AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ, ಬಾಣಂತಿಯರಿಗೆ ತೀವ್ರವಾಗಿ ಬಾಧಿಸಿದ ಕೊವಿಡ್​ 19 ಎರಡನೇ ಅಲೆ; ಐಸಿಎಂಆರ್​ ಅಧ್ಯಯನ

ಸುಮಾರು 1530 ಗರ್ಭಿಣಿ-ಬಾಣಂತಿಯರನ್ನು ಅಧ್ಯಯನದಲ್ಲಿ ಒಳಪಡಿಸಿಕೊಳ್ಳಲಾಗಿತ್ತು. ಅವರಲ್ಲಿ 1,143 ಮಂದಿ ಮೊದಲ ಅಲೆಯಲ್ಲಿ ಕೊವಿಡ್​ 19 ಸೋಂಕಿಗೆ ಒಳಗಾದವರು ಹಾಗೂ 387 ಮಂದಿ ಸೋಂಕಿಗೆ ಒಳಗಾದವರಾಗಿದ್ದರು.

ಗರ್ಭಿಣಿ, ಬಾಣಂತಿಯರಿಗೆ ತೀವ್ರವಾಗಿ ಬಾಧಿಸಿದ ಕೊವಿಡ್​ 19 ಎರಡನೇ ಅಲೆ; ಐಸಿಎಂಆರ್​ ಅಧ್ಯಯನ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Jun 17, 2021 | 9:12 AM

Share

ಕೊವಿಡ್​ 19 ಮೊದಲನೇ ಅಲೆಗೆ ಹೋಲಿಸಿದರೆ, ಎರಡನೇ ಅಲೆಯಲ್ಲಿ ಗರ್ಭಿಣಿಯರು, ಆಗಷ್ಟೇ ಹೆರಿಗೆಯಾದ ಮಹಿಳೆಯರು ಅಂದರೆ ಬಾಣಂತಿಯರು ಅತಿ ತೀವ್ರವಾಗಿ ಕೊರೊನಾದಿಂದ ಬಾಧಿತರಾಗಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR) ತಿಳಿಸಿದೆ. ಅಲ್ಲದೆ, ಮೊದಲ ಅಲೆಗಿಂತಲೂ ಈ ಅಲೆಯಲ್ಲಿ ಗರ್ಭಿಣಿಯರು, ಬಾಣಂತಿಯರಲ್ಲಿ ರೋಗಲಕ್ಷಣದ ಪ್ರಕರಣ ಮತ್ತು ಸಾವಿನ ಪ್ರಮಾಣ ಜಾಸ್ತಿ ಇತ್ತು ಎಂದೂ ಐಸಿಎಂಆರ್​ ಅಧ್ಯಯನದಲ್ಲಿ ಬೆಳಕಿಗೆ ಬಂದಿದೆ.

ಕೊವಿಡ್​ 19 ಮೊದಲನೇ ಅಲೆಯಲ್ಲಿ ಗರ್ಭಿಣಿ ಮತ್ತು ಬಾಣಂತಿಯರಲ್ಲಿ ರೋಗ ಲಕ್ಷಣದ ಪ್ರಕರಣಗಳು 1143ಕ್ಕೆ ಕೇವಲ 162ರಂತೆ ಅಂದರೆ ಅನುಪಾತ 14.2 ಪರ್ಸಂಟ್​ ಇತ್ತು. ಆದರೆ ಅದು ಎರಡನೇ ಅಲೆಯಲ್ಲಿ ಶೇ.28.7ರಷ್ಟು ಹೆಚ್ಚಾಗಿದ್ದು, 387ಕ್ಕೆ 111ರಷ್ಟಿದೆ ಎಂದು ಐಸಿಎಂಆರ್​ ಮಾಹಿತಿ ನೀಡಿದೆ. ಹಾಗೇ, ಗರ್ಭಿಣಿ-ಬಾಣಂತಿಯರ ಮರಣ ಪ್ರಮಾಣ ಮೊದಲ ಅಲೆಯಲ್ಲಿ 0.7 (8/1143)ರಷ್ಟಿತ್ತು. ಆದರೆ ಎರಡನೇ ಅಲೆಯಲ್ಲಿ ಶೇ.5.7 (22/387)ಆಗಿದೆ ಎಂದೂ ಹೇಳಿದೆ.

ಸುಮಾರು 1530 ಗರ್ಭಿಣಿ-ಬಾಣಂತಿಯರನ್ನು ಅಧ್ಯಯನದಲ್ಲಿ ಒಳಪಡಿಸಿಕೊಳ್ಳಲಾಗಿತ್ತು. ಅವರಲ್ಲಿ 1,143 ಮಂದಿ ಮೊದಲ ಅಲೆಯಲ್ಲಿ ಕೊವಿಡ್​ 19 ಸೋಂಕಿಗೆ ಒಳಗಾದವರು ಹಾಗೂ 387 ಮಂದಿ ಸೋಂಕಿಗೆ ಒಳಗಾದವರಾಗಿದ್ದರು. ಇನ್ನು ಮೊದಲ ಮತ್ತು ಎರಡನೇ ಅಲೆಯಲ್ಲಿ ಅತ್ಯಂತ ಹೆಚ್ಚು ಗರ್ಭಿಣಿ-ಬಾಣಂತಿಯರು ಮೃತಪಟ್ಟಿದ್ದು, ಕೊವಿಡ್​ 19 ಸಂಬಂಧಿತ ನ್ಯೂಮೋನಿಯಾ ಮತ್ತು ಉಸಿರಾಟದ ಸಮಸ್ಯೆಯಿಂದಲೇ ಆಗಿದೆ ಎಂದೂ ಐಸಿಎಂಆರ್​ ತಿಳಿಸಿದೆ. ಹಾಗೇ, ಬೇರೆ ಇತರ ಕಾಯಿಲೆಗಳನ್ನು ಹೊಂದಿರುವ ಗರ್ಭಿಣಿಯರಿಗೆ ಲಸಿಕೆ ನೀಡಲು ಕಳೆದವಾರವೇ ವಿಶ್ವ ಆರೋಗ್ಯ ಸಂಸ್ಥೆ (WHO) ಶಿಫಾರಸ್ಸು ಮಾಡಿದೆ.

ಇದನ್ನೂ ಓದಿ: Gold Rate Today: ಇಳಿಕೆಯ ಹಾದಿ ಹಿಡಿದ ಚಿನ್ನದ ದರ; ಆಭರಣ ಪ್ರಿಯರಿಗೆ ಸಂತಸ

Pregnant postpartum women severely affected in second Covid wave ICMR Study

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ