AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶೋಕ ಲವಾಸ ರಾಜಿನಾಮೆ ಅಂಗೀಕರಿಸಿದ ರಾಷ್ಟ್ರಪತಿ ಕೋವಿಂದ್

ಚುನಾವಣಾಧಿಕಾರಿ ಹುದ್ದೆಗೆ ಅಶೋಕ ಲವಾಸ ನೀಡಿದ ರಾಜೀನಾಮೆಯನ್ನು ರಾಷ್ಟ್ರಪತಿ ರಾಮ ನಾಥ್ ಕೊವಿಂದ್ ಅವರು ಅಂಗೀಕರಿಸಿದ್ದಾರೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲು ಈ ಕುರಿತು ಒಂದು ಅಧಿಸೂಚನೆಯನ್ನು ಹೊರಡಿಸಿದೆ. ಲವಾಸ ಅವರು ಮಂಗಳವಾರದಂದು ರಾಷ್ಟ್ರಪತಿ ಭವನಕ್ಕೆ ತಮ್ಮ ರಾಜಿನಾಮೆ ಪತ್ರವನ್ನು ಕಳಿಸಿದ್ದರು. ಲವಾಸ, ಇಷ್ಟರಲ್ಲೇ ಮುಖ್ಯ ಚುನಾವಣಾಧಿಕಾರಿ ಹುದ್ದೆಗೆ ಪದೋನ್ನತಿ ಹೊಂದುವವರಿದ್ದರು. ಆದರೆ, ಕೆಲವು ವಾರಗಳ ಹಿಂದೆ ಅವರಿಗೆ ಫಿಲಿಪೈನ್ಸ್​ನಲ್ಲಿ ನೆಲೆ ಹೊಂದಿರುವ ಏಷ್ಯನ್ ಅಭಿವೃದ್ಧಿ ಬ್ಯಾಂಕಿನ (ಎಡಿಬಿ) ಉಪಾಧ್ಯಕ್ಷ ಸ್ಥಾನವನ್ನು ಆಫರ್ ಮಾಡಿದಾಗ ಅವರು […]

ಅಶೋಕ ಲವಾಸ ರಾಜಿನಾಮೆ ಅಂಗೀಕರಿಸಿದ ರಾಷ್ಟ್ರಪತಿ ಕೋವಿಂದ್
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 19, 2020 | 3:02 PM

Share

ಚುನಾವಣಾಧಿಕಾರಿ ಹುದ್ದೆಗೆ ಅಶೋಕ ಲವಾಸ ನೀಡಿದ ರಾಜೀನಾಮೆಯನ್ನು ರಾಷ್ಟ್ರಪತಿ ರಾಮ ನಾಥ್ ಕೊವಿಂದ್ ಅವರು ಅಂಗೀಕರಿಸಿದ್ದಾರೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲು ಈ ಕುರಿತು ಒಂದು ಅಧಿಸೂಚನೆಯನ್ನು ಹೊರಡಿಸಿದೆ. ಲವಾಸ ಅವರು ಮಂಗಳವಾರದಂದು ರಾಷ್ಟ್ರಪತಿ ಭವನಕ್ಕೆ ತಮ್ಮ ರಾಜಿನಾಮೆ ಪತ್ರವನ್ನು ಕಳಿಸಿದ್ದರು.

ಲವಾಸ, ಇಷ್ಟರಲ್ಲೇ ಮುಖ್ಯ ಚುನಾವಣಾಧಿಕಾರಿ ಹುದ್ದೆಗೆ ಪದೋನ್ನತಿ ಹೊಂದುವವರಿದ್ದರು. ಆದರೆ, ಕೆಲವು ವಾರಗಳ ಹಿಂದೆ ಅವರಿಗೆ ಫಿಲಿಪೈನ್ಸ್​ನಲ್ಲಿ ನೆಲೆ ಹೊಂದಿರುವ ಏಷ್ಯನ್ ಅಭಿವೃದ್ಧಿ ಬ್ಯಾಂಕಿನ

(ಎಡಿಬಿ) ಉಪಾಧ್ಯಕ್ಷ ಸ್ಥಾನವನ್ನು ಆಫರ್ ಮಾಡಿದಾಗ ಅವರು ಒಪ್ಪಿಕೊಂಡು ಭಾರತೀಯ ನಾಗರಿಕ ಸೇವೆಗಳ ಅತ್ಯುನ್ನತ ಹುದ್ದೆಗಳಲ್ಲಿ ಒಂದಾಗಿರುವ ಮುಖ್ಯ ಚುನಾವಣಾಧಿಕಾರಿ ಹುದ್ದೆಗೆ ಬಡ್ತಿ ಹೊಂದುವ ಅವಕಾಶವನ್ನು ಕಡೆಗಾಣಿಸಿದರು. ಹೊಸ ಹುದ್ದೆಗೆ ಅವರು ಮುಂದಿನ ತಿಂಗಳು ಸೇರುವ ಸಾಧ್ಯತೆಯಿದೆ.

ಲವಾಸ ಚುನಾವಣಾ ಆಯೋಗದಲ್ಲೇ ಮುಂದುವರಿದಿದ್ದರೆ ಮುಖ್ಯ ಚುನಾವಣಾಧಿಕಾರಿಯಾಗಿ ಬಡ್ತಿ ಹೊಂದಿ ಅಕ್ಟೋಬರ್ 2022 ರಲ್ಲಿ ನಿವೃತ್ತರಾಗುತ್ತಿದ್ದರು. ಚುನಾವಣಾಧಿಕಾರಿಯಾಗಿ ನಿವೃತ್ತಿಗೆ ಮುನ್ನವೇ ಹುದ್ದೆಗೆ ರಾಜಿನಾಮೆ ಸಲ್ಲಿಸಿ ಆಯೋಗದಿಂದ ಹೊರನಡೆದ ಎರಡನೇ ಅಧಿಕಾರಿ ಲವಾಸ ಆಗಿರುತ್ತಾರೆ. ಇದಕ್ಕೂ ಮೊದಲು 1973ರಲ್ಲಿ ಮುಖ್ಯ ಚುನಾವಣಾಧಿಕಾರಿಯಾಗಿದ್ದ ನಾಗೇಂದ್ರ ಸಿಂಗ್ ಅವರು ಹೇಗ್​ನಲ್ಲಿರುವ ಅಂತರರಾಷ್ಟ್ರೀಯ ನ್ಯಾಯಾಲಯದ ಜಡ್ಜ್ಆಗಿ ನೇಮಕಗೊಂಡಿದ್ದರಿಂದ ಸಿಇಸಿ ಹುದ್ದೆಗೆ ರಾಜಿನಾಮೆ ಸಲ್ಲಿಸಿದ್ದರು.

ಕೊರೊನಾ ವೈರಸ್​ನ ಪಿಡುಗಿನ ಮಧ್ಯೆ ಬಿಹಾರನಲ್ಲಿ ವಿಧಾನಸಭಾ ಚುನಾವಣೆಗೆ ತಯಾರಿ ನಡೆಯುತ್ತಿರುವ ಸಂದರ್ಭದಲ್ಲಿ ಲವಾಸ ರಾಜಿನಾಮೆ ಸಲ್ಲಿಸಿದ್ದಾರೆ.

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್