AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಹೆಂಡತಿ ಗರ್ಭಿಣಿ; ಒಂದೇ ಕಾರಣ ನೀಡಿ ಮಹಾಕುಂಭ ಮೇಳದ ಕರ್ತವ್ಯದಿಂದ ರಜೆ ಕೇಳಿದ 700 ಪೊಲೀಸರು

ಉತ್ತರ ಪ್ರದೇಶದಲ್ಲಿ ಮಹಾ ಕುಂಭ ಮೇಳದ ತಯಾರಿಗಳು ಬಿರುಸಿನಿಂದ ನಡೆಯುತ್ತಿವೆ. ಆದರೆ, ಮಹಾ ಕುಂಭಮೇಳದ ಭದ್ರತಾ ವ್ಯವಸ್ಥೆಗಳಿಗೆ ಪೊಲೀಸರ ರಜೆಯಿಂದಾಗಿ ಅಡ್ಡಿಯಾಗಿದೆ. ಮಹಾ ಕುಂಭ ಮೇಳದ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ 1,200 ಪೊಲೀಸರು ರಜೆಗಾಗಿ ಅರ್ಜಿ ಸಲ್ಲಿಸಿದ್ದಾರೆ. ಅವರಲ್ಲಿ 700ಕ್ಕೂ ಹೆಚ್ಚು ಪೊಲೀಸರು ಒಂದೇ ಕಾರಣವನ್ನು ಉಲ್ಲೇಖಿಸಿ ರಜೆಗಾಗಿ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಪತ್ನಿಗೆ ಹೆರಿಗೆ ಸಮಯ ಎಂಬ ಕಾರಣ ನೀಡಿ ರಜೆ ಕೇಳಿದ್ದಾರೆ.

ನನ್ನ ಹೆಂಡತಿ ಗರ್ಭಿಣಿ; ಒಂದೇ ಕಾರಣ ನೀಡಿ ಮಹಾಕುಂಭ ಮೇಳದ ಕರ್ತವ್ಯದಿಂದ ರಜೆ ಕೇಳಿದ 700 ಪೊಲೀಸರು
Maha Kumbh Mela
ಸುಷ್ಮಾ ಚಕ್ರೆ
| Edited By: |

Updated on:Jan 13, 2025 | 9:03 AM

Share

ಪ್ರಯಾಗರಾಜ್: 2025ರ ಜನವರಿಯಲ್ಲಿ ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯಲಿರುವ ಮಹಾ ಕುಂಭ ಮೇಳಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಕುಂಭ ಮೇಳಕ್ಕೆ ಕೋಟಿಗಟ್ಟಲೆ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಅವರ ಭದ್ರತೆಗಾಗಿ ವಿವಿಧ ರಾಜ್ಯಗಳಿಂದ ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಮಹಾಕುಂಭಕ್ಕೆ ಸುಮಾರು 6,000 ಪೊಲೀಸರನ್ನು ನಿಯೋಜಿಸಲಾಗಿದ್ದು, ಅಕ್ಟೋಬರ್ 25ರಿಂದ ನಿಯೋಜನೆ ಆರಂಭವಾಗಿದೆ. ಈ ಪೈಕಿ 1,200 ಸಿಬ್ಬಂದಿ ಡಿಸೆಂಬರ್‌ನಲ್ಲಿ ರಜೆಗಾಗಿ ಅರ್ಜಿ ಸಲ್ಲಿಸಿದ್ದಾರೆ.

ರಜೆಗಾಗಿ ಅರ್ಜಿ ಸಲ್ಲಿಸಿದ 1,200 ಪೊಲೀಸರಲ್ಲಿ ಅರ್ಧಕ್ಕಿಂತ ಹೆಚ್ಚು ಅಂದರೆ ಸುಮಾರು 700 ಪೊಲೀಸರು ಒಂದೇ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಅವರ ಪತ್ನಿಯ ಹೆರಿಗೆ ಅಥವಾ ಅನಾರೋಗ್ಯದ ಕಾರಣ ನೀಡಿ ರಜೆ ಕೇಳಿದ್ದಾರೆ. ಕೆಲವು ಪೋಲೀಸರ ಪತ್ನಿಗೆ ಜನವರಿಯಲ್ಲಿ ಹೆರಿಗೆಯಾಗಲಿದ್ದು, ಇನ್ನು ಕೆಲವರ ಪತ್ನಿಯರಿಗೆ ಡಿಸೆಂಬರ್‌ನಲ್ಲಿ ಹೆರಿಗೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: PM Modi: ಮಹಾ ಕುಂಭ ಏಕತೆಯ ಮಹಾ ಯಜ್ಞ; ಪ್ರಯಾಗರಾಜ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ

ಮಹಾಕುಂಭದ ಭದ್ರತಾ ವ್ಯವಸ್ಥೆಗಳನ್ನು ನೋಡಿಕೊಳ್ಳುತ್ತಿರುವ ಅಧಿಕಾರಿಗಳನ್ನು ಈ ಅಸಾಮಾನ್ಯ ಪ್ರವೃತ್ತಿ ಆಶ್ಚರ್ಯಗೊಳಿಸಿದೆ. ಈ ಪೊಲೀಸರಲ್ಲಿ ಹೆಚ್ಚಿನವರು 2018 ಮತ್ತು 2023ರಲ್ಲಿ ನೇಮಕಗೊಂಡ ಕಾನ್ಸ್‌ಟೇಬಲ್‌ಗಳು. ಉತ್ತರ ಪ್ರದೇಶದ ಬಹುತೇಕ ಎಲ್ಲಾ ಜಿಲ್ಲೆಗಳ ಪೊಲೀಸರು ನಿಯೋಜನೆಯ ಭಾಗವಾಗಿದ್ದಾರೆ. ಇದಲ್ಲದೇ ಪೋಷಕರ ಅನಾರೋಗ್ಯದ ಹಿನ್ನೆಲೆಯಲ್ಲಿ 250 ಪೊಲೀಸರು ರಜೆಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇತರರು ಸಂಬಂಧಿಕರ ‘ತೆಹ್ರ್ವಿ’ (ಸಾವಿನ ನಂತರ 13ನೇ ದಿನದ ಸಮಾರಂಭ) ಅಥವಾ ಅಂತಹುದೇ ಕಾರ್ಯಕ್ರಮಗಳಿಗೆ ಹಾಜರಾಗುವಂತಹ ವಿವಿಧ ಕಾರಣಗಳಿಗಾಗಿ ರಜೆ ಕೋರಿದ್ದಾರೆ.

ಮಹಾ ಕುಂಭ ಮೇಳ:

ಮಹಾ ಕುಂಭಮೇಳವು ಜನವರಿ 13ರಂದು ಪೌಶ್ ಪೂರ್ಣಿಮಾ ಸ್ನಾನದೊಂದಿಗೆ ಪ್ರಾರಂಭವಾಗುತ್ತದೆ. ಫೆಬ್ರವರಿ 26 ರಂದು ಕುಂಭ ಮೇಳ ಮುಕ್ತಾಯಗೊಳ್ಳುತ್ತದೆ. ಈ ಪ್ರಮುಖ ಕಾರ್ಯಕ್ರಮವು 2019ರ ಕುಂಭ ಮೇಳದಲ್ಲಿ ದಾಖಲಾದ 25 ಕೋಟಿ ಜನರನ್ನು ಮೀರಿಸಿ, 40 ಕೋಟಿ ಭಕ್ತರನ್ನು ಆಕರ್ಷಿಸುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:34 pm, Thu, 19 December 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್