AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂಕೋರ್ಟ್​ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರಾ ಕರ್ನಾಟಕ ಮೂಲದ ನ್ಯಾ. ಬಿ.ವಿ.ನಾಗರತ್ನ?

ಕರ್ನಾಟಕ ಮೂಲದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು 2027ರಲ್ಲಿ ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳಾಗುವ ಸಾಧ್ಯತೆ ಇದೆ. ಹಾಗಾದಲ್ಲಿ ಅವರು ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಗಳಾಗಲಿದ್ದಾರೆ.

ಸುಪ್ರೀಂಕೋರ್ಟ್​ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರಾ ಕರ್ನಾಟಕ ಮೂಲದ ನ್ಯಾ. ಬಿ.ವಿ.ನಾಗರತ್ನ?
ನ್ಯಾಯಮೂರ್ತಿ ಬಿ.ವಿ.ನಾಗರತ್ನ
TV9 Web
| Edited By: |

Updated on:Aug 26, 2021 | 2:31 PM

Share

ನವದೆಹಲಿ: ಮೂವರು ಮಹಿಳೆಯರನ್ನು ಒಳಗೊಂಡಂತೆ ಒಂಬತ್ತು ಹೊಸ ನ್ಯಾಯಾಧೀಶರನ್ನು ಗುರುವಾರ ಸುಪ್ರೀಂ ಕೋರ್ಟ್‌ಗೆ ನೇಮಕ ಮಾಡಲಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನೇಮಕಾತಿ ಪತ್ರಕ್ಕೆ ಸಹಿ ಹಾಕಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಶೀಘ್ರವೇ ಅಧಿಕೃತ ಅಧಿಸೂಚನೆ ಹೊರಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಈ ಮೂಲಕ 2027ರಲ್ಲಿ ಕರ್ನಾಟಕ ಮೂಲಕ ನ್ಯಾ.ಬಿ.ವಿ.ನಾಗರತ್ನ ಅವರು 2027ರಲ್ಲಿ ಸುಪ್ರೀಂಕೋರ್ಟ್​ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗುವ ಸಾಧ್ಯತೆ ದಟ್ಟವಾಗಿದೆ.

ನ್ಯಾ.ಬಿ.ವಿ ನಾಗರತ್ನ ಸೇರಿದಂತೆ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ, ನ್ಯಾಯಮೂರ್ತಿ ಹೇಮಾ ಕೊಹ್ಲಿ, ನ್ಯಾಯಮೂರ್ತಿ ಸಿ ಟಿ ರವಿಕುಮಾರ್, ನ್ಯಾಯಮೂರ್ತಿ ಎಂ ಎಂ ಸುಂದ್ರೇಶ್ ಮತ್ತು ಹಿರಿಯ ವಕೀಲ ಹಾಗೂ ಮಾಜಿ ಸಾಲಿಸಿರ್ ಜನರಲ್ ಪಿವಿ ನರಸಿಂಹ ಅವರನ್ನು ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾಗಿದೆ. ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ್ ಓಕಾ, ವಿಕ್ರಮ್ ನಾಥ್, ಜಿತೇಂದ್ರ ಕುಮಾರ್ ಮಹೇಶ್ವರು ಅವರೂ ಕೂಡಾ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ.

ಇದೇ ಮೊದಲ ಬಾರಿಗೆ ನಿರ್ದೇಶಿಸಲಾಗಿದ್ದ ಎಲ್ಲಾ ಒಂಬತ್ತು ಜನರನ್ನು ಸರ್ಕಾರ ಆಯ್ಕೆ ಮಾಡಿದೆ. ಆಯ್ಕೆಯಾಗಿರುವ ನ್ಯಾಯಮೂರ್ತಿಗಳು ಆಗಸ್ಟ್ 31ರಂದು ಪ್ರಮಾಣ ಸ್ವೀಕರಿಸುವ ಸಾಧ್ಯತೆ ಇದೆ. ಸುಪ್ರೀಂಕೋರ್ಟ್​ನಲ್ಲಿ ಒಟ್ಟು 34 ನ್ಯಾಯಮೂರ್ತಿಯ ಸ್ಥಾನವಿದ್ದು, ಒಂಬತ್ತು ಜನ ಹೊಸ ನ್ಯಾಯಮೂರ್ತಿಗಳನ್ನು ನಿರ್ದೇಶಿಸಿರುವುದರಿಂದ ಕೇವಲ ಒಂದು ಸ್ಥಾನ ಖಾಲಿ ಉಳಿದಿದೆ. ಈ ಬಾರಿ ಆಯ್ಕೆ ಮಾಡಿರುವ ಒಂಬತ್ತು ಜನ ನ್ಯಾಯಮೂರ್ತಿಗಳಲ್ಲಿ ಮೂವರು ಮಹಿಳಾ ನ್ಯಾಯಮೂರ್ತಿಗಳಿರುವುದು ವಿಶೇಷ.

ಇದನ್ನೂ ಓದಿ:

ಬೆಂಗಳೂರಿನಲ್ಲಿ ಮೂರನೇ ಅಲೆ ಆತಂಕದ ಹಿನ್ನಲೆ ಕಡ್ಡಾಯ ವ್ಯಾಕ್ಸಿನ್ ಗೆ ಬಿಬಿಎಂಪಿ ಆದೇಶ

(President Gives nod to appointment of justice BV Nagarathna)

Published On - 12:37 pm, Thu, 26 August 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ