AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶೋಕ ಲವಾಸ ರಾಜಿನಾಮೆ ಅಂಗೀಕರಿಸಿದ ರಾಷ್ಟ್ರಪತಿ ಕೋವಿಂದ್

ಚುನಾವಣಾಧಿಕಾರಿ ಹುದ್ದೆಗೆ ಅಶೋಕ ಲವಾಸ ನೀಡಿದ ರಾಜೀನಾಮೆಯನ್ನು ರಾಷ್ಟ್ರಪತಿ ರಾಮ ನಾಥ್ ಕೊವಿಂದ್ ಅವರು ಅಂಗೀಕರಿಸಿದ್ದಾರೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲು ಈ ಕುರಿತು ಒಂದು ಅಧಿಸೂಚನೆಯನ್ನು ಹೊರಡಿಸಿದೆ. ಲವಾಸ ಅವರು ಮಂಗಳವಾರದಂದು ರಾಷ್ಟ್ರಪತಿ ಭವನಕ್ಕೆ ತಮ್ಮ ರಾಜಿನಾಮೆ ಪತ್ರವನ್ನು ಕಳಿಸಿದ್ದರು. ಲವಾಸ, ಇಷ್ಟರಲ್ಲೇ ಮುಖ್ಯ ಚುನಾವಣಾಧಿಕಾರಿ ಹುದ್ದೆಗೆ ಪದೋನ್ನತಿ ಹೊಂದುವವರಿದ್ದರು. ಆದರೆ, ಕೆಲವು ವಾರಗಳ ಹಿಂದೆ ಅವರಿಗೆ ಫಿಲಿಪೈನ್ಸ್​ನಲ್ಲಿ ನೆಲೆ ಹೊಂದಿರುವ ಏಷ್ಯನ್ ಅಭಿವೃದ್ಧಿ ಬ್ಯಾಂಕಿನ (ಎಡಿಬಿ) ಉಪಾಧ್ಯಕ್ಷ ಸ್ಥಾನವನ್ನು ಆಫರ್ ಮಾಡಿದಾಗ ಅವರು […]

ಅಶೋಕ ಲವಾಸ ರಾಜಿನಾಮೆ ಅಂಗೀಕರಿಸಿದ ರಾಷ್ಟ್ರಪತಿ ಕೋವಿಂದ್
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 19, 2020 | 3:02 PM

Share

ಚುನಾವಣಾಧಿಕಾರಿ ಹುದ್ದೆಗೆ ಅಶೋಕ ಲವಾಸ ನೀಡಿದ ರಾಜೀನಾಮೆಯನ್ನು ರಾಷ್ಟ್ರಪತಿ ರಾಮ ನಾಥ್ ಕೊವಿಂದ್ ಅವರು ಅಂಗೀಕರಿಸಿದ್ದಾರೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲು ಈ ಕುರಿತು ಒಂದು ಅಧಿಸೂಚನೆಯನ್ನು ಹೊರಡಿಸಿದೆ. ಲವಾಸ ಅವರು ಮಂಗಳವಾರದಂದು ರಾಷ್ಟ್ರಪತಿ ಭವನಕ್ಕೆ ತಮ್ಮ ರಾಜಿನಾಮೆ ಪತ್ರವನ್ನು ಕಳಿಸಿದ್ದರು.

ಲವಾಸ, ಇಷ್ಟರಲ್ಲೇ ಮುಖ್ಯ ಚುನಾವಣಾಧಿಕಾರಿ ಹುದ್ದೆಗೆ ಪದೋನ್ನತಿ ಹೊಂದುವವರಿದ್ದರು. ಆದರೆ, ಕೆಲವು ವಾರಗಳ ಹಿಂದೆ ಅವರಿಗೆ ಫಿಲಿಪೈನ್ಸ್​ನಲ್ಲಿ ನೆಲೆ ಹೊಂದಿರುವ ಏಷ್ಯನ್ ಅಭಿವೃದ್ಧಿ ಬ್ಯಾಂಕಿನ

(ಎಡಿಬಿ) ಉಪಾಧ್ಯಕ್ಷ ಸ್ಥಾನವನ್ನು ಆಫರ್ ಮಾಡಿದಾಗ ಅವರು ಒಪ್ಪಿಕೊಂಡು ಭಾರತೀಯ ನಾಗರಿಕ ಸೇವೆಗಳ ಅತ್ಯುನ್ನತ ಹುದ್ದೆಗಳಲ್ಲಿ ಒಂದಾಗಿರುವ ಮುಖ್ಯ ಚುನಾವಣಾಧಿಕಾರಿ ಹುದ್ದೆಗೆ ಬಡ್ತಿ ಹೊಂದುವ ಅವಕಾಶವನ್ನು ಕಡೆಗಾಣಿಸಿದರು. ಹೊಸ ಹುದ್ದೆಗೆ ಅವರು ಮುಂದಿನ ತಿಂಗಳು ಸೇರುವ ಸಾಧ್ಯತೆಯಿದೆ.

ಲವಾಸ ಚುನಾವಣಾ ಆಯೋಗದಲ್ಲೇ ಮುಂದುವರಿದಿದ್ದರೆ ಮುಖ್ಯ ಚುನಾವಣಾಧಿಕಾರಿಯಾಗಿ ಬಡ್ತಿ ಹೊಂದಿ ಅಕ್ಟೋಬರ್ 2022 ರಲ್ಲಿ ನಿವೃತ್ತರಾಗುತ್ತಿದ್ದರು. ಚುನಾವಣಾಧಿಕಾರಿಯಾಗಿ ನಿವೃತ್ತಿಗೆ ಮುನ್ನವೇ ಹುದ್ದೆಗೆ ರಾಜಿನಾಮೆ ಸಲ್ಲಿಸಿ ಆಯೋಗದಿಂದ ಹೊರನಡೆದ ಎರಡನೇ ಅಧಿಕಾರಿ ಲವಾಸ ಆಗಿರುತ್ತಾರೆ. ಇದಕ್ಕೂ ಮೊದಲು 1973ರಲ್ಲಿ ಮುಖ್ಯ ಚುನಾವಣಾಧಿಕಾರಿಯಾಗಿದ್ದ ನಾಗೇಂದ್ರ ಸಿಂಗ್ ಅವರು ಹೇಗ್​ನಲ್ಲಿರುವ ಅಂತರರಾಷ್ಟ್ರೀಯ ನ್ಯಾಯಾಲಯದ ಜಡ್ಜ್ಆಗಿ ನೇಮಕಗೊಂಡಿದ್ದರಿಂದ ಸಿಇಸಿ ಹುದ್ದೆಗೆ ರಾಜಿನಾಮೆ ಸಲ್ಲಿಸಿದ್ದರು.

ಕೊರೊನಾ ವೈರಸ್​ನ ಪಿಡುಗಿನ ಮಧ್ಯೆ ಬಿಹಾರನಲ್ಲಿ ವಿಧಾನಸಭಾ ಚುನಾವಣೆಗೆ ತಯಾರಿ ನಡೆಯುತ್ತಿರುವ ಸಂದರ್ಭದಲ್ಲಿ ಲವಾಸ ರಾಜಿನಾಮೆ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ