Sign In

By signing in or creating an account, you agree with Associated Broadcasting Company's Terms & Conditions and Privacy Policy.

Draupadi Murmu Birthday: ರಾಷ್ಟ್ರಪತಿ ದ್ರೌಪದಿ ಮುರ್ಮು ಹುಟ್ಟುಹಬ್ಬ, ಒಡಿಶಾದ ಪುಟ್ಟ ಗ್ರಾಮದಿಂದ ರಾಷ್ಟ್ರಪತಿ ಭವನದವರೆಗಿನ ಪಯಣ

ದ್ರೌಪದಿ ಮುರ್ಮು(Draupadi Murmu) ಅವರು ಜುಲೈ 5, 2022 ರಂದು ಭಾರತದ 15ನೇ ರಾಷ್ಟ್ರಪತಿಯಾಗುವ ಮೂಲಕ ಇತಿಹಾಸವನ್ನು ಸೃಷ್ಟಿಸಿದರು. ಮುರ್ಮು ಅವರು ಭಾರತದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ವಹಿಸಿಕೊಂಡರು.

Draupadi Murmu Birthday: ರಾಷ್ಟ್ರಪತಿ ದ್ರೌಪದಿ ಮುರ್ಮು ಹುಟ್ಟುಹಬ್ಬ, ಒಡಿಶಾದ ಪುಟ್ಟ ಗ್ರಾಮದಿಂದ ರಾಷ್ಟ್ರಪತಿ ಭವನದವರೆಗಿನ ಪಯಣ
ದ್ರೌಪದಿ ಮುರ್ಮು
Follow us
ನಯನಾ ರಾಜೀವ್
|

Updated on: Jun 20, 2023 | 8:29 AM

ದ್ರೌಪದಿ ಮುರ್ಮು(Draupadi Murmu) ಅವರು ಜುಲೈ 5, 2022 ರಂದು ಭಾರತದ 15ನೇ ರಾಷ್ಟ್ರಪತಿಯಾಗುವ ಮೂಲಕ ಇತಿಹಾಸವನ್ನು ಸೃಷ್ಟಿಸಿದರು. ಮುರ್ಮು ಅವರು ಭಾರತದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ವಹಿಸಿಕೊಂಡರು. ರಾಷ್ಟ್ರಪತಿ ಮುರ್ಮು ಅವರು ಮೃದು ಹಾಗೂ ವಿನಮ್ರ ಸ್ವಭಾವಕ್ಕೆ ಹೆಸರುವಾಸಿಯಾಗಿದ್ದಾರೆ. ಅವರು ದೃಢ ಹಾಗೂ ಕಠಿಣ ಪರಿಶ್ರಮದಿಂದ ರಾಜಕೀಯಕ್ಕೆ ಕಾಲಿಟ್ಟರು. ಸಂತಾಲಿ ಗ್ರಾಮದಿಂದ ರಾಷ್ಟ್ರಪತಿ ಭವನಕ್ಕೆ ಅವರ ಪ್ರಯಾಣವು ಸುಲಭದ್ದಾಗಿರಲಿಲ್ಲ.

ರಾಜಕೀಯ ಪಯಣ ಮುರ್ಮು ಅವರು 2015-21ರವರೆಗೆ ಜಾರ್ಖಂಡ್​ನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು. 2000 ರಿಂದ 2009ರವರೆಗೆ ಅವರು ರಾಯರಂಗ್​ಪುರ ವಿಧಾನಸಭಾ ಕ್ಷೇತ್ರದಿಂದ ಒಡಿಶಾ ವಿಧಾನಸಭೆಗೆ ಸದಸ್ಯರಾಗಿ ಮತ್ತಿ 2000ರಿಂದ 2004ರವರೆಗೆ ಒಡಿಶಾ ಸರ್ಕಾರದ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಅವರು ರಾಜಕೀಯಕ್ಕೆ ಬರುವ ಮೊದಲು 1979ರಿಂದ 1983ರವರೆಗೆ ರಾಜ್ಯ ನೀರಾವರಿ ಮತ್ತು ವಿದ್ಯುತ್ ಇಲಾಖೆಯಲ್ಲಿ ಗುಮಾಸ್ತರಾಗಿ ಸೇವೆ ಸಲ್ಲಿಸಿದ್ದರು. ನಂತರ 1994 ರಿಂದ 1997ರವರೆಗೆ ರಾಯರಂಗಪುರದ ಅರಬಿಂದೋ ಸಮಗ್ರ ಶಿಕ್ಷಣ ಕೇಂದ್ರದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಿದ್ದರು.

ದ್ರೌಪದಿ ಮುರ್ಮು ಮಯೂರ್‌ಭಂಜ್ ಜಿಲ್ಲೆಯ ಉಪರಬೇಡ ಗ್ರಾಮದಲ್ಲಿ ಸಂತಾಲಿ ಬುಡಕಟ್ಟು ಕುಟುಂಬದಲ್ಲಿ ಜನಿಸಿದರು. ಆಕೆಯ ತಂದೆ ಮತ್ತು ಅಜ್ಜ ಇಬ್ಬರೂ ಗ್ರಾಮದ ಮುಖ್ಯಸ್ಥರಾಗಿದ್ದರು. ಅವಳು ಬ್ಯಾಂಕರ್ ಶ್ಯಾಮ್ ಚರಣ್ ಮುರ್ಮು ಅವರನ್ನು ವಿವಾಹವಾದರು, ಅವರು 2014 ರಲ್ಲಿ ನಿಧನರಾದರು. ಅವರ ಇಬ್ಬರು ಪುತ್ರರೂ ಕೂಡ ಮೃತಪಟ್ಟಿದ್ದಾರೆ. ಮಗಳಿಗೆ ಉತ್ತಮ ಶಿಕ್ಷಣವನ್ನು ಒದಗಿಸುವಲ್ಲಿ ಯಶಸ್ವಿಯಾದರು.

ಅಧಿಕಾರದಿಂದ ಹಿಡಿದು ದೇಶದ ಕಟ್ಟಕಡೆಯ ಜನ ಸಾಮಾನ್ಯನಿಗೆ ಭಾವನೆ, ಸೌಹಾರ್ದತೆ ಮತ್ತು ಪ್ರೀತಿಯ ಸೇತುವೆ ನಿರ್ಮಾಣವಾದಾಗ ಮಾತ್ರ ಪ್ರಜಾಪ್ರಭುತ್ವದ ವ್ಯಾಖ್ಯಾನ ಅರ್ಥಪೂರ್ಣವಾಗುತ್ತದೆ. ದ್ರೌಪದಿ ಮುರ್ಮು ಇದುವರೆಗಿನ ರಾಷ್ಟ್ರಪತಿಗಳಿಗಿಂತ ಭಿನ್ನ, ಇದನ್ನು ಮೊದಲು ಅರಿತುಕೊಂಡದ್ದು ರಾಷ್ಟ್ರಪತಿ ಭವನದ ಸಿಬ್ಬಂದಿ .

ಮುರ್ಮು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ದೀಪಾವಳಿ ಸಂದರ್ಭ. ರಾಷ್ಟ್ರಪತಿ ಭವನದ ಅಡುಗೆ ಮನೆಯಲ್ಲಿ ಸಿಹಿತಿಂಡಿಗಳು ತಯಾರಾಗುತ್ತಿದ್ದವು. ದೀಪಾವಳಿಯ ಒಂದು ದಿನ ಮುಂಚಿತವಾಗಿ, ಅಧ್ಯಕ್ಷರು ಅಡುಗೆಮನೆಗೆ ಸಿದ್ಧತೆಗಳನ್ನು ಪರಿಶೀಲಿಸಲು ಹೋಗುತ್ತಾರೆ.

ಎಲ್ಲಾ ಹಿರಿಯ ಅಧಿಕಾರಿಗಳಿಗೆ ಈ ಸಿಹಿತಿಂಡಿಗಳನ್ನು ಉಡುಗೊರೆಯಾಗಿ ನೀಡಲಾಗುತ್ತದೆ. ಆಗ ಅಧಿಕಾರಿಗಳಿಗೆ ಮಾತ್ರವೇ ನೀಡಬೇಕೆ ಎಂದು ಪ್ರಶ್ನೆ ಮಾಡುತ್ತಾರೆ. ಅದು ಸಮಾನತೆಯ ಪ್ರಜ್ಞೆಯಾಗಿತ್ತು. ಕೆಲವೇ ಸಮಯದಲ್ಲಿ, ರಾಷ್ಟ್ರಪತಿ ಭವನದ ಖಾಸಗಿ ಕಾರ್ಯದರ್ಶಿಯಿಂದ ಹಿಡಿದು ತೋಟದ ಮಾಲಿ, ಸ್ವಚ್ಛತಾ ಸಿಬ್ಬಂದಿಯವರೆಗೆ ಪ್ರತಿಯೊಬ್ಬ ಉದ್ಯೋಗಿ ಸಿಹಿ ಹಂಚಬೇಕು ಎಂದು ಆದೇಶಿಸುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ