AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ವರ್ಷದ ಮಗನ ಕತ್ತುಕೊಯ್ದು ದೇವರಿಗೆ ಬಲಿಕೊಟ್ಟ ಮದರಸಾ ಶಿಕ್ಷಕಿ

ಮಗನನ್ನು ಕೊಂದಿದ್ದು ಅಲ್ಲಾಹುವನ್ನು ತೃಪ್ತಿಪಡಿಸಲು, ದೇವರಿಗಾಗಿ ನಾನು ಈ ತ್ಯಾಗವನ್ನು ಮಾಡಲೇಬೇಕಿತ್ತು ಎಂದು Madarasa Teacher ಶಾಯೀದಾ ತಮ್ಮ ಬಳಿ ಹೇಳಿಕೊಂಡಿದ್ದಾಗಿ ಪಾಲಕ್ಕಾಡ್ ಎಸ್​ಪಿ ಆರ್​. ವಿಶ್ವನಾಥ್​ ತಿಳಿಸಿದ್ದಾರೆ.

6 ವರ್ಷದ ಮಗನ ಕತ್ತುಕೊಯ್ದು ದೇವರಿಗೆ ಬಲಿಕೊಟ್ಟ ಮದರಸಾ ಶಿಕ್ಷಕಿ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Feb 08, 2021 | 7:14 PM

Share

ಪಾಲಕ್ಕಾಡ್: ದೇವರನ್ನು ಸಂತೃಪ್ತಿ ಪಡೆಸಲೆಂದು ತನ್ನ ಆರುವರ್ಷದ ಮಗನನ್ನೇ ಬಲಿಕೊಟ್ಟ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಪಾಲಕ್ಕಾಡ್​ ಜಿಲ್ಲೆಯ ಮದರಸಾವೊಂದರ ಶಿಕ್ಷಕಿಯಾಗಿರುವ ಶಯೀದಾ ಬಂಧಿತ ತಾಯಿ. ಮೂರು ಮಕ್ಕಳ ಅಮ್ಮನಾಗಿರುವ ಇವರು ಸದ್ಯ ಗರ್ಭಿಣಿ. ನಾಲ್ಕನೇ ಮಗುವನ್ನು ಹೊಟ್ಟೆಯಲ್ಲಿ ಹೊತ್ತುಕೊಂಡಿರುವ ಈಕೆ, ತನ್ನ ಮೂರನೇ ಮಗುವಿನ ಕತ್ತು ಕೊಯ್ದಿದ್ದಾರೆ.

ಮಗನನ್ನು ಕೊಂದಿದ್ದು ಅಲ್ಲಾಹುವನ್ನು ತೃಪ್ತಿಪಡಿಸಲು, ದೇವರಿಗಾಗಿ ನಾನು ಈ ತ್ಯಾಗವನ್ನು ಮಾಡಲೇಬೇಕಿತ್ತು ಎಂದು ಶಾಯೀದಾ ತಮ್ಮ ಬಳಿ ಹೇಳಿಕೊಂಡಿದ್ದಾಗಿ ಪಾಲಕ್ಕಾಡ್ ಎಸ್​ಪಿ ಆರ್​. ವಿಶ್ವನಾಥ್​ ತಿಳಿಸಿದ್ದಾರೆ. ಶಾಯಿದಾ ಪತಿ ಸುಲ್ತಾನ್​ ಚಾಲಕರಾಗಿದ್ದಾರೆ. ಉಳಿದಿಬ್ಬರೂ ಗಂಡು ಮಕ್ಕಳೇ ಆಗಿದ್ದು, ಅವರು ನಿದ್ದೆ ಮಾಡುತ್ತಿದ್ದ ಹೊತ್ತಲ್ಲಿ ಶಾಯೀದಾ ಈ ಕೃತ್ಯ ಎಸಗಿದ್ದಾರೆ. ಮಗನನ್ನು ಹತ್ಯೆ ಮಾಡಿದ ಬಳಿಕ ತಾವೇ ಪೊಲೀಸರಿಗೆ ಕರೆ ಮಾಡಿ, ವಿಷಯ ತಿಳಿಸಿದ್ದಾರೆ.

ಪೊಲೀಸರು ಶಾಯೀದಾ ವಿರುದ್ಧ ಐಪಿಸಿ ಸೆಕ್ಷನ್​ 302 ಅಡಿ ಪ್ರಕರಣ ದಾಖಲಿಸಿದ್ದು, ಪ್ರಕರಣ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಬಾಡಿಗೆ ಹಣದ ವಿಚಾರವಾಗಿ ನಡೆದ ಜಗಳ.. ನಿವೃತ್ತ ಉಪ ತಹಶೀಲ್ದಾರ್ ಕೊಲೆಯಲ್ಲಿ ಅಂತ್ಯ

Published On - 7:09 pm, Mon, 8 February 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ