AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಮಧ್ಯಪ್ರದೇಶದ ಪ್ರವಾಹ ಪೀಡಿತ ಪ್ರದೇಶದಲ್ಲಿ ಗರ್ಭಿಣಿಯನ್ನು ಜೆಸಿಬಿಯಲ್ಲಿ ಕೂರಿಸಿ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದ ಜನರು

ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಲಾಗಿರುವ ಮಧ್ಯಪ್ರದೇಶದ 39 ಜಿಲ್ಲೆಗಳ ಪೈಕಿ ನೀಮುಚ್ ಜಿಲ್ಲೆಯ ರಾವತ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

Watch ಮಧ್ಯಪ್ರದೇಶದ ಪ್ರವಾಹ ಪೀಡಿತ ಪ್ರದೇಶದಲ್ಲಿ ಗರ್ಭಿಣಿಯನ್ನು ಜೆಸಿಬಿಯಲ್ಲಿ ಕೂರಿಸಿ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದ ಜನರು
ಜೆಸಿಬಿಯಲ್ಲಿ ಕರೆದೊಯ್ಯುತ್ತಿರುವುದು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 25, 2022 | 3:27 PM

Share

ಭೋಪಾಲ್: ಮಧ್ಯಪ್ರದೇಶದ (Madhya Pradesh) ನೀಮಾಚ್ ಜಿಲ್ಲೆಯಲ್ಲಿ ಭಾರೀ ಪ್ರವಾಹದಿಂದಾಗಿ ಆಂಬ್ಯುಲೆನ್ಸ್ ಮನೆಗೆ ತಲುಪಲು ಸಾಧ್ಯವಾಗುತ್ತಿರಲಿಲ್ಲ. ಇಂಥಾ ಪರಿಸ್ಥಿತಿಯಲ್ಲಿ ಗರ್ಭಿಣಿಯೊಬ್ಬರನ್ನು ಜೆಸಿಬಿ ಯಂತ್ರದಲ್ಲಿ ಕೂರಿಸಿ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಸ್ಥಳೀಯ ಶಾಸಕರ ನೇತೃತ್ವದಲ್ಲಿ ಸ್ಥಳೀಯ ಆಡಳಿತ ಹಾಗೂ ಪೊಲೀಸರು ಜೆಸಿಬಿ ಯಂತ್ರದ ವ್ಯವಸ್ಥೆ ಮಾಡಿದ್ದರು. ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಲಾಗಿರುವ ಮಧ್ಯಪ್ರದೇಶದ 39 ಜಿಲ್ಲೆಗಳ ಪೈಕಿ ನೀಮುಚ್ ಜಿಲ್ಲೆಯ ರಾವತ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಉತ್ತರ ಪ್ರದೇಶದ ಗಡಿಗೆ ಹೊಂದಿಕೊಂಡಿರುವ ರೇವಾ ಜಿಲ್ಲೆಯಲ್ಲಿ ಇದೇ ರೀತಿಯ ಘಟನೆ ವರದಿಯಾಗಿದೆ. ಮಳೆಯಿಂದ ರಸ್ತೆ ಹಾಳಾಗಿದ್ದರಿಂದ ಆರೋಗ್ಯ ಕೇಂದ್ರ ತಲುಪಲು ತಡವಾದ ಕಾರಣ ಮಹಿಳೆ ಆಟೋ ರಿಕ್ಷಾದಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.

ಕಳೆದ ಎರಡು ದಿನಗಳಲ್ಲಿ 4,300 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. 2,100 ಜನರನ್ನು ಪ್ರವಾಹ ಪೀಡಿತ ಪ್ರದೇಶಗಳಿಂದ ರಕ್ಷಿಸಲಾಗಿದೆ.

ಭೋಪಾಲ್ ಸೇರಿದಂತೆ ಮಧ್ಯಪ್ರದೇಶದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ರಾಜಧಾನಿ ಮತ್ತು ಇತರ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ರಾಜಸ್ಥಾನದ ಗಡಿಯಲ್ಲಿರುವ ನೀಮುಚ್, ಮಂದಸೌರ್ ಮತ್ತು ರತ್ಲಾಮ್‌ನಲ್ಲಿ ಕಡಿಮೆ ತೀವ್ರತೆಯೊಂದಿಗೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹಿರಿಯ ಹವಾಮಾನಶಾಸ್ತ್ರಜ್ಞರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ