AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗರ್ಭಿಣಿ ಪತ್ನಿಗೆ ನಡುರಸ್ತೆಯಲ್ಲೇ ಕಲ್ಲಿನಿಂದ ಜಜ್ಜಿ ಪತಿಯಿಂದ ಹಲ್ಲೆ

ಗರ್ಭಿಣಿ ಪತ್ನಿಗೆ ವ್ಯಕ್ತಿಯೊಬ್ಬ ಕಲ್ಲಿನಿಂದ ಜಜ್ಜಿ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪತ್ನಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ನಂತರ ಆರೋಪಿಯು ತನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಭೀಕರ ಹಲ್ಲೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪತಿ ಮತ್ತು ಆತನ ಪತ್ನಿಯ ನಡುವೆ ನಡೆದ ವಾಗ್ವಾದದ ನಂತರ, ಆತ ದೊಡ್ಡ ಕಲ್ಲನ್ನು ಎತ್ತಿಕೊಂಡು ಆಕೆಗೆ ಪದೇ ಪದೇ ಹೊಡೆಸಿದ್ದಾನೆ.

Video: ಗರ್ಭಿಣಿ ಪತ್ನಿಗೆ ನಡುರಸ್ತೆಯಲ್ಲೇ ಕಲ್ಲಿನಿಂದ ಜಜ್ಜಿ ಪತಿಯಿಂದ ಹಲ್ಲೆ
ಗರ್ಭಿಣಿ
Follow us
ನಯನಾ ರಾಜೀವ್
|

Updated on: Apr 08, 2025 | 9:20 AM

ಹೈದರಾಬಾದ್, ಏಪ್ರಿಲ್ 08: ವ್ಯಕ್ತಿಯೊಬ್ಬ ನಡುರಸ್ತೆಯಲ್ಲಿ ಗರ್ಭಿಣಿ(Pregnant)ಪತ್ನಿಗೆ ಕಲ್ಲಿನಿಂದ ಜಜ್ಜಿ ಹಲ್ಲೆ ನಡೆಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೈದರಾಬಾದ್​ನಲ್ಲಿ ನಡೆದ ಘಟನೆ ಇದಾಗಿದೆ. ಈ ಆಘಾತಕಾರಿ ಘಟನೆ ಏಪ್ರಿಲ್ 1 ರ ರಾತ್ರಿ ಸೈಬರಾಬಾದ್ ಪೊಲೀಸ್ ಕಮಿಷನರೇಟ್‌ನ ಗಚಿಬೌಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ಪತ್ನಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ನಂತರ ಆರೋಪಿಯು ತನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ.

ಈ ಭೀಕರ ಹಲ್ಲೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪತಿ ಮತ್ತು ಆತನ ಪತ್ನಿಯ ನಡುವೆ ನಡೆದ ವಾಗ್ವಾದದ ನಂತರ, ಆತ ದೊಡ್ಡ ಕಲ್ಲನ್ನು ಎತ್ತಿಕೊಂಡು ಆಕೆಗೆ ಪದೇ ಪದೇ ಹೊಡೆಸಿದ್ದಾನೆ. ಬಳಿಕ ಸತ್ತಿದ್ದಾಳೆಂದು ಭಾವಿಸಿ ಆಕೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ರಸ್ತೆಯಲ್ಲಿ ಗಾಯಗೊಂಡು ಬಿದ್ದಿದ್ದ ಮಹಿಳೆಯನ್ನು ದಾರಿಹೋಕರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
Image
ಮೀರತ್​​ನಲ್ಲಿ ಗಂಡನನ್ನು ಕೊಂದು ಡ್ರಮ್​ನಲ್ಲಿ ತುಂಬಿಸಿದ್ದವಳು ಗರ್ಭಿಣಿ!
Image
ಮದುವೆಯಾಗಲು ನಿರಾಕರಿಸಿದ್ದಕ್ಕೆ ಸ್ನೇಹಿತೆಗೆ ಚಾಕುವಿನಿಂದ ಇರಿದ ಯುವಕ
Image
ನಗ್ನ ವಿಡಿಯೋ ಕರೆ ಮಾಡುವಂತೆ ಒತ್ತಾಯ, ಅನ್ಯ ಕೋಮಿನ ಯುವಕನಿಗೆ ಬಿತ್ತು ಗೂಸಾ
Image
13 ವರ್ಷದ ಕ್ಯಾನ್ಸರ್​ ರೋಗಿ ಮೇಲೆ ವ್ಯಕ್ತಿಯಿಂದ ಅತ್ಯಾಚಾರ

ಅವರನ್ನು ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆ (NIMS) ಗೆ ಸ್ಥಳಾಂತರಿಸಲಾಯಿತು. ತಲೆಗೆ ಗಂಭೀರವಾದ ಗಾಯಗಳಾಗಿದ್ದರಿಂದ ಅವರು ಕೋಮಾಕ್ಕೆ ಜಾರಿದ್ದಾರೆ. ಪೊಲೀಸರ ಪ್ರಕಾರ, ಮೊಹಮ್ಮದ್ ಬಸ್ರತ್ ಅವರು ಅಕ್ಟೋಬರ್ 2024 ರಲ್ಲಿ ಕೋಲ್ಕತ್ತಾದ ಶಬಾನಾ ಪರ್ವೀನ್ ಅವರನ್ನು ಪ್ರೇಮ ವಿವಾಹವಾಗಿದ್ದರು. ಈ ದಂಪತಿಗಳು ಹಫೀಜ್‌ಪೇಟೆಯ ಆದಿತ್ಯನಗರದಲ್ಲಿ ವಾಸಿಸುತ್ತಿದ್ದರು.

ಮತ್ತಷ್ಟು ಓದಿ: ಮೀರತ್​​ನಲ್ಲಿ ಗಂಡನನ್ನು ಕೊಂದು ಡ್ರಮ್​ನಲ್ಲಿ ತುಂಬಿಸಿದ್ದ ಹೆಂಡತಿ ಗರ್ಭಿಣಿ; ಶಾಕಿಂಗ್ ವಿಷಯ ಬಯಲು

ಇಂಟೀರಿಯರ್ ಡಿಸೈನರ್ ಆಗಿದ್ದ ಬಸ್ರತ್ ಜೀವನೋಪಾಯಕ್ಕಾಗಿ ವಿಕಾರಾಬಾದ್‌ನಿಂದ ಹೈದರಾಬಾದ್‌ಗೆ ವಲಸೆ ಬಂದು ಆದಿತ್ಯನಗರದಲ್ಲಿ ವಾಸಿಸುತ್ತಿದ್ದರು, ಅಲ್ಲಿ ಅವರು ಶಬಾನಾ ಅವರನ್ನು ಸಂಪರ್ಕಿಸಿದರು. ಮಾರ್ಚ್ 29 ರಂದು ವಾಂತಿ ಸಮಸ್ಯೆಯಿಂದ ಬಳಲುತ್ತಿದ್ದ ಪರ್ವೀನ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಎರಡು ತಿಂಗಳ ಗರ್ಭಿಣಿಯಾಗಿದ್ದರು. ಅವರ ಸ್ಥಿತಿ ಸುಧಾರಿಸಿದ ನಂತರ, ಏಪ್ರಿಲ್ 1 ರ ರಾತ್ರಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.

ಆಸ್ಪತ್ರೆಯಿಂದ ಹೊರಬಂದ ನಂತರ, ಅವರು ಯಾವುದೋ ವಿಷಯಕ್ಕೆ ಜಗಳವಾಡಿದರು. ಬಸ್ರತ್ ಶಬಾನಾಳನ್ನು ಒದೆಯುತ್ತಿರುವುದು ಕಂಡುಬಂದಿತು, ಮತ್ತು ಅವಳು ನೆಲಕ್ಕೆ ಕುಸಿದ ನಂತರ, ಪಕ್ಕದಲ್ಲಿದ್ದ ಕಲ್ಲು ಎತ್ತಿಕೊಂಡು ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ.

ಗಚಿಬೌಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡರು. ಬಸ್ರತ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
VIDEO: ಲೈನ್ ದಾಟಿ ವಿಕೆಟ್ ಕೈಚೆಲ್ಲಿದ ಜಸ್​ಪ್ರೀತ್ ಬುಮ್ರಾ
VIDEO: ಲೈನ್ ದಾಟಿ ವಿಕೆಟ್ ಕೈಚೆಲ್ಲಿದ ಜಸ್​ಪ್ರೀತ್ ಬುಮ್ರಾ
ಸುದೀಪ್ ವಿರುದ್ಧ ಏಕವಚನ ಬಳಸಿದರೇ ಡಿಸಿಎಂ ಡಿಕೆಶಿ: ವಿಡಿಯೋ ನೋಡಿ
ಸುದೀಪ್ ವಿರುದ್ಧ ಏಕವಚನ ಬಳಸಿದರೇ ಡಿಸಿಎಂ ಡಿಕೆಶಿ: ವಿಡಿಯೋ ನೋಡಿ
Weekly Horoscope: ಜೂನ್​ 23 ರಿಂದ 29 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 23 ರಿಂದ 29 ರವರೆಗಿನ ವಾರ ಭವಿಷ್ಯ