AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲ್ಗಪ್ಪಲ್ಲಿ ವಿಷ ಬೆರೆಸಿ ಗರ್ಭಿಣಿ ಗೆಳತಿಯ ಕೊಲೆಗೆ ಯತ್ನ, ಆಸ್ಪತ್ರೆಗೆಂದು ಕರೆದು ಕಾಡಿನಲ್ಲಿ ಬಿಟ್ಟು ಬಂದ ವ್ಯಕ್ತಿ

ಜಾರ್ಖಂಡ್‌ನಲ್ಲಿ ಅಮಾನವೀಯ ಘಟನೆ ನಡೆದಿದೆ. ಪ್ರಿಯಕರನೊಬ್ಬ ಗರ್ಭಿಣಿ ಗೆಳತಿಗೆ ಗೋಲ್ಗಪ್ಪದಲ್ಲಿ ವಿಷ ಬೆರೆಸಿ ಹತ್ಯೆಗೆ ಯತ್ನಿಸಿದ್ದಾನೆ. ಆರೋಗ್ಯ ಹದಗೆಟ್ಟಾಗ ಆಸ್ಪತ್ರೆಗೆ ಕರೆದೊಯ್ಯುವ ಬದಲು ಕಾಡಿನಲ್ಲಿ ಬಿಟ್ಟು ಬಂದಿದ್ದಾನೆ. ಪ್ರಜ್ಞೆ ಮರಳಿದ ನಂತರ ಕಾಡಿನಿಂದ ಹೊರಬಂದು ಕುಟುಂಬಕ್ಕೆ ವಿಷಯ ತಿಳಿಸಿದ ಮಹಿಳೆ, ಆರೋಪಿಯ ಬಂಧನಕ್ಕೆ ಕಾರಣಳಾಗಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಗೋಲ್ಗಪ್ಪಲ್ಲಿ ವಿಷ ಬೆರೆಸಿ ಗರ್ಭಿಣಿ ಗೆಳತಿಯ ಕೊಲೆಗೆ ಯತ್ನ, ಆಸ್ಪತ್ರೆಗೆಂದು ಕರೆದು ಕಾಡಿನಲ್ಲಿ ಬಿಟ್ಟು ಬಂದ ವ್ಯಕ್ತಿ
ಆರೋಪಿ ಕೇಸರಿ
ನಯನಾ ರಾಜೀವ್
|

Updated on: Feb 27, 2026 | 7:14 AM

Share

ಜಾರ್ಖಂಡ್, ಫೆಬ್ರವರಿ 27: ಆತನೇ ಎಲ್ಲಾ ಎಂದು ಪೋಷಕರನ್ನು ಬಿಟ್ಟು ಬಂದಿದ್ದ ಮಹಿಳೆಯನ್ನು ಆಕೆಯ ಪ್ರಿಯಕರನೇ ಹತ್ಯೆ(Murder)ಗೆ ಯತ್ನಿಸಿರುವ ಅಮಾನವೀಯ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಗೋಲ್ಗಪ್ಪದಲ್ಲಿ ವಿಷ ಬೆರೆಸಿ ಗರ್ಭಿಣಿ ಪ್ರೇಯಸಿಯನ್ನು ಕೊಲೆ ಮಾಡಲು ವ್ಯಕ್ತಿ ಯತ್ನಿಸಿರುವ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಮಹಿಳೆಗೆ ಆರೋಗ್ಯ ತೋರಾ ಹದಗೆಟ್ಟಿದ್ದು, ರಕ್ತವಾಂತಿ ಮಾಡಿಕೊಂಡಿದ್ದಾಳೆ. ತನ್ನ ಮನೆಗೆ ತಲುಪುವ ಮೊದಲು ರಾತ್ರಿಯಿಡೀ ಕಾಡಿನಲ್ಲಿ ಅಡಗಿಕೊಂಡಿದ್ದಳು. ಈ ಘಟನೆಯ ಬಗ್ಗೆ ತನ್ನ ಕುಟುಂಬಕ್ಕೆ ತಿಳಿಸುವಲ್ಲಿ ಆಕೆ ಕೊನೆಗೂ ಯಶಸ್ವಿಯಾಗಿದ್ದಾಳೆ.

26 ವರ್ಷದ ಸಾಕೇತ್ ಕೇಸರಿ ಮತ್ತು 23 ವರ್ಷದ ಮಹಿಳೆ ಆರು ವರ್ಷಗಳಿಂದ ಸಂಬಂಧದಲ್ಲಿದ್ದರು. ಒಂದು ವರ್ಷದ ಹಿಂದೆ ಅವರ ಮೊದಲ ಮಗು ಜನಿಸಿತ್ತು. ಗರ್ವಾ ಜಿಲ್ಲೆಯ ಸಮುದಾಯವು ಮಧ್ಯಪ್ರವೇಶಿಸಿ ಅವರನ್ನು ಬೇರೆ ಬೇರೆ ಮಾಡಿತ್ತು.

ಆದಾಗ್ಯೂ, ಕೇಸರಿ ಕೆಲವು ತಿಂಗಳ ನಂತರ ಆ ಮಹಿಳೆಯನ್ನು ಸಂಪರ್ಕಿಸಿದ್ದ. ಮತ್ತು ರಾಜಿ ಮಾಡಿಕೊಂಡಿದ್ದರು.ಮದುವೆ ಭರವಸೆ ನೀಡಿದ್ದ, ನಂತರ ಮತ್ತೆ ಆಕೆ ಗರ್ಭಿಣಿಯಾಗಿದ್ದಾಳೆ.ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ಫೆಬ್ರವರಿ 21 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ, ಕೇಶರಿ ಮಹಿಳೆಗೆ ಕರೆ ಮಾಡಿ ಏನಾದರೂ ತಿನ್ನಬೇಕು ಅನ್ನಸ್ತಿದೆಯಾ ಎಂದು ಕೇಳಿದ್ದಾನೆ. ಗೋಲ್ಗಪ್ಪ ತಿನ್ನುವ ಬಯಕೆಯನ್ನು ಆಕೆ ವ್ಯಕ್ತಪಡಿಸಿದ್ದಾಳೆ.

ಮತ್ತಷ್ಟು ಓದಿ: ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: ಕೊಲೆಗೆ ಸಾಥ್ ಕೊಟ್ಟು ಡ್ರಾಮಾ ಮಾಡಿದ್ದ ಹೆಂಡ್ತಿ, ಮಗ!

ಹಾಗೆಯೇ ಗೋಲ್ಗಪ್ಪ ತಿಂದ ಬಳಿಕ ಆಕೆಗೆ ವಾಂತಿ ಶುರುವಾಗಿತ್ತು, ರಕ್ತವಾಂತಿ ಕೂಡ ಮಾಡಿಕೊಂಡಿದ್ದಾಳೆ. ನಂತರ, ಸಂಜೆ 4 ಗಂಟೆಗೆ, ಆರೋಪಿ ತನ್ನ ಗೆಳತಿಯ ವೈದ್ಯರ ಬಳಿಗೆ ಕರೆದೊಯ್ಯಲು ಮುಂದಾದ.ಆದರೆ, ಅವಳನ್ನು ವೈದ್ಯರ ಬಳಿಗೆ ಕರೆದೊಯ್ಯುವ ಬದಲು, ಅವನು ಆಕೆಯನ್ನು ತನ್ನ ಬೈಕ್‌ನಲ್ಲಿ ಕಾಡಿಗೆ ಕರೆದೊಯ್ದಿದ್ದ.

ಆಕೆಯನ್ನು ಸುಮಾರು 100 ಮೀಟರ್ ಕಾಡಿನೊಳಗೆ ಕರೆದೊಯ್ದು ಹಲ್ಲೆ ಮಾಡಿ, ಕತ್ತು ಹಿಸುಕಲು ಪ್ರಯತ್ನಿಸಿದ್ದಾನೆ, ದರಿಂದಾಗಿ ಮಹಿಳೆಯ ಕಣ್ಣಿಗೆ ಗಂಭೀರ ಗಾಯವಾಯಿತು ಮತ್ತು ಅವಳು ಪ್ರಜ್ಞೆ ತಪ್ಪಿದ್ದಳು. ಪ್ರಜ್ಞೆ ಮರಳಿದ ನಂತರ, ಅವಳು ಕಾಡಿನ ಇನ್ನೊಂದು ತುದಿಗೆ ದಾಟಲು ಯಶಸ್ವಿಯಾದಳು ಮತ್ತು ಅಪಾರ ಭಯದಿಂದ ಇಡೀ ರಾತ್ರಿ ಅಲ್ಲಿ ಅಡಗಿಕೊಂಡಳು. ಮರುದಿನ ಬೆಳಗ್ಗೆ, ಅವಳು ಹೇಗೋ ತನ್ನ ಮನೆಗೆ ತಲುಪಿ ತನ್ನ ಕುಟುಂಬಕ್ಕೆ ನಡೆದ ಘಟನೆಯನ್ನು ವಿವರಿಸಿದ್ದಾಳೆ.

ಮಹಿಳೆಯ ದೂರಿನ ಆಧಾರದ ಮೇಲೆ ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಕೇಸರಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಪೊಲೀಸರು ಪ್ರಸ್ತುತ ಈ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ತೆಲಂಗಾಳದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ತೆಲಂಗಾಳದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ಖರ್ಗೆ ಉಸ್ತುವಾರಿಯ ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ಖರ್ಗೆ ಉಸ್ತುವಾರಿಯ ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ