ಕೃಷಿ ಬಿಲ್ ವಿರೋಧಿಸಿ ರಾಜೀನಾಮೆ ನೀಡಿದ್ದ ಸಚಿವೆ ಕೌರ್ ರಾಜೀನಾಮೆ ಅಂಗೀಕಾರ

ದೆಹಲಿ: ಕೃಷಿ ಕಾಯಿದೆ ವಿರೋಧಿಸಿ ರೈತರ ಪರ ಪ್ರತಿಭಟನೆ ಮಾಡಿದ್ದ ಕೇಂದ್ರ ಸಚಿವೆ ಹರ್‌ಸಿಮ್ರತ್ ಕೌರ್ ರಾಜೀನಾಮೆ ಅಂಗೀಕಾರವಾಗಿದೆ. ಪ್ರಧಾನಿ ಸಲಹೆ ಮೇರೆಗೆ ರಾಷ್ಟ್ರಪತಿ ರಾಜೀನಾಮೆ ಅಂಗೀಕರಿಸಿದ್ದಾರೆ. ಆಹಾರ ಸಂಸ್ಕರಣೆ ಖಾತೆ ಸಚಿವೆಯಾಗಿದ್ದ ಹರ್‌ಸಿಮ್ರತ್ ಕೌರ್, ಶಿರೋಮಣಿ ಅಕಾಲಿದಳ ನಾಯಕಿ. ಪಂಜಾಬ್​ನಲ್ಲಿ ಕೇಂದ್ರದ ಕೃಷಿ ಕಾಯಿದೆ ವಿರೋಧಿಸಿ ರೈತರ ಪರ ಪ್ರತಿಭಟನೆ ನಡೆಸಿ. ತಾನು ರೈತರ ಪರ ನಿಲ್ಲುವುದಾಗಿ ಹೇಳಿದ್ದರು. ಕೃಷಿ ಬಿಲ್ ವಿರೋಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಸಲಹೆಯಂತೆ […]

ಕೃಷಿ ಬಿಲ್ ವಿರೋಧಿಸಿ ರಾಜೀನಾಮೆ ನೀಡಿದ್ದ ಸಚಿವೆ ಕೌರ್ ರಾಜೀನಾಮೆ ಅಂಗೀಕಾರ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Sep 18, 2020 | 10:03 AM

ದೆಹಲಿ: ಕೃಷಿ ಕಾಯಿದೆ ವಿರೋಧಿಸಿ ರೈತರ ಪರ ಪ್ರತಿಭಟನೆ ಮಾಡಿದ್ದ ಕೇಂದ್ರ ಸಚಿವೆ ಹರ್‌ಸಿಮ್ರತ್ ಕೌರ್ ರಾಜೀನಾಮೆ ಅಂಗೀಕಾರವಾಗಿದೆ. ಪ್ರಧಾನಿ ಸಲಹೆ ಮೇರೆಗೆ ರಾಷ್ಟ್ರಪತಿ ರಾಜೀನಾಮೆ ಅಂಗೀಕರಿಸಿದ್ದಾರೆ. ಆಹಾರ ಸಂಸ್ಕರಣೆ ಖಾತೆ ಸಚಿವೆಯಾಗಿದ್ದ ಹರ್‌ಸಿಮ್ರತ್ ಕೌರ್, ಶಿರೋಮಣಿ ಅಕಾಲಿದಳ ನಾಯಕಿ.

ಪಂಜಾಬ್​ನಲ್ಲಿ ಕೇಂದ್ರದ ಕೃಷಿ ಕಾಯಿದೆ ವಿರೋಧಿಸಿ ರೈತರ ಪರ ಪ್ರತಿಭಟನೆ ನಡೆಸಿ. ತಾನು ರೈತರ ಪರ ನಿಲ್ಲುವುದಾಗಿ ಹೇಳಿದ್ದರು. ಕೃಷಿ ಬಿಲ್ ವಿರೋಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಸಲಹೆಯಂತೆ ರಾಷ್ಟ್ರಪತಿ ರಾಜೀನಾಮೆ ಅಂಗೀಕರಿಸಿದ್ದಾರೆ. ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್‌ಗೆ ಹೆಚ್ಚುವರಿಯಾಗಿ ಆಹಾರ ಸಂಸ್ಕರಣೆ ಖಾತೆಯ ಜವಾಬ್ದಾರಿ ನೀಡಿದ್ದಾರೆ.

Published On - 7:57 am, Fri, 18 September 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us