AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವೆ ಸ್ಮೃತಿ ಇರಾನಿಯಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂದರ್ಶನ

Draupadi Murmu Interview: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ತಮ್ಮ ಪ್ರಯಾಣವನ್ನು ಹಂಚಿಕೊಂಡಿದ್ದಾರೆ. ಮಂಗಳವಾರ ಪ್ರಸಾರವಾಗಲಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಸಂದರ್ಶಿಸಿದ್ದಾರೆ. ಸಂದರ್ಶನದಲ್ಲಿ, ಮುರ್ಮು ಅವರು ತಮ್ಮ ಬಾಲ್ಯದ ನೆನಪುಗಳು ಮತ್ತು ಸಾರ್ವಜನಿಕ ಜೀವನದ ಕಥೆಗಳ ಮೇಲೆ ಬೆಳಕು ಚೆಲ್ಲಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿಯಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂದರ್ಶನ
ನಯನಾ ರಾಜೀವ್
|

Updated on:Feb 14, 2024 | 11:29 AM

Share

ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ರಾಷ್ಟ್ರಪತಿ ದ್ರೌಪದಿ ಮುರ್ಮು(Draupadi Murmu) ಅವರ ಸಂದರ್ಶನ ಮಾಡಿದ್ದಾರೆ. ರಾಷ್ಟ್ರಪತಿಯನ್ನು ಕೇಂದ್ರ ಸಚಿವೆಯೊಬ್ಬರು ಸಂದರ್ಶನ ಮಾಡಿದ್ದು ಇದೇ ಮೊದಲು. ರಾಷ್ಟ್ರಪತಿ ಮುರ್ಮು ಅವರು ಒಡಿಶಾದ ರಾಯ್​ರಂಗಪುರದಿಂದ ರಾಷ್ಟ್ರಪತಿ ಭವನಕ್ಕೆ ಬರುವಾಗಿನ ಅವರ ಹಾದಿ ಹೇಗಿತ್ತು, ಎಷ್ಟು ಕಷ್ಟಗಳು, ಸವಾಲುಗಳನ್ನು ಎದುರಿಸಿದ್ದಾರೆ ಎಂಬುದನ್ನು ಸ್ಮೃತಿ ಇರಾನಿಯವರ ಬಳಿ ಹಂಚಿಕೊಂಡಿದ್ದಾರೆ.

ಇದು ಇಂದು ಬೆಳಗ್ಗೆ 8 ಗಂಟೆಗೆ ಆಕಾಶವಾಣಿಯಲ್ಲಿ ಪ್ರಸಾರವಾಯಿತು ಡಿಡಿ-1ರಲ್ಲಿ ಸಂಜೆ 4 ಗಂಟೆಗೆ ಪ್ರಸಾರವಾಗುತ್ತದೆ. ಪ್ರಪ್ರಥಮ ಬಾರಿಗೆ ನೀವು ರಾಷ್ಟ್ರಪತಿಯ ಜೀವನ ಪಯಣದ ಅಸಾಧಾರಣ ಮಜಲುಗಳ ಬಗ್ಗೆ ತಿಳಿದುಕೊಳ್ಳಬಹುದು ಎಂದು ಸ್ಮೃತಿ ಇರಾನಿ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ದ್ರೌಪದಿ ಮುರ್ಮು ಅವರ ಜೀವನ ಮಹಿಳಾ ಶಕ್ತಿಯ ಪ್ರತೀಕ, ಸಣ್ಣ ಹಳ್ಳಿಯಿಂದ ಬಂದು ದೇಶದ ಅತ್ಯುನ್ನತ ಸ್ಥಾನಕ್ಕೆ ಏರಿದ ಅವರ ಅಸಾಧಾರಣ ಕಥೆ ಅನೇಕರಿಗೆ ಸ್ಫೂರ್ತಿ ನೀಡುತ್ತದೆ. ಸ್ಮೃತಿ ಇರಾನಿ ಯೂಟ್ಯೂಬ್ ಲಿಂಕ್​ನ್ನು ಕೂಡ ನೀಡಿದ್ದಾರೆ. ನೀವು ಅಲ್ಲಿ ಸಂದರ್ಶನ ವೀಕ್ಷಿಸಬಹುದು.

ಯೂಟ್ಯೂಬ್ ಲಿಂಕ್ ಇಲ್ಲಿದೆ

‘ನಯೀ ಸೋಚ್, ನಯೀ ಕಹಾನಿ ಎ ರೇಡಿಯೋ ಜರ್ನಿ ವಿತ್ ಸ್ಮೃತಿ ಇರಾನಿ’ ಎಂಬ ಶೀರ್ಷಿಕೆಯಲ್ಲಿ ಪ್ರಸಾರಗೊಂಡಿದೆ. ಸಂದರ್ಶನದಲ್ಲಿ ಮುರ್ಮು ಅವರು ತಮ್ಮ ಶೈಕ್ಷಣಿಕ, ವೃತ್ತಿಪರ ಮತ್ತು ರಾಜಕೀಯ ಪ್ರಯಾಣದ ಬಗ್ಗೆ ಬೆಳಕು ಚೆಲ್ಲಿದರು ಮತ್ತು ರಾಷ್ಟ್ರಪತಿಯಾಗಿ ಸಾರ್ವಜನಿಕರೊಂದಿಗೆ ಸಂವಾದದ ಅನುಭವಗಳನ್ನು ಹಂಚಿಕೊಂಡರು. ಅವರು ದೆಹಲಿ ಮೆಟ್ರೋದಲ್ಲಿ ತಮ್ಮ ಇತ್ತೀಚಿನ ಪ್ರಯಾಣದ ಬಗ್ಗೆ ಮಾತನಾಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:51 am, Wed, 14 February 24

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ