AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ರಾಷ್ಟ್ರಪತಿಗೆ ಮಾಡಿದ ಅವಮಾನ: ದೀದಿ ಸರ್ಕಾರ ಎಲ್ಲಾ ಮಿತಿಗಳನ್ನು ಮೀರಿದೆ ಎಂದ ಪ್ರಧಾನಿ ಮೋದಿ

ಸಿಲಿಗುರಿಯಲ್ಲಿ ನಡೆದ ಸ್ಯಾಂತಾಲ್ ಸಮ್ಮೇಳನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆದ ಕಹಿ ಅನುಭವದ ಬಗ್ಗೆ ಪ್ರಧಾನಿ ಮೋದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವೇದಿಕೆ ಬದಲಾವಣೆ, ಮಮತಾ ಬ್ಯಾನರ್ಜಿ ಗೈರುಹಾಜರಿ ಬಗ್ಗೆ ಮುರ್ಮು ಅಸಮಾಧಾನ ವ್ಯಕ್ತಪಡಿಸಿದ್ದರು. ಇದು ಬುಡಕಟ್ಟು ಸಮುದಾಯಕ್ಕೆ ಮಾಡಿದ ಅವಮಾನ ಎಂದು ಮೋದಿ ಟಿಎಂಸಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ, ಇದು ಪಶ್ಚಿಮ ಬಂಗಾಳ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.

ಇದು ರಾಷ್ಟ್ರಪತಿಗೆ ಮಾಡಿದ ಅವಮಾನ: ದೀದಿ ಸರ್ಕಾರ ಎಲ್ಲಾ ಮಿತಿಗಳನ್ನು ಮೀರಿದೆ ಎಂದ ಪ್ರಧಾನಿ ಮೋದಿ
ಮಮತಾ, ಮೋದಿ, ರಾಷ್ಟ್ರಪತಿ
ಅಕ್ಷಯ್​ ಪಲ್ಲಮಜಲು​​
|

Updated on:Mar 07, 2026 | 10:41 PM

Share

ಪಶ್ಚಿಮ ಬಂಗಾಳ, ಮಾ.7: ಸಿಲಿಗುರಿ ಸಮೀಪದ ಬಿಧಾನ್ನಗರದಲ್ಲಿ ಆಯೋಜಿಸಲಾಗಿದ್ದ 9ನೇ ಅಂತರಾಷ್ಟ್ರೀಯ ಸ್ಯಾಂತಾಲ್ (Santal) ಸಮ್ಮೇಳನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಉಂಟಾದ ಕಹಿ ಅನುಭವದ ಕುರಿತು ಪ್ರಧಾನಿ ಮೋದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಮ್ಮೇಳನದ ವೇದಿಕೆಯನ್ನು ಕೊನೆಯ ಕ್ಷಣದಲ್ಲಿ ಸಣ್ಣ ಜಾಗಕ್ಕೆ ಬದಲಾಯಿಸಿದ್ದಕ್ಕೆ ರಾಷ್ಟ್ರಪತಿಗಳು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದರು. “ಸ್ಯಾಂತಾಲ್ ಸಮುದಾಯವು ಒಗ್ಗೂಡುವುದು ಯಾರಿಗೋ ಇಷ್ಟವಿಲ್ಲದಂತಿದೆ” ಎಂದು ಅವರು ಮಾರ್ಮಿಕವಾಗಿ ನುಡಿದರು.

ದೇಶದ ಪ್ರಥಮ ಪ್ರಜೆ ರಾಜ್ಯಕ್ಕೆ ಭೇಟಿ ನೀಡಿದಾಗ ಮುಖ್ಯಮಂತ್ರಿಗಳು ಸ್ವಾಗತಿಸುವುದು ಸಂಪ್ರದಾಯ. ಆದರೆ ಮಮತಾ ಬ್ಯಾನರ್ಜಿ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದನ್ನು ರಾಷ್ಟ್ರಪತಿಗಳು ಪ್ರಶ್ನಿಸಿದ್ದಾರೆ. ಈ ಕುರಿತು ಎಕ್ಸ್ (ಟ್ವಿಟರ್) ನಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ, “ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರವು ಎಲ್ಲಾ ಮಿತಿಗಳನ್ನು ಮೀರಿದೆ. ಆದಿವಾಸಿ ಸಮುದಾಯದಿಂದ ಬಂದಿರುವ ರಾಷ್ಟ್ರಪತಿಗಳಿಗೆ ಮಾಡಿರುವ ಈ ಅವಮಾನವು ಪ್ರತಿಯೊಬ್ಬ ಭಾರತೀಯನಿಗೂ ನೋವು ತಂದಿದೆ” ಎಂದು ಕಿಡಿಕಾರಿದ್ದಾರೆ.

ಬುಡಕಟ್ಟು ಸಂಸ್ಕೃತಿಯನ್ನು ಪಶ್ಚಿಮ ಬಂಗಾಳ ಸರ್ಕಾರವು ಅತ್ಯಂತ ನಿರ್ಲಕ್ಷ್ಯದಿಂದ ಕಾಣುತ್ತಿದೆ ಎಂದು ಮೋದಿ ಆರೋಪಿಸಿದ್ದಾರೆ. ಇನ್ನು 2026ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಈ ಘಟನೆ ನಡೆದಿದೆ. ತಮಿಳುನಾಡು ರಾಜ್ಯಪಾಲರಾಗಿದ್ದ ಆರ್.ಎನ್. ರವಿ ಅವರನ್ನು ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲರನ್ನಾಗಿ ನೇಮಿಸಿರುವುದು ಕೂಡ ಟಿಎಂಸಿ ಮತ್ತು ಕೇಂದ್ರದ ನಡುವಿನ ಸಂಘರ್ಷಕ್ಕೆ ತುಪ್ಪ ಸುರಿದಂತಿದೆ.

ಇದನ್ನೂ ಓದಿ: ಮಮತಾ ನನ್ನ ಮೇಲೆ ಕೋಪಗೊಂಡಿದ್ದಾರೋ ಏನೋ..ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರ

ಬಿಜೆಪಿ ರಾಷ್ಟ್ರಪತಿ ಭವನವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದು, ಮಣಿಪುರದಂತಹ ಘಟನೆಗಳು ನಡೆದಾಗ ರಾಷ್ಟ್ರಪತಿಗಳು ಏಕೆ ಮೌನವಾಗಿದ್ದರು ಎಂದು ಪ್ರಶ್ನಿಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:09 pm, Sat, 7 March 26

Follow Us
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?