AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಮಧ್ಯಪ್ರದೇಶದ ಪ್ರವಾಹ ಪೀಡಿತ ಪ್ರದೇಶದಲ್ಲಿ ಗರ್ಭಿಣಿಯನ್ನು ಜೆಸಿಬಿಯಲ್ಲಿ ಕೂರಿಸಿ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದ ಜನರು

ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಲಾಗಿರುವ ಮಧ್ಯಪ್ರದೇಶದ 39 ಜಿಲ್ಲೆಗಳ ಪೈಕಿ ನೀಮುಚ್ ಜಿಲ್ಲೆಯ ರಾವತ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

Watch ಮಧ್ಯಪ್ರದೇಶದ ಪ್ರವಾಹ ಪೀಡಿತ ಪ್ರದೇಶದಲ್ಲಿ ಗರ್ಭಿಣಿಯನ್ನು ಜೆಸಿಬಿಯಲ್ಲಿ ಕೂರಿಸಿ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದ ಜನರು
ಜೆಸಿಬಿಯಲ್ಲಿ ಕರೆದೊಯ್ಯುತ್ತಿರುವುದು
TV9 Web
| Edited By: |

Updated on: Aug 25, 2022 | 3:27 PM

Share

ಭೋಪಾಲ್: ಮಧ್ಯಪ್ರದೇಶದ (Madhya Pradesh) ನೀಮಾಚ್ ಜಿಲ್ಲೆಯಲ್ಲಿ ಭಾರೀ ಪ್ರವಾಹದಿಂದಾಗಿ ಆಂಬ್ಯುಲೆನ್ಸ್ ಮನೆಗೆ ತಲುಪಲು ಸಾಧ್ಯವಾಗುತ್ತಿರಲಿಲ್ಲ. ಇಂಥಾ ಪರಿಸ್ಥಿತಿಯಲ್ಲಿ ಗರ್ಭಿಣಿಯೊಬ್ಬರನ್ನು ಜೆಸಿಬಿ ಯಂತ್ರದಲ್ಲಿ ಕೂರಿಸಿ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಸ್ಥಳೀಯ ಶಾಸಕರ ನೇತೃತ್ವದಲ್ಲಿ ಸ್ಥಳೀಯ ಆಡಳಿತ ಹಾಗೂ ಪೊಲೀಸರು ಜೆಸಿಬಿ ಯಂತ್ರದ ವ್ಯವಸ್ಥೆ ಮಾಡಿದ್ದರು. ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಲಾಗಿರುವ ಮಧ್ಯಪ್ರದೇಶದ 39 ಜಿಲ್ಲೆಗಳ ಪೈಕಿ ನೀಮುಚ್ ಜಿಲ್ಲೆಯ ರಾವತ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಉತ್ತರ ಪ್ರದೇಶದ ಗಡಿಗೆ ಹೊಂದಿಕೊಂಡಿರುವ ರೇವಾ ಜಿಲ್ಲೆಯಲ್ಲಿ ಇದೇ ರೀತಿಯ ಘಟನೆ ವರದಿಯಾಗಿದೆ. ಮಳೆಯಿಂದ ರಸ್ತೆ ಹಾಳಾಗಿದ್ದರಿಂದ ಆರೋಗ್ಯ ಕೇಂದ್ರ ತಲುಪಲು ತಡವಾದ ಕಾರಣ ಮಹಿಳೆ ಆಟೋ ರಿಕ್ಷಾದಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.

ಕಳೆದ ಎರಡು ದಿನಗಳಲ್ಲಿ 4,300 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. 2,100 ಜನರನ್ನು ಪ್ರವಾಹ ಪೀಡಿತ ಪ್ರದೇಶಗಳಿಂದ ರಕ್ಷಿಸಲಾಗಿದೆ.

ಭೋಪಾಲ್ ಸೇರಿದಂತೆ ಮಧ್ಯಪ್ರದೇಶದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ರಾಜಧಾನಿ ಮತ್ತು ಇತರ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ರಾಜಸ್ಥಾನದ ಗಡಿಯಲ್ಲಿರುವ ನೀಮುಚ್, ಮಂದಸೌರ್ ಮತ್ತು ರತ್ಲಾಮ್‌ನಲ್ಲಿ ಕಡಿಮೆ ತೀವ್ರತೆಯೊಂದಿಗೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹಿರಿಯ ಹವಾಮಾನಶಾಸ್ತ್ರಜ್ಞರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ