AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಂಸ ತಿನ್ನಲು ಗರ್ಭಿಣಿ ಕಾಡೆಮ್ಮೆಯನ್ನೂ ಬಿಡದೆ ಕೊಂದ ಕಿರಾತಕರು, ಎಲ್ಲಿ?

ತಿರುವನಂತಪುರಂ: ಕಳೆದ ಕೆಲವು ತಿಂಗಳ ಹಿಂದೆ ಪಟಾಕಿ ತುಂಬಿದ ಹಣ್ಣು ತಿಂದು ಗರ್ಭಿಣಿ ಆನೆಯೊಂದು ಸಾವನ್ನಪ್ಪಿದ್ದ ಮನಕಲುಕುವ ಘಟನೆ ಕೇರಳದಲ್ಲಿ ನಡೆದಿತ್ತು. ಇದೀಗ ಅಂಥದ್ದೇ ಮತ್ತೊಂದು ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಆಗಸ್ಟ್​ 10 ರಂದು ಕಾಡುಪ್ರಾಣಿಯ ಮಾಂಸವನ್ನು ಕೆಲವರು ಸೇವಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಆರು ಬೇಟೆಗಾರರನ್ನು ಬಂಧಿಸಿದ್ದರು. ಬಂಧಿತ ಬೇಟೆಗಾರರನ್ನು ಅಬು, ಮುಹಮ್ಮದ್​ ಅನ್ಸಿಫ್​, ಮುಹಮ್ಮದ್​ ಬುಸ್ಥಾನ್​, ಸುಹೇಲ್​ ಮತ್ತು ಆಶಿಖ್ […]

ಮಾಂಸ ತಿನ್ನಲು ಗರ್ಭಿಣಿ ಕಾಡೆಮ್ಮೆಯನ್ನೂ ಬಿಡದೆ ಕೊಂದ ಕಿರಾತಕರು, ಎಲ್ಲಿ?
KUSHAL V
| Edited By: |

Updated on: Aug 20, 2020 | 11:51 AM

Share

ತಿರುವನಂತಪುರಂ: ಕಳೆದ ಕೆಲವು ತಿಂಗಳ ಹಿಂದೆ ಪಟಾಕಿ ತುಂಬಿದ ಹಣ್ಣು ತಿಂದು ಗರ್ಭಿಣಿ ಆನೆಯೊಂದು ಸಾವನ್ನಪ್ಪಿದ್ದ ಮನಕಲುಕುವ ಘಟನೆ ಕೇರಳದಲ್ಲಿ ನಡೆದಿತ್ತು. ಇದೀಗ ಅಂಥದ್ದೇ ಮತ್ತೊಂದು ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಕಳೆದ ಆಗಸ್ಟ್​ 10 ರಂದು ಕಾಡುಪ್ರಾಣಿಯ ಮಾಂಸವನ್ನು ಕೆಲವರು ಸೇವಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಆರು ಬೇಟೆಗಾರರನ್ನು ಬಂಧಿಸಿದ್ದರು. ಬಂಧಿತ ಬೇಟೆಗಾರರನ್ನು ಅಬು, ಮುಹಮ್ಮದ್​ ಅನ್ಸಿಫ್​, ಮುಹಮ್ಮದ್​ ಬುಸ್ಥಾನ್​, ಸುಹೇಲ್​ ಮತ್ತು ಆಶಿಖ್ ಎಂದು ಗುರುತಿಸಲಾಗಿದೆ.

ಬಂಧಿತರ ವಿಚಾರಣೆ ವೇಳೆ ಆರೋಪಿಗಳು ಕಾಡೆಮ್ಮೆಯೊಂದನ್ನು ಪಂಚಾ ಅರಣ್ಯದಲ್ಲಿ ಬೇಟೆಯಾಡಿದ್ದು ಅದರ ಮಾಂಸವನ್ನು ತೆಗೆದುಕೊಂಡು ಬಂದಿದ್ದರು ಎಂದು ತಿಳಿದುಬಂದಿದೆ. ಇನ್ನು ಬೇಟೆಯಾಡಿದ್ದ ಜಾಗಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಗೆ ಬೇಟೆಯಾದ ಕಾಡೆಮ್ಮೆ ಗರ್ಭಿಣಿಯಾಗಿತ್ತು ಎಂದು ಅದರ ಕಳೆಬರದ ಪರಿಶೀಲನೆ ವೇಳೆ ಗೊತ್ತಾಗಿದೆ. ಈ ಮಾಹಿತಿಯನ್ನು ಬಂಧಿತರು ವಿಚಾರಣೆ ವೇಳೆ ಸಹ ಒಪ್ಪಿಕೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಕೇಸ್​ ದಾಖಲಿಸಿಕೊಂಡಿರುವ ಅರಣ್ಯಾಧಿಕಾರಿಗಳು ಬಂಧಿತರ ಮನೆಯಿಂದ ಕಾಡೆಮ್ಮೆಯ ಮಾಂಸ ಹಾಗೂ ಒಂದು ದೇಸಿ ಕೋವಿ ಹಾಗೂ ಇತರೆ ಮಾರಕಾಸ್ತ್ರಗಳನ್ನ ಸಹ ವಶಪಡಿಸಿಕೊಂಡಿದ್ದಾರೆ. ಒಟ್ನಲ್ಲಿ, ಮಾಂಸದ ಆಸೆಗೆ ಬಿದ್ದು ಬಸುರಿ ಎಮ್ಮೆಯನ್ನೂ ಬಿಡದೆ ಕೊಂದ ಕಿರಾತಕರು ವಿಚಾರಣೆ ವೇಳೆ ನಾವು ದೇಹ ಬಗಿಯುವಾಗ ಒಳಗೆ ಕರುವಿನ ಕಳೆಬರ ನೋಡಿ ಅದನ್ನು ಮುಟ್ಟಲಿಲ್ಲ ಎಂದರಂತೆ. ಆದರೆ, ಏನು ಪ್ರಯೋಜನ ಕಾಡೆಮ್ಮೆಯ ಕೊರಳು ಹಿಸುಕಿ ಕೊಂದರೆ ಅದರ ಕರುಳಬಳ್ಳಿ ಬದುಕುವುದೇ?

ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಈ ರೈತ ಮಾಡಿದ ಸಾಹಸ ರೋಚಕ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!