AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

ಭೂತ ಬಿಡಿಸುವ ನೆಪದಲ್ಲಿ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಆ ಮಾಂತ್ರಿಕ ಆಕೆಯ ಮಾವನಿಗೆ ಹೊರಗಡೆ ಕೂರುವಂತೆ ಸೂಚಿಸಿ ಆಕೆಯನ್ನು ಒಳಗೆ ಕರೆದುಕೊಂಡು ಹೋಗಿ ಸಹಚರರೊಂದಿಗೆ ಸಾಮೂಹಿಕ ಅತ್ಯಾಚಾರವೆಸಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೆಯ ಮಾವ ಆಕೆಯನ್ನು ಶಿವೈಪಟ್ಟಿ ಪೊಲೀಸ್ ಠಾಣೆ ಪ್ರದೇಶದ ಮಧೇರಾ ಗ್ರಾಮದಲ್ಲಿರುವ ಮಾಂತ್ರಿಕನ ಬಳಿಗೆ ಭೂತ ಬಿಡಿಸಲು ಕರೆದೊಯ್ದರು. ಮಹಿಳೆ ಭಯದಿಂದ ಈ ವಿಚಾರವನ್ನು ಯಾರಿಗೂ ಹೇಳಿರಲಿಲ್ಲ.

ಬಿಹಾರ: ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ
ಗರ್ಭಿಣಿImage Credit source: Mayo Clinic
ನಯನಾ ರಾಜೀವ್
|

Updated on: Jul 02, 2025 | 7:44 AM

Share

ಮುಜಾಫರ್​ಪುರ, ಜುಲೈ 02: ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಅತ್ಯಾಚಾರವೆಸಗಿರುವ  ಘಟನೆ ಬಿಹಾರದ ಮುಜಾಫರ್​ಪುರದಲ್ಲಿ ನಡೆದಿದೆ. ಆಕೆ ಗರ್ಭಿಣಿಯಾದಾಗಿನಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಳು, ಆಕೆಯ ಕುಟುಂಬದವರು ಮೂಢನಂಬಿಕೆಯಿಂದ ಮಾಂತ್ರಿಕನ ಬಳಿ ಕರೆದುಕೊಂಡು ಬಂದಿದ್ದರು. ಆ ಮಾಂತ್ರಿಕ ಆಕೆಯ ಮಾವನಿಗೆ ಹೊರಗಡೆ ಕೂರುವಂತೆ ಸೂಚಿಸಿ ಆಕೆಯನ್ನು ಒಳಗೆ ಕರೆದುಕೊಂಡು ಹೋಗಿ ಸಹಚರರೊಂದಿಗೆ ಸಾಮೂಹಿಕ ಅತ್ಯಾಚಾರವೆಸಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಆಕೆಯ ಮಾವ ಆಕೆಯನ್ನು ಶಿವೈಪಟ್ಟಿ ಪೊಲೀಸ್ ಠಾಣೆ ಪ್ರದೇಶದ ಮಧೇರಾ ಗ್ರಾಮದಲ್ಲಿರುವ ಮಾಂತ್ರಿಕನ ಬಳಿಗೆ ಭೂತ ಬಿಡಿಸಲು ಕರೆದೊಯ್ದರು. ಮಹಿಳೆ ಭಯದಿಂದ ಈ ವಿಚಾರವನ್ನು ಯಾರಿಗೂ ಹೇಳಿರಲಿಲ್ಲ. ಆದರೆ ಮತ್ತೊಮ್ಮೆ ಕೂಡ ಹೀಗೆ ಮಾಡಿದ್ದ,ಮೂರನೇ ಬಾರಿಗೆ ಕರೆದೊಯ್ದಾಗ ಆರೋಪಿ ಇದೇ ಕೆಲಸವನ್ನು ಮತ್ತೆ ಮಾಡಿದಾಗ ಆಕೆ ಸುಮ್ಮನಿರಲಾರದೆ ಕುಟುಂಬದವರ ಬಳಿ ಹೇಳಿಕೊಂಡಿದ್ದಾಳೆ.

ಮಹಿಳೆ ಸ್ಥಿತಿ ತೀರಾ ಹದಗೆಟ್ಟಿತ್ತು, ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಕೂಡಲೇ ಕುಟುಂಬದವರಿಗೆ ಮಾಹಿತಿ ನೀಡಲಾಗಿತ್ತು. ಶಿವಾಯಿಪಟ್ಟಿ ಪೊಲೀಸ್ ಠಾಣೆಗೂ ಮಾಹಿತಿ ನೀಡಲಾಗಿದೆ, ಪ್ರಕರಣದಲ್ಲಿ ತನಿಖೆ ಮತ್ತು ಕ್ರಮ ಮುಂದುವರೆದಿದೆ.

ಮತ್ತಷ್ಟು ಓದಿ: ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

ಉತ್ತರ ಪ್ರದೇಶದ ಬಾಗ್​ಪತ್​ನಲ್ಲಿ ಕೆಲವುತಿಂಗಳುಗಳ ಹಿಂದೆ ಇಂಥದ್ದೇ ಪ್ರಕರಣ ಬೆಳಕಿಗೆ ಬಂದಿತ್ತು. ಅಲ್ಲಿಯೂ ಕೂಡ ಭೂತ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಭೂತ ಬಿಡಿಸುವ ನೆಪದಲ್ಲಿ ಮಾಂತ್ರಿಕ ಹಾಗೂ ಆತನ ಸಹಚರರು ತನ್ನನ್ನು ಪ್ರಜ್ಞೆ ತಪ್ಪಿಸಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು.ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮೂವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.

ಮುಜಾಫರ್‌ಪುರದಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ, ಮೇ 26 ರಂದು ಅಪ್ರಾಪ್ತಳ ಮೇಲೆ ಅತ್ಯಾಚಾರ ನಡೆಸಿ, ನಂತರ ಹಲ್ಲೆ ನಡೆಸಲಾಯಿತು. ಬಾಲಕಿಯನ್ನು ಆಕೆಯ ಚಿಕ್ಕಮ್ಮನ ಮನೆಯ ಬಳಿ ಚಾಕೊಲೇಟ್‌ನಿಂದ ಆಮಿಷವೊಡ್ಡಿ ಹೊಲಕ್ಕೆ ಕರೆದೊಯ್ದು ಅತ್ಯಾಚಾರವೆಸಗಲಾಗಿತ್ತು.ಆಕೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಹಾಸಿಗೆ ಸಿಗದೆ ಕಾಯುವಂತಾಗಿತ್ತು. ಬಾಲಕಿ ಪ್ರಾಣ ಬಿಟ್ಟಿದ್ದಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!