Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ, ಬಾಣಂತಿಯರಿಗೆ ತೀವ್ರವಾಗಿ ಬಾಧಿಸಿದ ಕೊವಿಡ್​ 19 ಎರಡನೇ ಅಲೆ; ಐಸಿಎಂಆರ್​ ಅಧ್ಯಯನ

ಸುಮಾರು 1530 ಗರ್ಭಿಣಿ-ಬಾಣಂತಿಯರನ್ನು ಅಧ್ಯಯನದಲ್ಲಿ ಒಳಪಡಿಸಿಕೊಳ್ಳಲಾಗಿತ್ತು. ಅವರಲ್ಲಿ 1,143 ಮಂದಿ ಮೊದಲ ಅಲೆಯಲ್ಲಿ ಕೊವಿಡ್​ 19 ಸೋಂಕಿಗೆ ಒಳಗಾದವರು ಹಾಗೂ 387 ಮಂದಿ ಸೋಂಕಿಗೆ ಒಳಗಾದವರಾಗಿದ್ದರು.

ಗರ್ಭಿಣಿ, ಬಾಣಂತಿಯರಿಗೆ ತೀವ್ರವಾಗಿ ಬಾಧಿಸಿದ ಕೊವಿಡ್​ 19 ಎರಡನೇ ಅಲೆ; ಐಸಿಎಂಆರ್​ ಅಧ್ಯಯನ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on: Jun 17, 2021 | 9:12 AM

ಕೊವಿಡ್​ 19 ಮೊದಲನೇ ಅಲೆಗೆ ಹೋಲಿಸಿದರೆ, ಎರಡನೇ ಅಲೆಯಲ್ಲಿ ಗರ್ಭಿಣಿಯರು, ಆಗಷ್ಟೇ ಹೆರಿಗೆಯಾದ ಮಹಿಳೆಯರು ಅಂದರೆ ಬಾಣಂತಿಯರು ಅತಿ ತೀವ್ರವಾಗಿ ಕೊರೊನಾದಿಂದ ಬಾಧಿತರಾಗಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR) ತಿಳಿಸಿದೆ. ಅಲ್ಲದೆ, ಮೊದಲ ಅಲೆಗಿಂತಲೂ ಈ ಅಲೆಯಲ್ಲಿ ಗರ್ಭಿಣಿಯರು, ಬಾಣಂತಿಯರಲ್ಲಿ ರೋಗಲಕ್ಷಣದ ಪ್ರಕರಣ ಮತ್ತು ಸಾವಿನ ಪ್ರಮಾಣ ಜಾಸ್ತಿ ಇತ್ತು ಎಂದೂ ಐಸಿಎಂಆರ್​ ಅಧ್ಯಯನದಲ್ಲಿ ಬೆಳಕಿಗೆ ಬಂದಿದೆ.

ಕೊವಿಡ್​ 19 ಮೊದಲನೇ ಅಲೆಯಲ್ಲಿ ಗರ್ಭಿಣಿ ಮತ್ತು ಬಾಣಂತಿಯರಲ್ಲಿ ರೋಗ ಲಕ್ಷಣದ ಪ್ರಕರಣಗಳು 1143ಕ್ಕೆ ಕೇವಲ 162ರಂತೆ ಅಂದರೆ ಅನುಪಾತ 14.2 ಪರ್ಸಂಟ್​ ಇತ್ತು. ಆದರೆ ಅದು ಎರಡನೇ ಅಲೆಯಲ್ಲಿ ಶೇ.28.7ರಷ್ಟು ಹೆಚ್ಚಾಗಿದ್ದು, 387ಕ್ಕೆ 111ರಷ್ಟಿದೆ ಎಂದು ಐಸಿಎಂಆರ್​ ಮಾಹಿತಿ ನೀಡಿದೆ. ಹಾಗೇ, ಗರ್ಭಿಣಿ-ಬಾಣಂತಿಯರ ಮರಣ ಪ್ರಮಾಣ ಮೊದಲ ಅಲೆಯಲ್ಲಿ 0.7 (8/1143)ರಷ್ಟಿತ್ತು. ಆದರೆ ಎರಡನೇ ಅಲೆಯಲ್ಲಿ ಶೇ.5.7 (22/387)ಆಗಿದೆ ಎಂದೂ ಹೇಳಿದೆ.

ಸುಮಾರು 1530 ಗರ್ಭಿಣಿ-ಬಾಣಂತಿಯರನ್ನು ಅಧ್ಯಯನದಲ್ಲಿ ಒಳಪಡಿಸಿಕೊಳ್ಳಲಾಗಿತ್ತು. ಅವರಲ್ಲಿ 1,143 ಮಂದಿ ಮೊದಲ ಅಲೆಯಲ್ಲಿ ಕೊವಿಡ್​ 19 ಸೋಂಕಿಗೆ ಒಳಗಾದವರು ಹಾಗೂ 387 ಮಂದಿ ಸೋಂಕಿಗೆ ಒಳಗಾದವರಾಗಿದ್ದರು. ಇನ್ನು ಮೊದಲ ಮತ್ತು ಎರಡನೇ ಅಲೆಯಲ್ಲಿ ಅತ್ಯಂತ ಹೆಚ್ಚು ಗರ್ಭಿಣಿ-ಬಾಣಂತಿಯರು ಮೃತಪಟ್ಟಿದ್ದು, ಕೊವಿಡ್​ 19 ಸಂಬಂಧಿತ ನ್ಯೂಮೋನಿಯಾ ಮತ್ತು ಉಸಿರಾಟದ ಸಮಸ್ಯೆಯಿಂದಲೇ ಆಗಿದೆ ಎಂದೂ ಐಸಿಎಂಆರ್​ ತಿಳಿಸಿದೆ. ಹಾಗೇ, ಬೇರೆ ಇತರ ಕಾಯಿಲೆಗಳನ್ನು ಹೊಂದಿರುವ ಗರ್ಭಿಣಿಯರಿಗೆ ಲಸಿಕೆ ನೀಡಲು ಕಳೆದವಾರವೇ ವಿಶ್ವ ಆರೋಗ್ಯ ಸಂಸ್ಥೆ (WHO) ಶಿಫಾರಸ್ಸು ಮಾಡಿದೆ.

ಇದನ್ನೂ ಓದಿ: Gold Rate Today: ಇಳಿಕೆಯ ಹಾದಿ ಹಿಡಿದ ಚಿನ್ನದ ದರ; ಆಭರಣ ಪ್ರಿಯರಿಗೆ ಸಂತಸ

Pregnant postpartum women severely affected in second Covid wave ICMR Study

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್