AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶೋಕ ಲವಾಸ ರಾಜಿನಾಮೆ ಅಂಗೀಕರಿಸಿದ ರಾಷ್ಟ್ರಪತಿ ಕೋವಿಂದ್

ಚುನಾವಣಾಧಿಕಾರಿ ಹುದ್ದೆಗೆ ಅಶೋಕ ಲವಾಸ ನೀಡಿದ ರಾಜೀನಾಮೆಯನ್ನು ರಾಷ್ಟ್ರಪತಿ ರಾಮ ನಾಥ್ ಕೊವಿಂದ್ ಅವರು ಅಂಗೀಕರಿಸಿದ್ದಾರೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲು ಈ ಕುರಿತು ಒಂದು ಅಧಿಸೂಚನೆಯನ್ನು ಹೊರಡಿಸಿದೆ. ಲವಾಸ ಅವರು ಮಂಗಳವಾರದಂದು ರಾಷ್ಟ್ರಪತಿ ಭವನಕ್ಕೆ ತಮ್ಮ ರಾಜಿನಾಮೆ ಪತ್ರವನ್ನು ಕಳಿಸಿದ್ದರು. ಲವಾಸ, ಇಷ್ಟರಲ್ಲೇ ಮುಖ್ಯ ಚುನಾವಣಾಧಿಕಾರಿ ಹುದ್ದೆಗೆ ಪದೋನ್ನತಿ ಹೊಂದುವವರಿದ್ದರು. ಆದರೆ, ಕೆಲವು ವಾರಗಳ ಹಿಂದೆ ಅವರಿಗೆ ಫಿಲಿಪೈನ್ಸ್​ನಲ್ಲಿ ನೆಲೆ ಹೊಂದಿರುವ ಏಷ್ಯನ್ ಅಭಿವೃದ್ಧಿ ಬ್ಯಾಂಕಿನ (ಎಡಿಬಿ) ಉಪಾಧ್ಯಕ್ಷ ಸ್ಥಾನವನ್ನು ಆಫರ್ ಮಾಡಿದಾಗ ಅವರು […]

ಅಶೋಕ ಲವಾಸ ರಾಜಿನಾಮೆ ಅಂಗೀಕರಿಸಿದ ರಾಷ್ಟ್ರಪತಿ ಕೋವಿಂದ್
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 19, 2020 | 3:02 PM

Share

ಚುನಾವಣಾಧಿಕಾರಿ ಹುದ್ದೆಗೆ ಅಶೋಕ ಲವಾಸ ನೀಡಿದ ರಾಜೀನಾಮೆಯನ್ನು ರಾಷ್ಟ್ರಪತಿ ರಾಮ ನಾಥ್ ಕೊವಿಂದ್ ಅವರು ಅಂಗೀಕರಿಸಿದ್ದಾರೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲು ಈ ಕುರಿತು ಒಂದು ಅಧಿಸೂಚನೆಯನ್ನು ಹೊರಡಿಸಿದೆ. ಲವಾಸ ಅವರು ಮಂಗಳವಾರದಂದು ರಾಷ್ಟ್ರಪತಿ ಭವನಕ್ಕೆ ತಮ್ಮ ರಾಜಿನಾಮೆ ಪತ್ರವನ್ನು ಕಳಿಸಿದ್ದರು.

ಲವಾಸ, ಇಷ್ಟರಲ್ಲೇ ಮುಖ್ಯ ಚುನಾವಣಾಧಿಕಾರಿ ಹುದ್ದೆಗೆ ಪದೋನ್ನತಿ ಹೊಂದುವವರಿದ್ದರು. ಆದರೆ, ಕೆಲವು ವಾರಗಳ ಹಿಂದೆ ಅವರಿಗೆ ಫಿಲಿಪೈನ್ಸ್​ನಲ್ಲಿ ನೆಲೆ ಹೊಂದಿರುವ ಏಷ್ಯನ್ ಅಭಿವೃದ್ಧಿ ಬ್ಯಾಂಕಿನ

(ಎಡಿಬಿ) ಉಪಾಧ್ಯಕ್ಷ ಸ್ಥಾನವನ್ನು ಆಫರ್ ಮಾಡಿದಾಗ ಅವರು ಒಪ್ಪಿಕೊಂಡು ಭಾರತೀಯ ನಾಗರಿಕ ಸೇವೆಗಳ ಅತ್ಯುನ್ನತ ಹುದ್ದೆಗಳಲ್ಲಿ ಒಂದಾಗಿರುವ ಮುಖ್ಯ ಚುನಾವಣಾಧಿಕಾರಿ ಹುದ್ದೆಗೆ ಬಡ್ತಿ ಹೊಂದುವ ಅವಕಾಶವನ್ನು ಕಡೆಗಾಣಿಸಿದರು. ಹೊಸ ಹುದ್ದೆಗೆ ಅವರು ಮುಂದಿನ ತಿಂಗಳು ಸೇರುವ ಸಾಧ್ಯತೆಯಿದೆ.

ಲವಾಸ ಚುನಾವಣಾ ಆಯೋಗದಲ್ಲೇ ಮುಂದುವರಿದಿದ್ದರೆ ಮುಖ್ಯ ಚುನಾವಣಾಧಿಕಾರಿಯಾಗಿ ಬಡ್ತಿ ಹೊಂದಿ ಅಕ್ಟೋಬರ್ 2022 ರಲ್ಲಿ ನಿವೃತ್ತರಾಗುತ್ತಿದ್ದರು. ಚುನಾವಣಾಧಿಕಾರಿಯಾಗಿ ನಿವೃತ್ತಿಗೆ ಮುನ್ನವೇ ಹುದ್ದೆಗೆ ರಾಜಿನಾಮೆ ಸಲ್ಲಿಸಿ ಆಯೋಗದಿಂದ ಹೊರನಡೆದ ಎರಡನೇ ಅಧಿಕಾರಿ ಲವಾಸ ಆಗಿರುತ್ತಾರೆ. ಇದಕ್ಕೂ ಮೊದಲು 1973ರಲ್ಲಿ ಮುಖ್ಯ ಚುನಾವಣಾಧಿಕಾರಿಯಾಗಿದ್ದ ನಾಗೇಂದ್ರ ಸಿಂಗ್ ಅವರು ಹೇಗ್​ನಲ್ಲಿರುವ ಅಂತರರಾಷ್ಟ್ರೀಯ ನ್ಯಾಯಾಲಯದ ಜಡ್ಜ್ಆಗಿ ನೇಮಕಗೊಂಡಿದ್ದರಿಂದ ಸಿಇಸಿ ಹುದ್ದೆಗೆ ರಾಜಿನಾಮೆ ಸಲ್ಲಿಸಿದ್ದರು.

ಕೊರೊನಾ ವೈರಸ್​ನ ಪಿಡುಗಿನ ಮಧ್ಯೆ ಬಿಹಾರನಲ್ಲಿ ವಿಧಾನಸಭಾ ಚುನಾವಣೆಗೆ ತಯಾರಿ ನಡೆಯುತ್ತಿರುವ ಸಂದರ್ಭದಲ್ಲಿ ಲವಾಸ ರಾಜಿನಾಮೆ ಸಲ್ಲಿಸಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!