AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tribal Pride Day: ಜಾರ್ಖಂಡ್​ನ ಬಿರ್ಸಾ ಮುಂಡಾ ಗ್ರಾಮಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ದೆಹಲಿಯಿಂದ ರಾಷ್ಟ್ರಪತಿಗಳು ವಿಶೇಷ ವಾಯುಪಡೆಯ ವಿಮಾನದ ಮೂಲಕ ರಾಂಚಿ ವಿಮಾನ ನಿಲ್ದಾಣಕ್ಕೆ ತಲುಪಲಿದ್ದು, ಬಳಿಕ ಸೇನಾ ಹೆಲಿಕಾಪ್ಟರ್ ಮೂಲಕ ಉಲಿಹತುಗೆ ತೆರಳಲಿದ್ದಾರೆ.

Tribal Pride Day: ಜಾರ್ಖಂಡ್​ನ ಬಿರ್ಸಾ ಮುಂಡಾ ಗ್ರಾಮಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ
ರಾಷ್ಟ್ರಪತಿ ದ್ರೌಪದಿ ಮುರ್ಮು
TV9 Web
| Updated By: ಸುಷ್ಮಾ ಚಕ್ರೆ|

Updated on: Nov 15, 2022 | 9:06 AM

Share

ನವದೆಹಲಿ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಇಂದು (ನ. 15) ಭಗವಾನ್ ಬಿರ್ಸಾ ಮುಂಡಾ (Bhagwan Birsa Munda) ಅವರ ಜನ್ಮಸ್ಥಳವಾದ ಜಾರ್ಖಂಡ್‌ನ ಉಲಿಹತು ಗ್ರಾಮಕ್ಕೆ ಭೇಟಿ ನೀಡಲಿದ್ದು, ಭಗವಾನ್ ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಗೌರವ ಸಲ್ಲಿಸಲಿದ್ದಾರೆ. ಇಂದು ಅವರು ಮಧ್ಯಪ್ರದೇಶದ ಶಹದೋಲ್‌ನಲ್ಲಿ ಜಂಜಾಟಿಯ ಗೌರವ್ ದಿವಸ್ ಸಂದರ್ಭದಲ್ಲಿ ಮಧ್ಯಪ್ರದೇಶ ಸರ್ಕಾರವು ಆಯೋಜಿಸುತ್ತಿರುವ ಜನಜಾತಿಯ ಸಮಾಗಮ್ ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ರಾಷ್ಟ್ರಪತಿಯಾದ ನಂತರ ದ್ರೌಪದಿ ಮುರ್ಮು ಅವರು ಜಾರ್ಖಂಡ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ದೆಹಲಿಯಿಂದ ರಾಷ್ಟ್ರಪತಿಗಳು ವಿಶೇಷ ವಾಯುಪಡೆಯ ವಿಮಾನದ ಮೂಲಕ ರಾಂಚಿ ವಿಮಾನ ನಿಲ್ದಾಣಕ್ಕೆ ತಲುಪಲಿದ್ದು, ಬಳಿಕ ಸೇನಾ ಹೆಲಿಕಾಪ್ಟರ್ ಮೂಲಕ ಉಲಿಹತುಗೆ ತೆರಳಲಿದ್ದಾರೆ. ಅಲ್ಲಿ ಅವರು ಉಲಿಹಾತುದಲ್ಲಿರುವ ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಮಾಲೆ ಹಾಕಿ ಅವರ ವಂಶಸ್ಥರನ್ನು ಭೇಟಿಯಾಗುತ್ತಾರೆ. ರಾಷ್ಟ್ರಪತಿಯವರು ಉಲಿಹತುವಿನಿಂದ ಬಿರ್ಸಾ ಮುಂಡಾ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 9:40ಕ್ಕೆ ಹಿಂದಿರುಗಿ, 10:15ಕ್ಕೆ ಜಬಲ್‌ಪುರಕ್ಕೆ ತೆರಳಲಿದ್ದಾರೆ. ರಾಷ್ಟ್ರಪತಿ ಆಗಮನಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.

ಈ ಹಿಂದೆ ಜಾರ್ಖಂಡ್ ರಾಜ್ಯ ಸಂಸ್ಥಾಪನಾ ದಿನಾಚರಣೆಯಂದು ಆಯೋಜಿಸಲಾಗಿದ್ದ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಪತಿಗಳೂ ಭಾಗವಹಿಸಬೇಕಿತ್ತು. ಆದರೆ ಆ ಸಮಯಕ್ಕೆ ಸರಿಯಾಗಿ ಅವರ ಕಾರ್ಯಕ್ರಮವನ್ನು ಬದಲಾಯಿಸಲಾಗಿತ್ತು.

ಇದನ್ನೂ ಓದಿ: Droupadi Murmu: ಸಿಕ್ಕಿಂನಲ್ಲಿ ಕಲಾವಿದರೊಂದಿಗೆ ಸಾಂಪ್ರದಾಯಿಕ ನೃತ್ಯ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರನ್ನು ಗೌರವಿಸಲು ನವೆಂಬರ್ 15 ಅನ್ನು ಜಂಜಾಟಿಯ ಗೌರವ್ ದಿವಸ್ ಅಥವಾ ಬುಡಕಟ್ಟು ಹೆಮ್ಮೆಯ ದಿನ ಎಂದು ಆಚರಿಸಲಾಗುತ್ತದೆ. 1875ರಲ್ಲಿ ಜನಿಸಿದ ಬಿರ್ಸಾ ಮುಂಡಾ ಅವರು ಇಂದು ಜಾರ್ಖಂಡ್‌ನ ಭಾಗವಾಗಿರುವ ಬಂಗಾಳ ಪ್ರೆಸಿಡೆನ್ಸಿಯ ಪ್ರದೇಶಗಳಲ್ಲಿ ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆ ಮತ್ತು ಮತಾಂತರ ಚಟುವಟಿಕೆಗಳ ವಿರುದ್ಧ ಬಂಡಾಯ ಚಳವಳಿಯನ್ನು ನಡೆಸಿದರು. ಖುಂಟಿ, ತಮರ್, ಸರ್ವದಾ ಮತ್ತು ಬಂದಗಾಂವ್‌ನ ಮುಂಡಾ ಬೆಲ್ಟ್‌ನಲ್ಲಿ ಅವರ ಬಂಡಾಯವು ಸಾಂಪ್ರದಾಯಿಕ ಬುಡಕಟ್ಟು ಸಂಸ್ಕೃತಿಯ ಪುನರುಜ್ಜೀವನಕ್ಕೆ ಸಹಾಯ ಮಾಡಿತು.

ಬಿರ್ಸಾ ಮುಂಡಾ ರಾಂಚಿ ಜೈಲಿನಲ್ಲಿ ಬ್ರಿಟಿಷ್ ವಶದಲ್ಲಿದ್ದಾಗ ತಮ್ಮ 25ನೇ ವಯಸ್ಸಿನಲ್ಲಿ ನಿಧನರಾದರು. ಆದರೂ, ಬಿರ್ಸಾ ಮುಂಡಾ ಅವರ ಕೊಡುಗೆಯು ಅವರಿಗೆ ‘ಭಗವಾನ್’ ಅಥವಾ ಲಾರ್ಡ್ ಎಂಬ ಬಿರುದನ್ನು ತಂದುಕೊಟ್ಟಿತು.

ಇದನ್ನೂ ಓದಿ: President Draupadi Murmu: ಮಕ್ಕಳ ದಿನಾಚರಣೆಯಂದು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಇಂದು ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೋಪಾಲ್‌ನ ರಾಜಭವನದಲ್ಲಿ ಅವರ ಗೌರವಾರ್ಥವಾಗಿ ಆಯೋಜಿಸಲಾಗುವ ನಾಗರಿಕ ಸ್ವಾಗತದಲ್ಲಿ ಭಾಗವಹಿಸುತ್ತಾರೆ. ಬಳಿಕ ಕೇಂದ್ರ ರಕ್ಷಣಾ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯಗಳ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ನವೆಂಬರ್ 16ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ದೆಹಲಿಗೆ ಹಿಂದಿರುಗುವ ಮೊದಲು ಭೋಪಾಲ್‌ನಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?