AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶೋಕ ಲವಾಸ ರಾಜಿನಾಮೆ ಅಂಗೀಕರಿಸಿದ ರಾಷ್ಟ್ರಪತಿ ಕೋವಿಂದ್

ಚುನಾವಣಾಧಿಕಾರಿ ಹುದ್ದೆಗೆ ಅಶೋಕ ಲವಾಸ ನೀಡಿದ ರಾಜೀನಾಮೆಯನ್ನು ರಾಷ್ಟ್ರಪತಿ ರಾಮ ನಾಥ್ ಕೊವಿಂದ್ ಅವರು ಅಂಗೀಕರಿಸಿದ್ದಾರೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲು ಈ ಕುರಿತು ಒಂದು ಅಧಿಸೂಚನೆಯನ್ನು ಹೊರಡಿಸಿದೆ. ಲವಾಸ ಅವರು ಮಂಗಳವಾರದಂದು ರಾಷ್ಟ್ರಪತಿ ಭವನಕ್ಕೆ ತಮ್ಮ ರಾಜಿನಾಮೆ ಪತ್ರವನ್ನು ಕಳಿಸಿದ್ದರು. ಲವಾಸ, ಇಷ್ಟರಲ್ಲೇ ಮುಖ್ಯ ಚುನಾವಣಾಧಿಕಾರಿ ಹುದ್ದೆಗೆ ಪದೋನ್ನತಿ ಹೊಂದುವವರಿದ್ದರು. ಆದರೆ, ಕೆಲವು ವಾರಗಳ ಹಿಂದೆ ಅವರಿಗೆ ಫಿಲಿಪೈನ್ಸ್​ನಲ್ಲಿ ನೆಲೆ ಹೊಂದಿರುವ ಏಷ್ಯನ್ ಅಭಿವೃದ್ಧಿ ಬ್ಯಾಂಕಿನ (ಎಡಿಬಿ) ಉಪಾಧ್ಯಕ್ಷ ಸ್ಥಾನವನ್ನು ಆಫರ್ ಮಾಡಿದಾಗ ಅವರು […]

ಅಶೋಕ ಲವಾಸ ರಾಜಿನಾಮೆ ಅಂಗೀಕರಿಸಿದ ರಾಷ್ಟ್ರಪತಿ ಕೋವಿಂದ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 19, 2020 | 3:02 PM

Share

ಚುನಾವಣಾಧಿಕಾರಿ ಹುದ್ದೆಗೆ ಅಶೋಕ ಲವಾಸ ನೀಡಿದ ರಾಜೀನಾಮೆಯನ್ನು ರಾಷ್ಟ್ರಪತಿ ರಾಮ ನಾಥ್ ಕೊವಿಂದ್ ಅವರು ಅಂಗೀಕರಿಸಿದ್ದಾರೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲು ಈ ಕುರಿತು ಒಂದು ಅಧಿಸೂಚನೆಯನ್ನು ಹೊರಡಿಸಿದೆ. ಲವಾಸ ಅವರು ಮಂಗಳವಾರದಂದು ರಾಷ್ಟ್ರಪತಿ ಭವನಕ್ಕೆ ತಮ್ಮ ರಾಜಿನಾಮೆ ಪತ್ರವನ್ನು ಕಳಿಸಿದ್ದರು.

ಲವಾಸ, ಇಷ್ಟರಲ್ಲೇ ಮುಖ್ಯ ಚುನಾವಣಾಧಿಕಾರಿ ಹುದ್ದೆಗೆ ಪದೋನ್ನತಿ ಹೊಂದುವವರಿದ್ದರು. ಆದರೆ, ಕೆಲವು ವಾರಗಳ ಹಿಂದೆ ಅವರಿಗೆ ಫಿಲಿಪೈನ್ಸ್​ನಲ್ಲಿ ನೆಲೆ ಹೊಂದಿರುವ ಏಷ್ಯನ್ ಅಭಿವೃದ್ಧಿ ಬ್ಯಾಂಕಿನ

(ಎಡಿಬಿ) ಉಪಾಧ್ಯಕ್ಷ ಸ್ಥಾನವನ್ನು ಆಫರ್ ಮಾಡಿದಾಗ ಅವರು ಒಪ್ಪಿಕೊಂಡು ಭಾರತೀಯ ನಾಗರಿಕ ಸೇವೆಗಳ ಅತ್ಯುನ್ನತ ಹುದ್ದೆಗಳಲ್ಲಿ ಒಂದಾಗಿರುವ ಮುಖ್ಯ ಚುನಾವಣಾಧಿಕಾರಿ ಹುದ್ದೆಗೆ ಬಡ್ತಿ ಹೊಂದುವ ಅವಕಾಶವನ್ನು ಕಡೆಗಾಣಿಸಿದರು. ಹೊಸ ಹುದ್ದೆಗೆ ಅವರು ಮುಂದಿನ ತಿಂಗಳು ಸೇರುವ ಸಾಧ್ಯತೆಯಿದೆ.

ಲವಾಸ ಚುನಾವಣಾ ಆಯೋಗದಲ್ಲೇ ಮುಂದುವರಿದಿದ್ದರೆ ಮುಖ್ಯ ಚುನಾವಣಾಧಿಕಾರಿಯಾಗಿ ಬಡ್ತಿ ಹೊಂದಿ ಅಕ್ಟೋಬರ್ 2022 ರಲ್ಲಿ ನಿವೃತ್ತರಾಗುತ್ತಿದ್ದರು. ಚುನಾವಣಾಧಿಕಾರಿಯಾಗಿ ನಿವೃತ್ತಿಗೆ ಮುನ್ನವೇ ಹುದ್ದೆಗೆ ರಾಜಿನಾಮೆ ಸಲ್ಲಿಸಿ ಆಯೋಗದಿಂದ ಹೊರನಡೆದ ಎರಡನೇ ಅಧಿಕಾರಿ ಲವಾಸ ಆಗಿರುತ್ತಾರೆ. ಇದಕ್ಕೂ ಮೊದಲು 1973ರಲ್ಲಿ ಮುಖ್ಯ ಚುನಾವಣಾಧಿಕಾರಿಯಾಗಿದ್ದ ನಾಗೇಂದ್ರ ಸಿಂಗ್ ಅವರು ಹೇಗ್​ನಲ್ಲಿರುವ ಅಂತರರಾಷ್ಟ್ರೀಯ ನ್ಯಾಯಾಲಯದ ಜಡ್ಜ್ಆಗಿ ನೇಮಕಗೊಂಡಿದ್ದರಿಂದ ಸಿಇಸಿ ಹುದ್ದೆಗೆ ರಾಜಿನಾಮೆ ಸಲ್ಲಿಸಿದ್ದರು.

ಕೊರೊನಾ ವೈರಸ್​ನ ಪಿಡುಗಿನ ಮಧ್ಯೆ ಬಿಹಾರನಲ್ಲಿ ವಿಧಾನಸಭಾ ಚುನಾವಣೆಗೆ ತಯಾರಿ ನಡೆಯುತ್ತಿರುವ ಸಂದರ್ಭದಲ್ಲಿ ಲವಾಸ ರಾಜಿನಾಮೆ ಸಲ್ಲಿಸಿದ್ದಾರೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್