AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ ಹಿಂಸೆಕೊಟ್ಟು ಟಾಯ್ಲೆಟ್ ಕ್ಲೀನರ್ ಕುಡಿಸಿದ ಗಂಡ: ಆಸ್ಪತ್ರೆಯಲ್ಲಿ ಮಹಿಳೆ ಸಾವು

ಪತಿಯಿಂದ ಹಲ್ಲೆಗೊಳಗಾಗಿ ಒತ್ತಾಯದಿಂದ ಟಾಯ್ಲೆಟ್ ಕ್ಲೀನರ್ ಕುಡಿದಿದ್ದ ಪತ್ನಿ ಮೃತಪಟ್ಟ ಘಟನೆ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಗರ್ಭಿಣಿ ಹಿಂಸೆಕೊಟ್ಟು ಟಾಯ್ಲೆಟ್ ಕ್ಲೀನರ್ ಕುಡಿಸಿದ ಗಂಡ: ಆಸ್ಪತ್ರೆಯಲ್ಲಿ ಮಹಿಳೆ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Apr 29, 2022 | 12:06 PM

Share

ಹೈದರಾಬಾದ್: ಪತಿಯಿಂದ ಹಲ್ಲೆಗೊಳಗಾಗಿ ಒತ್ತಾಯದಿಂದ ಟಾಯ್ಲೆಟ್ ಕ್ಲೀನರ್ ಕುಡಿದಿದ್ದ ಪತ್ನಿ ಮೃತಪಟ್ಟ ಘಟನೆ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಟಾಯ್ಲೆಟ್ ಕ್ಲೀನರ್ ಕುಡಿದು ತೀವ್ರ ಅಸ್ವಸ್ಥರಾಗಿದ್ದ ಮಹಿಳೆಯನ್ನು ಕುಟುಂಬದ ಇತರ ಸದಸ್ಯರು ತಕ್ಷಣ ಆಸ್ಪತ್ರೆಗೆ ಕರೆದೊಯ್ದರಾದರು. ವೈದ್ಯರು ಚಿಕಿತ್ಸೆ ನೀಡಲು ಯತ್ನಿಸಿದರಾರೂ ಮಹಿಳೆಯ ಜೀವ ಉಳಿಯಲಿಲ್ಲ. ಆರೋಪಿಯನ್ನು ತರುಣ್ ಎಂದು ಗುರುತಿಸಲಾಗಿದೆ. ಈತ ಪ್ರಸ್ತುತ, ತಲೆಮರೆಸಿಕೊಂಡಿದ್ದು, ಅವನನ್ನು ಪತ್ತೆಹಚ್ಚಲೆಂದು ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ. 4 ವರ್ಷಗಳ ಹಿಂದೆ ತರುಣ್ ಮತ್ತು ಕಲ್ಯಾಣಿ ಅವರ ಮದುವೆಯಾಗಿತ್ತು. ಆದರೆ ಅವರಿಬ್ಬರ ನಡುವೆ ಆಗಾಗ ಜಗಳಗಳು ಆಗುತ್ತಲೇ ಇದ್ದವು.

ಕಲ್ಯಾಣಿ ಗರ್ಭಿಣಿಯಾದ ನಂತರ ಅಕೆಯ ಮೇಲೆ ನಡೆಯುತ್ತಿದ್ದ ದೌರ್ಜನ್ಯ ಇನ್ನಷ್ಟು ಹೆಚ್ಚಾಯಿತು. ಕಲ್ಯಾಣಿ ನೋಡಲು ಚೆನ್ನಾಗಿಲ್ಲ ಎಂದು ದೂರುತ್ತಿದ್ದ ಗಂಡ, ಇನ್ನಷ್ಟು ವರದಕ್ಷಿಣೆ ತರಬೇಕು ಎಂದು ಒತ್ತಾಯಿಸುತ್ತಿದ್ದ. ಕಳೆದ ಮಂಗಳವಾರ ಇವರಿಬ್ಬರ ನಡುವೆ ಜಗಳ ಆರಂಭವಾದಾಗ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ಕಲ್ಯಾಣಿಗೆ ಒತ್ತಾಯಪೂರ್ವಕವಾಗಿ ಟಾಯ್ಲೆಟ್ ಕ್ಲೀನರ್ ಕುಡಿಸಿದ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಕಲ್ಯಾಣಿಯ ಪೋಷಕರು ಆಕೆಯನ್ನು ನಿಜಾಮಾಬಾದ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಚಿಕಿತ್ಸೆ ವೇಳೆಯಲ್ಲಿಯೇ ಕಲ್ಯಾಣಿ ಮೃತಪಟ್ಟರು.

ಪ್ರಕರಣಕ್ಕೆ ಸಂಬಂಧಿಸಿದಂತೆ ತರುಣ್ ವಿರುದ್ಧ ಕಲ್ಯಾಣಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ತರುಣ್ ವಿರುದ್ಧ ಐಪಿಸಿ 302, 304-ಬಿ ಮತ್ತು 498ರ ವಿಧಿಗಳ ಅನ್ವಯ ಪ್ರಕರಣ ದಾಖಲಾಗಿದೆ. ವರದಕ್ಷಿಣೆಗಾಗಿ ಪೀಡಿಸಿ ಮಗಳನ್ನು ಕೊಲೆ ಮಾಡಿದ್ದಾನೆ ಎಂದು ತರುಣ್ ವಿರುದ್ಧ ಕಲ್ಯಾಣಿಯ ಪೋಷಕರು ದೂರಿದ್ದಾರೆ.

ಇದನ್ನೂ ಓದಿ: ಕೆ.ಎಸ್​.ಈಶ್ವರಪ್ಪ ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿ, ನಮ್ಮ ರಾಜ್ಯದಲ್ಲಿ ಹೀಗೆಲ್ಲ ಆಗೋದಿಲ್ಲವೆಂದ ತೆಲಂಗಾಣ ಸಿಎಂ; ಹಿಜಾಬ್​ ವಿವಾದದ ಬಗ್ಗೆಯೂ ಟೀಕೆ

ಇದನ್ನೂ ಓದಿ: ತೆಲಂಗಾಣದಲ್ಲಿ ಎಲೆಕ್ಟ್ರಾನಿಕ್ ವಾಹನದ  ಬ್ಯಾಟರಿ ಸ್ಫೋಟಗೊಂಡು 80 ವರ್ಷದ ವೃದ್ಧ ಸಾವು, ಮೂವರಿಗೆ ಗಾಯ

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್