AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Draupadi Murmu: ರಾಣಿ ಎಲಿಜಬೆತ್ II ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಲಂಡನ್​ಗೆ ತೆರಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ರಾಣಿ ಎಲಿಜಬೆತ್ II ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಮತ್ತು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಲಂಡನ್​ಗೆ ತೆರಳಿದ್ದಾರೆ.

Draupadi Murmu: ರಾಣಿ ಎಲಿಜಬೆತ್ II ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಲಂಡನ್​ಗೆ ತೆರಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು
President Draupadi Murmu
TV9 Web
| Edited By: |

Updated on:Sep 17, 2022 | 5:52 PM

Share

ರಾಣಿ ಎಲಿಜಬೆತ್ II ರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಮತ್ತು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲು ಅಧ್ಯಕ್ಷ ದ್ರೌಪದಿ ಮುರ್ಮು ಶನಿವಾರ ಲಂಡನ್‌ಗೆ ತೆರಳಿದರು. ಸೆಪ್ಟೆಂಬರ್ 8ರಂದು 96ನೇ ವಯಸ್ಸಿನಲ್ಲಿ ನಿಧನರಾದ ರಾಣಿ ಎಲಿಜಬೆತ್ II, ಸೆಪ್ಟೆಂಬರ್ 19 ರಂದು ವೆಸ್ಟ್‌ಮಿನ್‌ಸ್ಟರ್ ಅಬ್ಬೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಣಿ ಎಲಿಜಬೆತ್ II ಅವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಮತ್ತು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲು ಯುನೈಟೆಡ್ ಕಿಂಗ್‌ಡಂನ ಲಂಡನ್‌ಗೆ ತೆರಳಿದ್ದಾರೆ ಎಂದು ರಾಷ್ಟ್ರಪತಿ ಭವನವು ಮುರ್ಮು ಅವರ ಚಿತ್ರದೊಂದಿಗೆ ಟ್ವೀಟ್ ಮಾಡಿದೆ.

ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ದೇಶದ ಸಂತಾಪವನ್ನು ತಿಳಿಸಲು ಸೆಪ್ಟೆಂಬರ್ 12 ರಂದು ಇಲ್ಲಿನ ಬ್ರಿಟಿಷ್ ಹೈಕಮಿಷನ್‌ಗೆ ಭೇಟಿ ನೀಡಿದ್ದರು. ಭಾರತ ಕೂಡ ಭಾನುವಾರ ರಾಷ್ಟ್ರೀಯ ಶೋಕ ದಿನವನ್ನು ಆಚರಿಸಿತ್ತು.

ರಾಣಿ ಎಲಿಜಬೆತ್ II ಅವರು 70 ವರ್ಷಗಳ ಆಳ್ವಿಕೆಯಲ್ಲಿ, ಭಾರತ-ಯುಕೆ ಸಂಬಂಧಗಳು ವಿಕಸನಗೊಂಡಿವೆ, ಪ್ರವರ್ಧಮಾನಕ್ಕೆ ಬಂದಿವೆ ಮತ್ತು ಅಗಾಧವಾಗಿ ಬಲಗೊಂಡಿವೆ.

ಕಾಮನ್‌ವೆಲ್ತ್‌ನ ಮುಖ್ಯಸ್ಥರಾಗಿ ವಿಶ್ವದಾದ್ಯಂತ ಲಕ್ಷಾಂತರ ಜನರ ಕಲ್ಯಾಣದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹೇಳಿಕೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿ ನೀಡಲಾಗುವುದು

Published On - 4:39 pm, Sat, 17 September 22

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ