AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲ್ಗಪ್ಪಲ್ಲಿ ವಿಷ ಬೆರೆಸಿ ಗರ್ಭಿಣಿ ಗೆಳತಿಯ ಕೊಲೆಗೆ ಯತ್ನ, ಆಸ್ಪತ್ರೆಗೆಂದು ಕರೆದು ಕಾಡಿನಲ್ಲಿ ಬಿಟ್ಟು ಬಂದ ವ್ಯಕ್ತಿ

ಜಾರ್ಖಂಡ್‌ನಲ್ಲಿ ಅಮಾನವೀಯ ಘಟನೆ ನಡೆದಿದೆ. ಪ್ರಿಯಕರನೊಬ್ಬ ಗರ್ಭಿಣಿ ಗೆಳತಿಗೆ ಗೋಲ್ಗಪ್ಪದಲ್ಲಿ ವಿಷ ಬೆರೆಸಿ ಹತ್ಯೆಗೆ ಯತ್ನಿಸಿದ್ದಾನೆ. ಆರೋಗ್ಯ ಹದಗೆಟ್ಟಾಗ ಆಸ್ಪತ್ರೆಗೆ ಕರೆದೊಯ್ಯುವ ಬದಲು ಕಾಡಿನಲ್ಲಿ ಬಿಟ್ಟು ಬಂದಿದ್ದಾನೆ. ಪ್ರಜ್ಞೆ ಮರಳಿದ ನಂತರ ಕಾಡಿನಿಂದ ಹೊರಬಂದು ಕುಟುಂಬಕ್ಕೆ ವಿಷಯ ತಿಳಿಸಿದ ಮಹಿಳೆ, ಆರೋಪಿಯ ಬಂಧನಕ್ಕೆ ಕಾರಣಳಾಗಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಗೋಲ್ಗಪ್ಪಲ್ಲಿ ವಿಷ ಬೆರೆಸಿ ಗರ್ಭಿಣಿ ಗೆಳತಿಯ ಕೊಲೆಗೆ ಯತ್ನ, ಆಸ್ಪತ್ರೆಗೆಂದು ಕರೆದು ಕಾಡಿನಲ್ಲಿ ಬಿಟ್ಟು ಬಂದ ವ್ಯಕ್ತಿ
ಆರೋಪಿ ಕೇಸರಿ
ನಯನಾ ರಾಜೀವ್
|

Updated on: Feb 27, 2026 | 7:14 AM

Share

ಜಾರ್ಖಂಡ್, ಫೆಬ್ರವರಿ 27: ಆತನೇ ಎಲ್ಲಾ ಎಂದು ಪೋಷಕರನ್ನು ಬಿಟ್ಟು ಬಂದಿದ್ದ ಮಹಿಳೆಯನ್ನು ಆಕೆಯ ಪ್ರಿಯಕರನೇ ಹತ್ಯೆ(Murder)ಗೆ ಯತ್ನಿಸಿರುವ ಅಮಾನವೀಯ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಗೋಲ್ಗಪ್ಪದಲ್ಲಿ ವಿಷ ಬೆರೆಸಿ ಗರ್ಭಿಣಿ ಪ್ರೇಯಸಿಯನ್ನು ಕೊಲೆ ಮಾಡಲು ವ್ಯಕ್ತಿ ಯತ್ನಿಸಿರುವ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಮಹಿಳೆಗೆ ಆರೋಗ್ಯ ತೋರಾ ಹದಗೆಟ್ಟಿದ್ದು, ರಕ್ತವಾಂತಿ ಮಾಡಿಕೊಂಡಿದ್ದಾಳೆ. ತನ್ನ ಮನೆಗೆ ತಲುಪುವ ಮೊದಲು ರಾತ್ರಿಯಿಡೀ ಕಾಡಿನಲ್ಲಿ ಅಡಗಿಕೊಂಡಿದ್ದಳು. ಈ ಘಟನೆಯ ಬಗ್ಗೆ ತನ್ನ ಕುಟುಂಬಕ್ಕೆ ತಿಳಿಸುವಲ್ಲಿ ಆಕೆ ಕೊನೆಗೂ ಯಶಸ್ವಿಯಾಗಿದ್ದಾಳೆ.

26 ವರ್ಷದ ಸಾಕೇತ್ ಕೇಸರಿ ಮತ್ತು 23 ವರ್ಷದ ಮಹಿಳೆ ಆರು ವರ್ಷಗಳಿಂದ ಸಂಬಂಧದಲ್ಲಿದ್ದರು. ಒಂದು ವರ್ಷದ ಹಿಂದೆ ಅವರ ಮೊದಲ ಮಗು ಜನಿಸಿತ್ತು. ಗರ್ವಾ ಜಿಲ್ಲೆಯ ಸಮುದಾಯವು ಮಧ್ಯಪ್ರವೇಶಿಸಿ ಅವರನ್ನು ಬೇರೆ ಬೇರೆ ಮಾಡಿತ್ತು.

ಆದಾಗ್ಯೂ, ಕೇಸರಿ ಕೆಲವು ತಿಂಗಳ ನಂತರ ಆ ಮಹಿಳೆಯನ್ನು ಸಂಪರ್ಕಿಸಿದ್ದ. ಮತ್ತು ರಾಜಿ ಮಾಡಿಕೊಂಡಿದ್ದರು.ಮದುವೆ ಭರವಸೆ ನೀಡಿದ್ದ, ನಂತರ ಮತ್ತೆ ಆಕೆ ಗರ್ಭಿಣಿಯಾಗಿದ್ದಾಳೆ.ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ಫೆಬ್ರವರಿ 21 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ, ಕೇಶರಿ ಮಹಿಳೆಗೆ ಕರೆ ಮಾಡಿ ಏನಾದರೂ ತಿನ್ನಬೇಕು ಅನ್ನಸ್ತಿದೆಯಾ ಎಂದು ಕೇಳಿದ್ದಾನೆ. ಗೋಲ್ಗಪ್ಪ ತಿನ್ನುವ ಬಯಕೆಯನ್ನು ಆಕೆ ವ್ಯಕ್ತಪಡಿಸಿದ್ದಾಳೆ.

ಮತ್ತಷ್ಟು ಓದಿ: ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: ಕೊಲೆಗೆ ಸಾಥ್ ಕೊಟ್ಟು ಡ್ರಾಮಾ ಮಾಡಿದ್ದ ಹೆಂಡ್ತಿ, ಮಗ!

ಹಾಗೆಯೇ ಗೋಲ್ಗಪ್ಪ ತಿಂದ ಬಳಿಕ ಆಕೆಗೆ ವಾಂತಿ ಶುರುವಾಗಿತ್ತು, ರಕ್ತವಾಂತಿ ಕೂಡ ಮಾಡಿಕೊಂಡಿದ್ದಾಳೆ. ನಂತರ, ಸಂಜೆ 4 ಗಂಟೆಗೆ, ಆರೋಪಿ ತನ್ನ ಗೆಳತಿಯ ವೈದ್ಯರ ಬಳಿಗೆ ಕರೆದೊಯ್ಯಲು ಮುಂದಾದ.ಆದರೆ, ಅವಳನ್ನು ವೈದ್ಯರ ಬಳಿಗೆ ಕರೆದೊಯ್ಯುವ ಬದಲು, ಅವನು ಆಕೆಯನ್ನು ತನ್ನ ಬೈಕ್‌ನಲ್ಲಿ ಕಾಡಿಗೆ ಕರೆದೊಯ್ದಿದ್ದ.

ಆಕೆಯನ್ನು ಸುಮಾರು 100 ಮೀಟರ್ ಕಾಡಿನೊಳಗೆ ಕರೆದೊಯ್ದು ಹಲ್ಲೆ ಮಾಡಿ, ಕತ್ತು ಹಿಸುಕಲು ಪ್ರಯತ್ನಿಸಿದ್ದಾನೆ, ದರಿಂದಾಗಿ ಮಹಿಳೆಯ ಕಣ್ಣಿಗೆ ಗಂಭೀರ ಗಾಯವಾಯಿತು ಮತ್ತು ಅವಳು ಪ್ರಜ್ಞೆ ತಪ್ಪಿದ್ದಳು. ಪ್ರಜ್ಞೆ ಮರಳಿದ ನಂತರ, ಅವಳು ಕಾಡಿನ ಇನ್ನೊಂದು ತುದಿಗೆ ದಾಟಲು ಯಶಸ್ವಿಯಾದಳು ಮತ್ತು ಅಪಾರ ಭಯದಿಂದ ಇಡೀ ರಾತ್ರಿ ಅಲ್ಲಿ ಅಡಗಿಕೊಂಡಳು. ಮರುದಿನ ಬೆಳಗ್ಗೆ, ಅವಳು ಹೇಗೋ ತನ್ನ ಮನೆಗೆ ತಲುಪಿ ತನ್ನ ಕುಟುಂಬಕ್ಕೆ ನಡೆದ ಘಟನೆಯನ್ನು ವಿವರಿಸಿದ್ದಾಳೆ.

ಮಹಿಳೆಯ ದೂರಿನ ಆಧಾರದ ಮೇಲೆ ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಕೇಸರಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಪೊಲೀಸರು ಪ್ರಸ್ತುತ ಈ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK