಿ ಗರ್ಭಿಣಿಯರು, ಆಗಷ್ಟೇ ಹೆರಿಗೆಯಾದ ಮಹಿಳೆಯರು ಅಂದರೆ ಬಾಣಂತಿಯರು ಅತಿ ತೀವ್ರವಾಗಿ ಕೊರೊನಾದಿಂದ ಬಾಧಿತರಾಗಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR) ತಿಳಿಸಿದೆ. ಅಲ್ಲದೆ, ಮೊದಲ ಅಲೆಗಿಂತಲೂ ಈ ಅಲೆಯಲ್ಲಿ ಗರ್ಭಿಣಿಯರು, ಬಾಣಂತಿಯರಲ್ಲಿ ರೋಗಲಕ್ಷಣದ ಪ್ರಕರಣ ಮತ್ತು ಸಾವಿನ ಪ್ರಮಾಣ ಜಾಸ್ತಿ ಇತ್ತು ಎಂದೂ ಐಸಿಎಂಆರ್​ ಅಧ್ಯಯನದಲ್ಲಿ ಬೆಳಕಿಗೆ ಬಂದಿದೆ.

ಕೊವಿಡ್​ 19 ಮೊದಲನೇ ಅಲೆಯಲ್ಲಿ ಗರ್ಭಿಣಿ ಮತ್ತು ಬಾಣಂತಿಯರಲ್ಲಿ ರೋಗ ಲಕ್ಷಣದ ಪ್ರಕರಣಗಳು 1143ಕ್ಕೆ ಕೇವಲ 162ರಂತೆ ಅಂದರೆ ಅನುಪಾತ 14.2 ಪರ್ಸಂಟ್​ ಇತ್ತು. ಆದರೆ ಅದು ಎರಡನೇ ಅಲೆಯಲ್ಲಿ ಶೇ.28.7ರಷ್ಟು ಹೆಚ್ಚಾಗಿದ್ದು, 387ಕ್ಕೆ 111ರಷ್ಟಿದೆ ಎಂದು ಐಸಿಎಂಆರ್​ ಮಾಹಿತಿ ನೀಡಿದೆ. ಹಾಗೇ, ಗರ್ಭಿಣಿ-ಬಾಣಂತಿಯರ ಮರಣ ಪ್ರಮಾಣ ಮೊದಲ ಅಲೆಯಲ್ಲಿ 0.7 (8/1143)ರಷ್ಟಿತ್ತು. ಆದರೆ ಎರಡನೇ ಅಲೆಯಲ್ಲಿ ಶೇ.5.7 (22/387)ಆಗಿದೆ ಎಂದೂ ಹೇಳಿದೆ.

ಸುಮಾರು 1530 ಗರ್ಭಿಣಿ-ಬಾಣಂತಿಯರನ್ನು ಅಧ್ಯಯನದಲ್ಲಿ ಒಳಪಡಿಸಿಕೊಳ್ಳಲಾಗಿತ್ತು. ಅವರಲ್ಲಿ 1,143 ಮಂದಿ ಮೊದಲ ಅಲೆಯಲ್ಲಿ ಕೊವಿಡ್​ 19 ಸೋಂಕಿಗೆ ಒಳಗಾದವರು ಹಾಗೂ 387 ಮಂದಿ ಸೋಂಕಿಗೆ ಒಳಗಾದವರಾಗಿದ್ದರು. ಇನ್ನು ಮೊದಲ ಮತ್ತು ಎರಡನೇ ಅಲೆಯಲ್ಲಿ ಅತ್ಯಂತ ಹೆಚ್ಚು ಗರ್ಭಿಣಿ-ಬಾಣಂತಿಯರು ಮೃತಪಟ್ಟಿದ್ದು, ಕೊವಿಡ್​ 19 ಸಂಬಂಧಿತ ನ್ಯೂಮೋನಿಯಾ ಮತ್ತು ಉಸಿರಾಟದ ಸಮಸ್ಯೆಯಿಂದಲೇ ಆಗಿದೆ ಎಂದೂ ಐಸಿಎಂಆರ್​ ತಿಳಿಸಿದೆ. ಹಾಗೇ, ಬೇರೆ ಇತರ ಕಾಯಿಲೆಗಳನ್ನು ಹೊಂದಿರುವ ಗರ್ಭಿಣಿಯರಿಗೆ ಲಸಿಕೆ ನೀಡಲು ಕಳೆದವಾರವೇ ವಿಶ್ವ ಆರೋಗ್ಯ ಸಂಸ್ಥೆ (WHO) ಶಿಫಾರಸ್ಸು ಮಾಡಿದೆ.

ಇದನ್ನೂ ಓದಿ: Gold Rate Today: ಇಳಿಕೆಯ ಹಾದಿ ಹಿಡಿದ ಚಿನ್ನದ ದರ; ಆಭರಣ ಪ್ರಿಯರಿಗೆ ಸಂತಸ

Pregnant postpartum women severely affected in second Covid wave ICMR Study

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ