AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಂಸ ತಿನ್ನಲು ಗರ್ಭಿಣಿ ಕಾಡೆಮ್ಮೆಯನ್ನೂ ಬಿಡದೆ ಕೊಂದ ಕಿರಾತಕರು, ಎಲ್ಲಿ?

ತಿರುವನಂತಪುರಂ: ಕಳೆದ ಕೆಲವು ತಿಂಗಳ ಹಿಂದೆ ಪಟಾಕಿ ತುಂಬಿದ ಹಣ್ಣು ತಿಂದು ಗರ್ಭಿಣಿ ಆನೆಯೊಂದು ಸಾವನ್ನಪ್ಪಿದ್ದ ಮನಕಲುಕುವ ಘಟನೆ ಕೇರಳದಲ್ಲಿ ನಡೆದಿತ್ತು. ಇದೀಗ ಅಂಥದ್ದೇ ಮತ್ತೊಂದು ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಆಗಸ್ಟ್​ 10 ರಂದು ಕಾಡುಪ್ರಾಣಿಯ ಮಾಂಸವನ್ನು ಕೆಲವರು ಸೇವಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಆರು ಬೇಟೆಗಾರರನ್ನು ಬಂಧಿಸಿದ್ದರು. ಬಂಧಿತ ಬೇಟೆಗಾರರನ್ನು ಅಬು, ಮುಹಮ್ಮದ್​ ಅನ್ಸಿಫ್​, ಮುಹಮ್ಮದ್​ ಬುಸ್ಥಾನ್​, ಸುಹೇಲ್​ ಮತ್ತು ಆಶಿಖ್ […]

ಮಾಂಸ ತಿನ್ನಲು ಗರ್ಭಿಣಿ ಕಾಡೆಮ್ಮೆಯನ್ನೂ ಬಿಡದೆ ಕೊಂದ ಕಿರಾತಕರು, ಎಲ್ಲಿ?
KUSHAL V
| Edited By: |

Updated on: Aug 20, 2020 | 11:51 AM

Share

ತಿರುವನಂತಪುರಂ: ಕಳೆದ ಕೆಲವು ತಿಂಗಳ ಹಿಂದೆ ಪಟಾಕಿ ತುಂಬಿದ ಹಣ್ಣು ತಿಂದು ಗರ್ಭಿಣಿ ಆನೆಯೊಂದು ಸಾವನ್ನಪ್ಪಿದ್ದ ಮನಕಲುಕುವ ಘಟನೆ ಕೇರಳದಲ್ಲಿ ನಡೆದಿತ್ತು. ಇದೀಗ ಅಂಥದ್ದೇ ಮತ್ತೊಂದು ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಕಳೆದ ಆಗಸ್ಟ್​ 10 ರಂದು ಕಾಡುಪ್ರಾಣಿಯ ಮಾಂಸವನ್ನು ಕೆಲವರು ಸೇವಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಆರು ಬೇಟೆಗಾರರನ್ನು ಬಂಧಿಸಿದ್ದರು. ಬಂಧಿತ ಬೇಟೆಗಾರರನ್ನು ಅಬು, ಮುಹಮ್ಮದ್​ ಅನ್ಸಿಫ್​, ಮುಹಮ್ಮದ್​ ಬುಸ್ಥಾನ್​, ಸುಹೇಲ್​ ಮತ್ತು ಆಶಿಖ್ ಎಂದು ಗುರುತಿಸಲಾಗಿದೆ.

ಬಂಧಿತರ ವಿಚಾರಣೆ ವೇಳೆ ಆರೋಪಿಗಳು ಕಾಡೆಮ್ಮೆಯೊಂದನ್ನು ಪಂಚಾ ಅರಣ್ಯದಲ್ಲಿ ಬೇಟೆಯಾಡಿದ್ದು ಅದರ ಮಾಂಸವನ್ನು ತೆಗೆದುಕೊಂಡು ಬಂದಿದ್ದರು ಎಂದು ತಿಳಿದುಬಂದಿದೆ. ಇನ್ನು ಬೇಟೆಯಾಡಿದ್ದ ಜಾಗಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಗೆ ಬೇಟೆಯಾದ ಕಾಡೆಮ್ಮೆ ಗರ್ಭಿಣಿಯಾಗಿತ್ತು ಎಂದು ಅದರ ಕಳೆಬರದ ಪರಿಶೀಲನೆ ವೇಳೆ ಗೊತ್ತಾಗಿದೆ. ಈ ಮಾಹಿತಿಯನ್ನು ಬಂಧಿತರು ವಿಚಾರಣೆ ವೇಳೆ ಸಹ ಒಪ್ಪಿಕೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಕೇಸ್​ ದಾಖಲಿಸಿಕೊಂಡಿರುವ ಅರಣ್ಯಾಧಿಕಾರಿಗಳು ಬಂಧಿತರ ಮನೆಯಿಂದ ಕಾಡೆಮ್ಮೆಯ ಮಾಂಸ ಹಾಗೂ ಒಂದು ದೇಸಿ ಕೋವಿ ಹಾಗೂ ಇತರೆ ಮಾರಕಾಸ್ತ್ರಗಳನ್ನ ಸಹ ವಶಪಡಿಸಿಕೊಂಡಿದ್ದಾರೆ. ಒಟ್ನಲ್ಲಿ, ಮಾಂಸದ ಆಸೆಗೆ ಬಿದ್ದು ಬಸುರಿ ಎಮ್ಮೆಯನ್ನೂ ಬಿಡದೆ ಕೊಂದ ಕಿರಾತಕರು ವಿಚಾರಣೆ ವೇಳೆ ನಾವು ದೇಹ ಬಗಿಯುವಾಗ ಒಳಗೆ ಕರುವಿನ ಕಳೆಬರ ನೋಡಿ ಅದನ್ನು ಮುಟ್ಟಲಿಲ್ಲ ಎಂದರಂತೆ. ಆದರೆ, ಏನು ಪ್ರಯೋಜನ ಕಾಡೆಮ್ಮೆಯ ಕೊರಳು ಹಿಸುಕಿ ಕೊಂದರೆ ಅದರ ಕರುಳಬಳ್ಳಿ ಬದುಕುವುದೇ?

ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಈ ರೈತ ಮಾಡಿದ ಸಾಹಸ ರೋಚಕ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ